ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ 
ದೇಶ

ಬೋಡೋ ಉಗ್ರರ ದಮನಕ್ಕೆ ಭೂತಾನ್ ನೆರವು ಕೇಳಿದ ಭಾರತ

: ಅಸ್ಸಾಂನ 3 ಜಿಲ್ಲೆಗಳಲ್ಲಿ ಸರಣಿ ಸ್ಪೋಟ ನಡೆಸಿ 78 ಮಂದಿಯ ಸಾವಿಗೆ ಕಾರಣರಾದ...

ನವದೆಹಲಿ: ಅಸ್ಸಾಂನ 3 ಜಿಲ್ಲೆಗಳಲ್ಲಿ ಸರಣಿ ಸ್ಪೋಟ ನಡೆಸಿ 78 ಮಂದಿಯ ಸಾವಿಗೆ ಕಾರಣರಾದ ಬೋಡೋ ಉಗ್ರರ ದಮನಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದು, ಇದಕ್ಕಾಗಿ ನೆರಯ ಭೂತಾನ್‌ನ ನೆರವು ಕೇಳಿದೆ.

11 ವರ್ಷಗಳ ಹಿಂದೆ ಉಲ್ಫಾ ಉಗ್ರರ ವಿರುದ್ಧ ನಡೆಸಿದ್ದಂಥ ಕಾರ್ಯಾಚರಣೆ ಈಗಲೂ ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ಉಲ್ಫಾ ಉಗ್ರರ ಸದೆಬಡಿಯುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭೂತಾನ್ ದೇಶದ ನೆರವು ಪಡೆಯುವ ಸಲುವಾಗಿ ಈಗಾಗಲೇ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಭೂತಾನ್ ಪ್ರಧಾನಮಂತ್ರಿ ಟಿಶೆರಿಂಗ್ ಟೋಬ್ಗಾಯ್‌ರೊಂದಿಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಬೋಡೋ ಉಗ್ರರ ಸಂಹಾರ ಕುರಿತಂತೆ ಸುಷ್ಮಾ ಸ್ವರಾಜ್ ಅವರು ಭೂತಾನ್ ಪ್ರಧಾನಮಂತ್ರಿಯೊಂದಿಗೆ ಉನ್ನತ ಮಟ್ಟದ ಮಾತುಕತೆ ನಡೆಸಿದ್ದು, ಬೆಂಬಲ ದೊರೆಯುವುದು ಬಹುತೇಕ ಖಚಿತವಾಗಿದೆ ಎಂದು ವಿದೇಶಾಂಗ ಸಚಿವಾಲಯ ವಕ್ತಾರ ಸೈಯದ್ ಅಕ್ಬರುದ್ದೀನ್ ತಿಳಿಸಿದ್ದಾರೆ.

ಉಗ್ರರ ದಾಳಿಗೆ ತುತ್ತಾದ ಮೂರು ಜಿಲ್ಲೆಗಳಿಗೆ ಗುರುವಾರ ಭೇಟಿ ನೀಡಿದ ರಾಜನಾಥ್‌ಸಿಂಗ್ ಅಲ್ಲಿನ ಪರಿಸ್ಥಿತಿ ಅವಲೋಕಿಸಿ, ಎನ್‌ಡಿಎಲ್‌ಬಿ ಉಗ್ರರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದರು. ಭಾರತ-ಭೂತಾನ್ ಗಡಿಯಲ್ಲಿ ತಮ್ಮ ನೆಲೆಗಳನ್ನು ಸ್ಥಾಪಿಸುವಲ್ಲಿ ಬೋಡೋ ಉಗ್ರರು ಯಶಸ್ವಿಯಾಗಿದ್ದು, ನಿಷೇಧಿತ ಬೋಡೋ ಉಗ್ರ ಸಂಘಟನೆಯನ್ನು ದಮನ ಮಾಡಲು ಭೂತಾನ್‌ನ ನೆರವು ಕೋರುವಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ರಾಜ್‌ನಾಥ್‌ಸಿಂಗ್ ಸೂಚಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

Ranji Trophy: ಚಂಡೀಗಢ ವಿರುದ್ಧ ಕರ್ನಾಟಕಕ್ಕೆ ಇನ್ನಿಂಗ್ಸ್ ಮತ್ತು 185 ರನ್ ಭರ್ಜರಿ ಜಯ

Ranji Trophy: ಒಂದೂ ರನ್ ನೀಡದೇ 5 ವಿಕೆಟ್.. Amit Shukla ಐತಿಹಾಸಿಕ ದಾಖಲೆ, IPL 2026 ಹರಾಜಿಗೆ ಭರ್ಜರಿ ಸಿದ್ಧತೆ!

'Glad Was In Audience': ಮತ್ತೆ ಪ್ರಧಾನಿಯನ್ನು ಹಾಡಿ ಹೊಗಳಿದ ಶಶಿ ತರೂರ್, ಗುಲಾಮ ಮನಸ್ಥಿತಿ ಕುರಿತ ಹೇಳಿಕೆ, ಕಾಂಗ್ರೆಸ್ ಕೆಂಡ!

ಟ್ರಾಫಿಕ್ ಪೊಲೀಸ್ ಆಗಿ ಕರ್ತವ್ಯ ನಿರ್ವಹಿಸಿದ ಸುರೇಶ್ ಕುಮಾರ್; ಅನುಭವ ಹಂಚಿಕೊಂಡ ಬಿಜೆಪಿ ಶಾಸಕ

SCROLL FOR NEXT