ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ 
ದೇಶ

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಗೆ ಭಾರತ ರತ್ನ ಪ್ರಶಸ್ತಿ?

ದೇಶದ ಅತ್ಯುನ್ನತ ಪ್ರಶಸ್ತಿ ಭಾರತ ರತ್ನ ಪ್ರಶಸ್ತಿಯನ್ನು ಪಡೆಯಲು ವಾಜಪೇಯಿ ಅರ್ಹ ವ್ಯಕ್ತಿ...

ನವದೆಹಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಭಾರತ ರತ್ನ ಕೊಡಬೇಕೆಂದು, ಬಿಜೆಪಿ ಭೀಷ್ಮ ಎಲ್.ಕೆ.ಆಡ್ವಾಣಿ ಮನವಿ ಮಾಡಿದ್ದಾರೆ.

ಭಾರತ ರತ್ನ ಪ್ರಶಸ್ತಿಯನ್ನು ಅಟಲ್ ಬಿಹಾರಿ ವಾಜಪೇಯಿ ದೇಶಕ್ಕೆ ನೀಡಿರುವ ಕೊಡುಗೆಯೊಂದಿಗೆ, ಅವರ ದೇಶ ಭಕ್ತಿಗೆಯನ್ನು ಪರಿಗಣಿಸಿ ಪ್ರಶಸ್ತಿಗೆ ಶಿಫಾರಸು ಮಾಡಬೇಕು ಎಂದು ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದ ವೇಳೆ ತಿಳಿಸಿದ್ದಾರೆ.

ಡಿಸೆಂಬರ್ 25 ವಾಜಪೇಯಿ ಹುಟ್ಟಿದ ದಿನಾಂಕವನ್ನು ಕೇಂದ್ರ ಸರ್ಕಾರ ಉತ್ತಮ ಆಡಳಿತ ದಿನವಾಗಿ ಆಚರಣೆ ಮಾಡಲು ನಿರ್ಧರಿಸಿದೆ. ಅಂದೇ ಈ ಪ್ರಶಸ್ತಿ ನೀಡುವ ಕುರಿತು ನಿರ್ಧಾರವಾಗಲಿದೆ ಎಂದು ಆಡ್ವಾಣಿ ಸುಳಿವು ನೀಡಿದ್ದಾರೆ.

ಅಟಲ್ ಬಿಹಾರಿ ವಾಜಪೇಯಿ ಅವರು, ದೇಶಭಕ್ತ, ಉತ್ತಮ ಆಡಳಿತಗಾರನಾಗಿದ್ದು ಹಲವು ವಿಶೇಷತೆಗಳಿಂದ ಕೂಡಿದ ಮಹಾನ್ ಚೇತನರಾಗಿದ್ದಾರೆ. ಆದ್ದರಿಂದ ದೇಶದ ಅತ್ಯುನ್ನತ ಪ್ರಶಸ್ತಿ ಭಾರತ ರತ್ನ ಪ್ರಶಸ್ತಿಯನ್ನು ಪಡೆಯಲು ಅವರು ಅರ್ಹ ವ್ಯಕ್ತಿಯಾಗಿದ್ದಾರೆ ಎಂದು ಅವರನ್ನು ಆಡ್ವಾಣಿ ಶ್ಲಾಘಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನೀವೇನ್ ಮುಚ್ಚೋದು ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ- ಇರಾನ್ ಗೆ ಟ್ರಂಪ್ ಶಾಕ್!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ; Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ, Turkey ಬೇಸ್ತು!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್, KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

IPL 2026: ಬಟ್ಲರ್ 14,000 ರನ್ ದಾಖಲೆ; ಮಿಂಚಿದ ಶುಭ್ಮನ್ ಗಿಲ್, ಪ್ರಸಿದ್ಧ್ ಕೃಷ್ಣ; LSG ವಿರುದ್ಧ GT ಗೆಲುವು!

US-Iran ಶಾಂತಿ ಮಾತುಕತೆ ವಿಫಲ ಬೆನ್ನಲ್ಲೇ Pakistanಗೆ ಜಾಕ್‌ಪಾಟ್‌: ಕತಾರ್, ಸೌದಿಯಿಂದ 5 ಬಿಲಿಯನ್ ಡಾಲರ್ ಆರ್ಥಿಕ ನೆರವು!

SCROLL FOR NEXT