ರಾಜಸ್ಧಾನ ಬಿಜೆಪಿ ಶಾಸಕ ಭವಾನಿ ಸಿಂಗ್ ರಜಾವತ್ 
ದೇಶ

ಮತಹಾಕದಿದ್ದಲ್ಲಿ ಎತ್ತಂಗಡಿ: ರಾಜಸ್ಥಾನ ಬಿಜೆಪಿ ಶಾಸಕನ ಧಮ್ಕಿ ದೃಶ್ಯ

ಅಕ್ರಮವಾಗಿ ನಿರ್ಮಿಸಲ್ಪಟ್ಟಿರುವ ಮನೆಗಳನ್ನು ಧ್ವಂಸಗೊಳಿಸುವುದಾಗಿ ಮತದಾರರಿಗೆ ಧಮ್ಕಿ...

ಕೊಟ್ಟಾ: ರಾಜಸ್ಥಾನದಲ್ಲಿ ಬಿಜೆಪಿ ಶಾಸಕನೊಬ್ಬ ಮತ ಹಾಕುವಂತೆ, ಮತದಾರರಿಗೆ ಬೆದರಿಕೆ ಹಾಕುತ್ತಿದ್ದ ದೃಶ್ಯ, ಇದೀಗ ತೀವ್ರ ಚರ್ಚೆಗೆ ಕಾರಣವಾಗಿದೆ.

ರಾಜಸ್ಧಾನದ ಕೊಟ್ಟಾ ತಾಲೂಕಿನ ಲಾತ್‌ಪುರ ಕ್ಷೇತ್ರದ ಬಿಜೆಪಿ ಶಾಸಕ ಭವಾನಿ ಸಿಂಗ್ ರಜಾವತ್, ಕಳೆದ ತಿಂಗಳು ರಾಜಸ್ಥಾನದಲ್ಲಿ ನಡೆದಿದ್ದ ಕಾರ್ಪೋರೇಷನ್ ಚುನಾವಣೆ ವೇಳೆ, ಮತದಾರರಿಗೆ ಮತ ಚಲಾಯಿಸುವಂತೆ ಬೆದರಿಕೆ ಹಾಕುತ್ತಿದ್ದ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಬಾರಿ ಸುದ್ದಿ ಮಾಡುತ್ತಿದೆ.

ಆ ದೃಶ್ಯದಲ್ಲಿ ಭವಾನಿ ಸಿಂಗ್, ಬಿಜೆಪಿಗೆ ಮತ ಚಲಾಯಿಸದಿದ್ದಲ್ಲಿ ಈ ಪ್ರದೇಶದಲ್ಲಿ ಅಕ್ರಮವಾಗಿ ನಿರ್ಮಿಸಲ್ಪಟ್ಟಿರುವ ಮನೆಗಳನ್ನು ಧ್ವಂಸಗೊಳಿಸುವುದಾಗಿ ಮತದಾರರಿಗೆ ಧಮ್ಕಿ ಹಾಕುತ್ತಿದ್ದಾರೆ.

ಈ ದೃಶ್ಯದ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಭವಾನಿ ಸಿಂಗ್, ನಾನು ಯಾರಿಗೂ ಬೆದರಿಕೆ ಒಡ್ಡಿಲ್ಲ. ನಾನು ಬಡಜನರ ಅಭಿವೃದ್ದಿಯನ್ನು ಬಯಸುವವನು. ಈ ಪ್ರದೇಶದಲ್ಲಿ ವಾಸಿಸಲು ಈ ಜನರಿಗೆ ನಾನೇ ಸಹಾಯ ಮಾಡಿದ್ದೆನು. ಈ ಪ್ರದೇಶದ ಮತ್ತಷ್ಟು ಅಭಿವೃದ್ದಿಗಾಗಿ ಬಿಜೆಪಿಗೆ ಮತ ಹಾಕಿ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದೆನು ಎಂದು ರಾಗ ಬದಲಿಸಿದ್ದಾರೆ.

ಈ ಹಿಂದೆ ಬಿಜೆಪಿ ಶಾಸಕ ಪ್ರಹ್ಲಾದ್ ಗುಂಜಾಲ್, ತಮಗೆ ಪರಿಚಯಸ್ಧ ದಾದಿಯೊಬ್ಬರಿಗೆ ವರ್ಗಾವಣಿ ಮಾಡಿಕೊಡುವಂತೆ ಹಿರಿಯ ಅಧಿಕಾರಿಗಳಿಗೆ ಧಮ್ಕಿ ಹಾಕಿದ್ದ ಆಡಿಯೋ ರೆಕಾರ್ಡಿಂಗ್ ಬಾರಿ ಚರ್ಚೆಗೆ ಕಾರಣವಾಗಿತ್ತು. ಆ ಸುದ್ದಿ ಮಾಸುವ ಮುನ್ನವೇ ಮತ್ತೊಬ್ಬ ಬಿಜೆಪಿ ಶಾಸಕರ ಧಮ್ಕಿ ದೃಶ್ಯ ಸುದ್ದಿಯಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT