ಝಕಿ-ಉರ್ ರೆಹಮಾನ್ ಲಖ್ವಿ 
ದೇಶ

ಲಖ್ವಿಗೆ ಜಾಮೀನು ನೀಡಲು ಕಾನೂನು ಲೋಪದೋಷ ಕಾರಣ: ಪಾಕ್ ಕೋರ್ಟ್

ಮುಂಬೈ ದಾಳಿ ಸೂತ್ರಧಾರ, ಲಷ್ಕರ್-ಎ-ತೋಯ್ಬಾ ಮುಖ್ಯ ಕಮಾಂಡರ್ ಝಕಿ-ಉರ್ ರೆಹಮಾನ್ ಲಖ್ವಿಗೆ ಜಾಮೀನು..

ಇಸ್ಲಾಮಾಬಾದ್: ಮುಂಬೈ ದಾಳಿ ಸೂತ್ರಧಾರ, ಲಷ್ಕರ್-ಎ-ತೋಯ್ಬಾ ಮುಖ್ಯ ಕಮಾಂಡರ್ ಝಕಿ-ಉರ್ ರೆಹಮಾನ್ ಲಖ್ವಿಗೆ ಜಾಮೀನು ನೀಡಲು ಕಾನೂನಿನ ಲೋಪದೋಷಗಳೇ ಕಾರಣ ಎಂದು ಪಾಕಿಸ್ತಾನ ಉಗ್ರ ನಿಗ್ರಹ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಬಲ ಸಾಕ್ಷ್ಯಾಧಾರಗಳ ಕೊರತೆ ಹಾಗೂ ಎಫ್‌ಐಆರ್‌ನಲ್ಲಿ ಅಪ್ರಸ್ತುತ ಸೆಕ್ಸೆನ್‌ಗಳನ್ನು ದಾಖಲಿಸಿರುವುದು ಆರೋಪಿ ಲಖ್ವಿಗೆ ಜಾಮೀನು ನೀಡಲು ಪ್ರಮುಖ ಕಾರಣವಾಯಿತು. ಅಲ್ಲದೆ ಸಾಕ್ಷ್ಯಾಧಾರಗಳು ಆರೋಪಿಯ ಪರವಾಗಿವೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿರುವುದಾಗಿ ಶನಿವಾರ ಡಾನ್ ವರದಿ ಮಾಡಿದೆ.

ಮುಂಬೈ ದಾಳಿ ಪ್ರಕರಣದಲ್ಲಿ 2009ರಿಂದ ಜೈಲಿನಲ್ಲಿರುವ ಲಖ್ವಿಗೆ ಸಾಕ್ಷ್ಯಾಧಾರಗಳ ಕೊರೆತೆ ಆಧಾರದ ಮೇಲೆ ಭಯೋತ್ಪಾದನೆ ನಿಗ್ರಹ ನ್ಯಾಯಾಲಯ ಜಾಮೀನು ನೀಡಿತ್ತು. ಅದರಂತೆ ರಾವಲ್ಪಿಂಡಿಯ ಅಧಿಯಾಲ ಜೈಲಿನಿಂದ ಲಖ್ವಿ ಶುಕ್ರವಾರಿ ಬಿಡುಗಡೆಯಾಗಬೇಕಿತ್ತು. ಆದರೆ, ಇದರ ವಿರುದ್ಧ ಭಾರತ ಮಾತ್ರವಲ್ಲದೆ ಪಾಕ್‌ನೊಳಗೂ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಲಖ್ವಿಯನ್ನು ಸಾರ್ವಜನಿಕ ಸುವ್ಯವಸ್ಥೆ ಕಾಪಾಡಲು (ಎಂಪಿಒ) ಸರ್ಕಾರ ವಶಕ್ಕೆ ತೆಗೆದುಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT