ಪ್ರವೀಣ್ ತೊಗಾಡಿಯಾ 
ದೇಶ

ಭಾರತದಲ್ಲಿ ಹಿಂದೂಗಳ ಸಂಖ್ಯೆ ಶೇ. 100ಕ್ಕೆ ಹೆಚ್ಚಿಸುವುದೇ ನಮ್ಮ ಗುರಿ: ತೊಗಾಡಿಯಾ

ಭೋಪಾಲ್: ಭಾರತ ಹಿಂದೂ ರಾಷ್ಟ್ರ ಎಂದು ಹೇಳಿದ್ದ ರಾಷ್ಟ್ರೀಯ ಸ್ವಯಂಸೇವಾ ಸಂಘಟನೆ ಮುಖ್ಯಸ್ಥ ಮೋಹನ್ ಭಾಗವತ್ ಅವರ ಮಾತುಗಳನ್ನು ವಿಶ್ವ ಹಿಂದೂ ಪರಿಷತ್ ವೇದವಾಕ್ಯವಾಗಿ ಪರಿಗಣಿಸಿದೆ ಎಂದು ವಿಹಿಂಪ ಮುಖಂಡ ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ.

ಭಾರತವನ್ನು ಸಂಪೂರ್ಣವಾಗಿ ಹಿಂದೂ ರಾಷ್ಟ್ರವನ್ನಾಗಿ ಮಾಡುವುದೇ ತಮ್ಮ ಗುರಿ ಎಂದು ತೊಗಾಡಿಯಾ ನುಡಿದಿದ್ದಾರೆ. ಭಾರತದಲ್ಲಿ ಶೇ. 100ರಷ್ಟು ಹಿಂದೂಗಳು ಇರುವಂತೆ ಮಾಡುತ್ತೇವೆ. ಸದ್ಯ ಭಾರತದಲ್ಲಿ ಹಿಂದೂಗಳ ಪ್ರಮಾಣ ಶೇ. 82ರಷ್ಟಿದೆ ಎಂದರು.

ಈ ಅಂಕಿ ಅಂಶಗಳನ್ನು ಎರಿಸುತ್ತೇವೆ ಹೊರತು ಯಾವುದೇ ಕಾರಣಕ್ಕೂ ಕುಗ್ಗಲು ಬಿಡುವುದಿಲ್ಲ ಎಂದು ತೊಗಾಡಿಯಾ, ಹಿಂದೂಗಳು ಈ ದೇಶದಲ್ಲಿ ಅಲ್ಪಸಂಖ್ಯಾತರಾಗುವುದನ್ನು ನಾವು ಸಹಿಸುವುದಿಲ್ಲ ಎಂದು ವಿಶ್ವ ಹಿಂದೂ ಪರಿಷತ್‌ನ ಅಂತಾರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಪ್ರವೀಣ್ ತೊಗಾಡಿಯಾ ಶಪಥ ಮಾಡಿದ್ದಾರೆ.

ಹಣ ಮತ್ತಿತರ ಪ್ರಲೋಭನೆ, ಆಮಿಷಗಳನ್ನೊಡ್ಡಿ ಹಿಂದೂಗಳನ್ನು ಮತಾಂತರ ಮಾಡುತ್ತಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ತೊಗಾಡಿಯಾ, ಈ ದೇಶದಲ್ಲಿರುವ ಪ್ರತಿಯೊಬ್ಬ ಹಿಂದೂವಿಗೂ ಭದ್ರತೆ ನೀಡಲು ಬದ್ಧವಾಗಿದ್ದೇವೆ ಎಂದರು. ಅಲ್ಲದೆ, ಹಿಂದೂ ಧರ್ಮದಲ್ಲಿ ಅನಿಷ್ಟವಾಗಿ ಕಾಡುತ್ತಿರುವ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡುವುದು ಸಂಘಟನೆಯ ಗುರಿ ಎಂದು ತೊಗಾಡಿಯಾ ಹೇಳಿದ್ದಾರೆ.

ಉಭಯ ಸದನಗಳಲ್ಲಿ ಮತಾಂತರ ಕುರಿತಂತೆ ವಿಪಕ್ಷಗಳು ಗದ್ದಲವೆಬ್ಬಿಸಿ ಕಲಾಪಕ್ಕೆ ಅಡ್ಡಿಪಡಿಸುತ್ತಿದ್ದರೆ. ಆರ್‌ಎಸ್‌ಎಸ್ ಹಾಗೂ ವಿಶ್ವ ಹಿಂದೂ ಪರಿಷತ್ ಮತಾಂತರವನ್ನು ಮಾಡಿ ತೀರುತ್ತೇವೆ ಎಂಬ ಹೇಳಿಕೆಗಳನ್ನು ನೀಡುತ್ತಿರುವುದು ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ನೂಂಗಲಾರದ ಬಿಸಿ ತುಪ್ಪವಾಗಿ ಪರಿಣಮಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT