ನಿರ್ದೇಶಕ ಕೆ ಬಾಲಚಂದರ್ 
ದೇಶ

ಖ್ಯಾತ ನಿರ್ದೇಶಕ ಕೆ ಬಾಲಚಂದರ್ ನಿಧನ

ಖ್ಯಾತ ಚಿತ್ರ ನಿರ್ದೇಶಕ ಕೆ ಬಾಲಚಂದರ್ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

ಚೆನ್ನೈ: ಖ್ಯಾತ ಚಿತ್ರ ನಿರ್ದೇಶಕ ಕೆ ಬಾಲಚಂದರ್ ಅವರು ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು.

ತಮಿಳು ಮತ್ತು ತೆಲುಗು ಚಿತ್ರರಂಗದ ಖ್ಯಾತ ಹಿರಿಯ ನಿರ್ದೇಶಕ ಕೆ ಬಾಲಚಂದರ್ ಅವರು ವಿಧಿವಶರಾಗಿದ್ದಾರೆ. ವಯೋಸಹಜ ಖಾಯಿಲೆಗಳಿಂದ ಬಳಲುತ್ತಿದ್ದ ಬಾಲಚಂದರ್ ಅವರನ್ನು ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ವಾರದ ಹಿಂದೆ ಚಿಕಿತ್ಸೆ ಚೆನ್ನಾಗಿಯೇ ಪ್ರತಿಕ್ರಿಯಿಸಿದ್ದ ಬಾಲಚಂದರ್ ಅವರನ್ನು ತುರ್ತು ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿತ್ತು.

ಆದರೆ ಇಂದು ಸಂಜೆ ಸುಮಾರು 6.40ರಲ್ಲಿ ಅವರಿಗೆ ತೀವ್ರ ಹೃದಯಾಘಾತವಾಗಿದ್ದು, ಸಂಜೆ 7 ಗಂಟೆ ಸುಮಾರಿನಲ್ಲಿ ಅವರು ನಿಧನರಾಗಿದ್ದಾರೆ ಎಂದು ಮೂಲಗಳ ತಿಳಿಸಿವೆ.  ಬಾಲಚಂದರ್ ಅವರ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದ್ದು, ರಜನಿಕಾಂತ್, ಖುಷ್ಬು, ಕಮಲ್ ಹಾಸನ್ ಸೇರಿದಂತೆ ಚಿತ್ರರಂಗದ ಹಲವು ಗಣ್ಯರು ಆಸ್ಪತ್ರೆಯತ್ತ ದೌಡಾಯಿಸಿದ್ದಾರೆ.

ಬಾಲಚಂದರ್ ಅವರಿಗೆ ಇಬ್ಬರು ಪುತ್ರರು ಮತ್ತು ಓರ್ವ ಪುತ್ರಿ ಇದ್ದು, ಈ ಪೈಕಿ ಹಿರಿಯ ಮಗ ಕೈಲಾಸಂ ಕೆಲ ತಿಂಗಳ ಹಿಂದಷ್ಟೇ ನಿಧನರಾಗಿದ್ದರು. ಅವರ ಎರಡನೇ ಪುತ್ರ ಪ್ರಸನ್ನ ಮತ್ತು ಪುತ್ರಿ ಚೆನ್ನೈನಲ್ಲಿ ವಾಸಿಸುತ್ತಿದ್ದಾರೆ.

ತಮಿಳು, ತೆಲುಗು. ಮಲಯಾಳಂ, ಹಿಂದಿ ಮತ್ತು ಕನ್ನಡ ಭಾಷೆಗಳಲ್ಲಿ ಸುಮಾರು 100ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದ ಬಾಲಚಂದರ್ ಅವರು, ದಕ್ಷಿಣ ಭಾರತದ ಖ್ಯಾತ ನಟರಾದ ರಜನಿಕಾಂತ್, ಕಮಲ್ ಹಾಸನ್, ಕನ್ನಡದ ರಮೇಶ್ ಅರವಿಂದ್ ಮತ್ತು ಪ್ರಕಾಶ್ ರೈರನ್ನು ಚಿತ್ರರಂಗಕ್ಕೆ ಪರಿಚಯಿಸಿದ್ದರು.

ಜೆಮಿನಿ ಗಣೇಶನ್, ಎಂ.ಜಿ.ರಾಮಚಂದ್ರನ್, ರಾಜೇಶ್ ಖನ್ನಾ, ಸಾಹುಕಾರ್ ಜಾನಕಿ, ಶ್ರೀದೇವಿ, ಶಿವಾಜಿ ಗಣೇಶನ್, ಚಿರಂಜೀವಿ, ಲಕ್ಷ್ಮಿ, ಶಿವಕುಮಾರ್, ಮಮ್ಮೂಟಿಯಂತ ದೊಡ್ಡ ದೊಡ್ಡ ಕಲಾವಿದರಿಗೆ ಆಕ್ಷನ್ ಕಟ್ ಹೇಳಿದ ಖ್ಯಾತಿ ಕೆ.ಬಾಲಚಂದರ್ ರದ್ದು. ಐದು ದಶಕಗಳ ತಮ್ಮ ಸುದೀರ್ಘ ಸಿನಿಪಯಣದಲ್ಲಿ 9 ರಾಷ್ಟ್ರ ಪ್ರಶಸ್ತಿ, ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಮತ್ತು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯನ್ನ ಮುಡಿಗೇರಿಸಿಕೊಂಡಿದ್ದಾರೆ.

ಕೆ.ಬಾಲಚಂದರ್ ನಿರ್ದೇಶನದ ಬ್ಲಾಕ್ ಬಸ್ಟರ್ ಚಿತ್ರಗಳ ಪಟ್ಟಿ -
1964 - ದೈವ ತಾಯೈ
1975 - ಅಪೂರ್ವ ರಾಗಂಗಳ್
1975 - ಮನ್ಮಧ ಲೀಲೈ
1976 - ಅಥುಲೇನಿ ಕಥಾ
1976 - ಮೂನ್ಡ್ರು ಮುಡಿಚು
1978 - ಮರೋ ಚರಿತ್ರ
1978 - ತಪ್ಪು ತಾಳಂಗಳ್
1978 - ತಪ್ಪಿದ ತಾಳ
1979 - ಅಂದಮೈನ ಅನುಭವಂ
1979 - ಇದಿ ಕಥ ಕಾದು
1982 - ಬೆಂಕಿಯಲ್ಲಿ ಅರಳಿದ ಹೂವು
1985 - ಮುಗಿಲ ಮಲ್ಲಿಗೆ
1986 - ಸುಂದರ ಸ್ವಪ್ನಗಳು
2006 - ಪೋಯಿ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT