ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ 
ದೇಶ

'ನೌಕಾ ಪಡೆ ಹೆಲಿಕಾಪ್ಟರನ್ನು ನನ್ನ ಕುಟುಂಬದವರು ಬಳಸಲಿಲ್ಲ'

ಗೋವಾದ ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲರಾಗಿರುವ ಐರಸ್ ರೋಡ್ರಿಕ್ಸ್ ಆರೋಪ...

ನವದೆಹಲಿ: ಗೋವಾನಲ್ಲಿ ಆಯೋಜಿಸಿದ್ದ ಮದುವೆ ಕಾರ್ಯಕ್ರಮಕ್ಕೆ ತೆರಳಲು ಜೇಟ್ಲಿ ಕುಟುಂಬದವರು ನೌಕ ಪಡೆಯ ಹೆಲಿಕಾಪ್ಟರ್ನ್ನು ಬಳಿಸಿದ್ದರು ಎಂಬ ಆರೋಪವನ್ನು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ನಿರಾಕರಿಸಿದ್ದಾರೆ.

ಗೋವಾದ ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲರಾಗಿರುವ ಐರಸ್ ರೋಡ್ರಿಕ್ಸ್, ಈ ಕುರಿತು ಜೇಟ್ಲಿ ವಿರುದ್ಧ ಆರೋಪ ಮಾಡಿದ್ದರು.

ಕಳೆದ ಡಿ.23 ರಂದು ಗೋವಾನಲ್ಲಿ ನಡೆದಿದ್ದ ಮದುವೆ ಸಮಾರಂಭವೊಂದಕ್ಕೆ ತೆರಳಲು ಅರುಣ್ ಜೇಟ್ಲಿ ಅವರ ಪತ್ನಿ ಹಾಗೂ ಅವರ ಮಗಳು, ನೌಕಾ ಪಡೆಯ ಹೆಲಿಕಾಪ್ಟರನ್ನು ಸ್ವಂತ ಉದ್ದೇಶಕ್ಕಾಗಿ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿದ್ದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಅರುಣ್ ಜೇಟ್ಲಿ, ಆರೋಪವನ್ನು ನಿರಾಕರಿಸಿದರು.

ಮೊದಲಿಗೆ, ನೌಕಾ ಪಡೆಯ ಹೆಲಿಕಾಪ್ಟರನ್ನು  ನನ್ನ ಪತ್ನಿ ಮತ್ತು ಮಗಳು ಬಳಸಿಲ್ಲ. ಇವರಿಬ್ಬರು 23ನೇ ತಾರಿಖಿನಂದು ಗೋವಾದಲ್ಲಿ ಇದ್ದರು.

ಎರಡನೆಯದಾಗಿ, ನನ್ನ ಕುಟುಂಬದವರು ಯಾವುದೇ ಸರ್ಕಾರಿ ಸವಲತ್ತುಗಳನ್ನು ಉಪಯೋಗಿಸಿಕೊಳ್ಳದಿರುವಾಗ, ನೌಕಾ ಪಡೆಯ ಹೆಲಿಕಾಪ್ಟರನ್ನು ಹೇಗೆ ಬಳಸಲು ಸಾಧ್ಯ?

ಮೂರನೆಯದಾಗಿ, ಇದೊಂದು ಖಾಸಗಿ ಕಾರ್ಯಕ್ರಮವಾಗಿದ್ದರಿಂದ, ನನ್ನ ಕುಟುಂಬದವರು ಗೋವಾಗೆ ಬಂದಿದ್ದಾರೆ ಎಂಬುದು ರಕ್ಷಣಾ ಸಚಿವ ಪರಿಕ್ಕಾರ್ಗೆ ಸಹಾ ಈ ವಿಷಯ ಗೊತ್ತಿರಲಿಲ್ಲ ಎಂದು ಅವರು ಸ್ಪಷ್ಟನೆ ನೀಡಿದರು.

ಸಾಮಾಜಿಕ ಕಾರ್ಯಕರ್ತ ಹಾಗೂ ವಕೀಲರಾಗಿರುವ ಐರಸ್ ರೋಡ್ರಿಕ್ಸ್, ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಈ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT