ದೇಶ

ಆ್ಯಸಿಡ್ ದಾಳಿ: ಶಿಸ್ತು ಕ್ರಮಕ್ಕೆ ಮುಂದಾಯ್ತು ಕೇಂದ್ರ

ಇತ್ತೀಚೆಗಷ್ಟೇ ದೆಹಲಿಯಲ್ಲಿ ಮಹಿಳಾ ವೈದ್ಯರ ಮೇಲೆ ನಡೆದ ಆ್ಯಸಿಡ್ ದಾಳಿಯಿಂದಾಗಿ ಎಚ್ಚೆತ್ತುಕೊಂಡಿರುವ...

ನವದೆಹಲಿ: ಇತ್ತೀಚೆಗಷ್ಟೇ ದೆಹಲಿಯಲ್ಲಿ ಮಹಿಳಾ ವೈದ್ಯರ ಮೇಲೆ ನಡೆದ ಆ್ಯಸಿಡ್ ದಾಳಿಯಿಂದಾಗಿ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ ಶಿಸ್ತು ಕ್ರಮಕ್ಕೆ ಮುಂದಾಗಿದೆ.

ದೇಶದಲ್ಲಿ ಎಲ್ಲೆಂದರಲ್ಲಿ ಸಿಗುತ್ತಿದ್ದ ಆ್ಯಸಿಡ್ ಮಾರಾಟಕ್ಕೆ ಕಡಿವಾಣ ಹೇರಲು ಕೇಂದ್ರ ಸರ್ಕಾರ ಮುಂದಾಗಿದ್ದು, ಈ ಸಂಬಂಧ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಆ್ಯಸಿಡ್ ಮಾರಾಟ ಸಂಬಂಧ ರಚಿಸಲಾಗಿರುವ ಶಿಸ್ತು ಕ್ರಮ ನಿಯಮ ಜಾರಿಗೆ ಒಪ್ಪಿಗೆ ಸೂಚಿಸಿದ್ದಾರೆ.

ಮಾರುಕಟ್ಟೆಗಳಲ್ಲಿ ಬಹು ಸುಲಭವಾಗಿ ಆ್ಯಸಿಡ್ ಸಿಗುತ್ತಿದ್ದು, ಇದನ್ನು ಅನೇಕ ಕಿಡಿಗೇಡಿಗಳು ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಅದರಲ್ಲೂ ಇತ್ತೀಚೆಗೆ ಮಹಿಳೆಯರ ಮೇಲೆ ಆ್ಯಸಿಡ್ ದಾಳಿ ಹೆಚ್ಚಾಗುತ್ತಿದೆ.

ಇದನ್ನು ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆ್ಯಸಿಡ್ ಮಾರಾಟ ಕುರಿತು ಕ್ರಮ ಕೈಗೊಳ್ಳಲು ಮುಂದಾಗಿದೆ. ಆ್ಯಸಿಡ್ ತಯಾರಕ ಮತ್ತು ಮಾರಾಟಗಾರರಿಗೆ ಶಿಸ್ತು ಕ್ರಮ ಕುರಿತು ಹೊಸ ನಿಯಮವನ್ನು ಕೇಂದ್ರ ಸರ್ಕಾರ ಜಾರಿಗೆ ತಂದಿದೆ.

ಇನ್ನು ಮುಂದೆ ಆ್ಯಸಿಡ್ ಮಾರಾಟ ಮಾಡಬೇಕಾದರೆ, ಅನುಮತಿ ಪಡೆಯಬೇಕಿದೆ. ಅಲ್ಲದೇ, ಚಿಲ್ಲರೆ ವ್ಯಾಪಾರಿಗಳು ಮತ್ತು ದಾಸ್ತಾನುಗಾರರು ನೋಂದಣಿ ಮಾಡಿಕೊಳ್ಳಬೇಕಿದೆ. ಆ್ಯಸಿಡ್ ಮಾರಾಟ ಮಾಡುವವರು ಅನುಮತಿ ಪತ್ರ ಪಡೆಯಲು ತಮ್ಮ ಗುರುತಿನ ಚೀಟಿಯ ಪ್ರತಿಯನ್ನು ಕಡ್ಡಾಯವಾಗಿ ನೀಡಬೇಕಿದೆ.

ಆ್ಯಸಿಡ್ ದಾಳಿ ನಡೆಸಿದವರಿಗೆ, ಅಪರಾಧಕ್ಕನುಗುಣವಾಗಿ ಜೀವಾವಧಿ ಶಿಕ್ಷೆ ಅಥವಾ ಮರಣ ದಂಡನೆ ಶಿಕ್ಷೆ ನೀಡುವ ಕುರಿತು ಚಿಂತನೆ ನಡೆಸಲಾಗಿದೆ. ಸೆಕ್ಷನ್ 376ಎ-ಡಿ ಆಫ್ ಐಪಿಸಿ ಅಡಿಯಲ್ಲಿ ಬರುವ ಆ್ಯಸಿಡ್ ದಾಳಿ ಪ್ರಕರಣಗಳ ವಿಚಾರಣೆ 60 ದಿನಗಳೊಳಗೆ ಅಂತ್ಯಗೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.

ಆ್ಯಸಿಡ್ ದಾಳಿಗೆ ಒಳಗಾದವರಿಗೆ ಉಚಿತ ಚಿಕಿತ್ಸೆಗಾಗಿ ದಾಳಿಗೆ ಒಳಗಾದವರ ಕೇಂದ್ರ ಪರಿಹಾರ ನಿಧಿಯಿಂದ ಹಣ ಬಿಡುಗಡೆ ಮಾಡಲಾಗುತ್ತದೆ. ಸ್ವ ಉದ್ಯೋಗ ಅವಕಾಶ, ವಿವಿಧ ಉದ್ಯೋಗಗಳ ತರಬೇತಿ, ಮೀಸಲಾತಿ ಸೇರಿದಂತೆ ಇತರೆ ಸೌಲಭ್ಯಗಳನ್ನು ನೀಡಲಾಗುವುದು. ಅಲ್ಲದೇ ದಾಳಿಗೆ ತುತ್ತಾದವರಿಗೆ ಪುನರ್ವಸತಿ ಕೇಂದ್ರ ನಿರ್ಮಿಸಲಾಗುವುದು ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT