ಹಣಕಾಸು ಸಚಿವ ಅರುಣ್ ಜೇಟ್ಲಿ 
ದೇಶ

ವಿಮಾ ವಿಧೇಯಕಕ್ಕೆ ಮೇಲ್ಮನೆ ಗದ್ದಲ ಅಡ್ಡಿ

ವಿಮಾ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆ ಹಚ್ಚಿಸುವ ವಿಧೇಯಕದ...

ನವದೆಹಲಿ: ವಿಮಾ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆ ಹಚ್ಚಿಸುವ ವಿಧೇಯಕದ ಅಂಗೀಕಾರಕ್ಕೆ ರಾಜ್ಯಸಭೆಯಲ್ಲಿ ಪ್ರತಿ ಪಕ್ಷಗಳ ಗದ್ದಲವೇ ಅಡ್ಡಿಯಾಗಿದೆ. ಪ್ರತಿಪಕ್ಷಗಳ ಇಂಥ ವರ್ತನೆ ಮಹತ್ವದ ವಿಧೇಯಕವೊಂದು ಅಂಗೀಕಾರವಾಗುವುದನ್ನು ತಡೆಯಲು ನಾವು ಬಿಡುವುದಿಲ್ಲ ಎಂದು ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ.

ವಿಮಾ ಕ್ಷೇತ್ರದಲ್ಲಿ ಎಫ್‌ಡಿಐ ಮಿತಿಯನ್ನು ಶೇ.26ರಿಂದ ಶೇ.49ಕ್ಕೇರಿಸುವ ವಿಧೇಯಕಕ್ಕೆ ಸಂಸತ್ತಿನ ಸ್ಥಾಯಿ ಸಮಿತಿ ಮತ್ತು ರಾಜ್ಯ ಸಭೆಯ ಸಂಸದೀಯ ಸಮಿತಿ ಈಗಾಗಲೇ ಒಪ್ಪಿದೆ. ಇಷ್ಟಾದರೂ ಮೇಲ್ಮನೆಯಲ್ಲಿ ಈ ವಿಧೇಯಕ ಸಂಸತ್ತಿನಲ್ಲಿ ಮಂಡನೆಯಾಗದಂತೆ ನೋಡಿಕೊಳ್ಳಲಾಗುತ್ತಿದೆ.

ಪ್ರತಿಪಕ್ಷಗಳ ಈ ರೀತಿಯ ವರ್ತನೆ ಬಹು ಸಂಖ್ಯಾತರ ಬೆಂಬಲವಿರುವ ಸುಧಾರಣೆಯೊಂದಕ್ಕೆ ಅಡ್ಡಿಯಾಗುತ್ತಿದೆ ಎಂದು ಫಿಕ್ಕಿಯ ಕಾರ್ಯಕ್ರಮವೊಂದರಲ್ಲಿ ಜೇಟ್ಲಿ ಶನಿವಾರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ರೀತಿಯ ರಾಜಕೀಯ ಅಡ್ಡಿಗಳನ್ನು ಮಣಿಸಲು ಸಂವಿಧಾನ ವ್ಯವಸ್ಥೆಯಲ್ಲೇ ಅವಕಾಶ ಇದೆ. ಇನ್ನಷ್ಟು ರಾಜ್ಯಗಳಲ್ಲಿ ವಿಧಾನಸಭೆ ಚುನಾವಣೆ ಮುಗಿಯುತ್ತಿದ್ದಂತೆ ಈ ರೀತಿಯ ಅಡೆತಡೆಗಳು ತನ್ನಷ್ಟಕ್ಕೆ ನಿವಾರಣೆಯಾಗುತ್ತವೆ ಎಂದು ಹಣಕಾಸು ಸಚಿವ ಹೇಳಿದ್ದಾರೆ. ಈ ಮೂಲಕ ವಿಧಾನಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳ ಆಡಳಿತವಿರುವೆಡೆ ರಾಜ್ಯಗಳಲ್ಲಿ ಭಾರಿ ಸೋಲು ಕಾದಿದೆ ಎನ್ನುವ ಸಂದೇಶವನ್ನು ಜೇಟ್ಲಿ ರವಾನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

SCROLL FOR NEXT