ಸೋನಿಯಾ ಗಾಂಧಿ ಅವರು ದಾಖಲಾಗಿರುವ ದೆಹಲಿಯ ಗಂಗಾರಾಮ್ ಆಸ್ಪತ್ರೆ 
ದೇಶ

ಸೋನಿಯಾ ಪಡೆಯುತ್ತಿರುವುದು ಕಿಮೋಥೆರಪಿ ಚಿಕಿತ್ಸೆಯೇ?

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನಿಜಕ್ಕೂ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆಯೇ..

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ನಿಜಕ್ಕೂ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆಯೇ ಅಥವಾ ಅವರಿಗೆ ಅದಕ್ಕಿಂತಲೂ ಗಂಭೀರವಾದ ಕಾಯಿಲೆ ಇದೆಯೇ?

ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ದೆಹಲಿಯ ಗಂಗಾರಾಮ್ ಆಸ್ಪತ್ರೆಯಲ್ಲಿ ಕಿಮೋಥೆರಪಿ ಮಾಡಿಸಿಕೊಳ್ಳುತ್ತಿದ್ದಾರೆ ಎಂಬ ಅಚ್ಚರಿಯ ವಿಚಾರವನ್ನು ತೆಹಲ್ಕಾ ಬಹಿರಂಗಪಡಿಸಿದೆ. ಇದಕ್ಕೆ ಪುಷ್ಟ ನೀಡುವಂತೆ 2011ರಲ್ಲಿ ಅಮೆರಿಕದಲ್ಲಿ ಸೋನಿಯಾರಿಗೆ ಶಸ್ತ್ರಚಿಕಿತ್ಸೆ ಮಾಡಿದ್ದ ಭಾರತೀಯ-ಅಮೆರಿಕನ್ ವೈದ್ಯ ದತ್ತಾತ್ರೇಯ ನೋರಿ ಅವರು ದಿಢೀರನೆ ದೆಹಲಿಗೆ ಆಗಮಿಸಿದ್ದಾರೆ.

ಗುರುವಾರ ಸಂಜೆ ಸೋನಿಯಾ ಅವರು ಆಸ್ಪತ್ರೆಗೆ ದಾಖಲಾಗುತ್ತಿದ್ದಂತೆ ಡಾ.ನೋರಿ ಅವರು ಗಂಗಾರಾಮ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಇವರು ನ್ಯೂಯಾರ್ಕ್‌ನ ಮೆಮೋರಿಯಲ್ ಸ್ಲೋನ್ ಕೆಟರಿಂಗ್ ಕ್ಯಾನ್ಸರ್ ಸೆಂಟರ್‌ನ ಪ್ರಮುಖ ವೈದ್ಯರಲ್ಲಿ ಇವರೂ ಒಬ್ಬರಾಗಿದ್ದು, ಕ್ಯಾನ್ಸರ್ ಚಿಕಿತ್ಸೆಯಲ್ಲಿ ಎತ್ತಿದ ಕೈ. ಶುಕ್ರವಾರ ಬೆಳ್ಳಂಬೆಳ್ಳಗ್ಗೆಯೇ ಗಂಗಾರಾಮ್ ಆಸ್ಪತ್ರೆಯ ಆವರಣದಲ್ಲಿ ಮಾಧ್ಯಮಗಳ ದಂಡೇ ನೆರೆದಿತ್ತು.

ಆದರೆ ಆಸ್ಪತ್ರೆಯ ಅಧಿಕಾರಿಗಳು ಹಾಗೂ ಕಾಂಗ್ರೆಸ್ ಮುಖಂಡರು ಮಾತ್ರ ಸೋನಿಯಾ ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದು, ಅವರು ಕಿಮೋಥೆರಪಿ ಚಿಕಿತ್ಸೆ ಪಡೆಯುತ್ತಿರುವುದನ್ನು ಮರೆಮಾಚಿದ್ದಾರೆ ಎಂದೂ ತೆಹಲ್ಕಾ ವರದಿಯಲ್ಲಿ ತಿಳಿಸಿದೆ. 2011ರಲ್ಲಿ ವಿದೇಶದಲ್ಲಿ ಸೋನಿಯಾ ಚಿಕಿತ್ಸೆ ಪಡೆದ ಸಂದರ್ಭದಲ್ಲೇ ಅವರ ಆರೋಗ್ಯದ ಬಗ್ಗೆ ಅಂತೆಕಂತೆಗಳು ಹುಟ್ಟಿದ್ದವು. ಆದರೆ ಎಲ್ಲ ಊಹಾಪೋಹಗಳನ್ನು ತಳ್ಳಿಹಾಕಿದ್ದ ಕಾಂಗ್ರೆಸ್, ಇದು ಸೋನಿಯಾರ ವೈಯುಕ್ತಿಕ ವಿಚಾರ ಎನ್ನುವು ಮೂಲಕ ಮೌನ ತಳೆದಿತ್ತು.

ಸೋನಿಯಾ ಚೇತರಿಕೆ
ನವದೆಹಲಿ:
ಶ್ವಾಸನಾಳದ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿರುವ ಸೋನಿಯಾ ಆರೋಗ್ಯದಲ್ಲಿ ಸ್ಥಿರತೆ ಕಂಡುಬಂದಿದ್ದು, ನಿಧಾನವಾಗಿ ಅವರು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ರಾಷ್ಟ್ರಪತಿ ಡಿಸ್ಚಾರ್ಜ್
ಆ್ಯಂಜಿಯೋಪ್ಲಾಸ್ಟಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT