ಝಕಿ-ಉರ್ ರೆಹಮಾನ್ ಲಖ್ವಿ 
ದೇಶ

ಲಖ್ವಿಗೆ ಜಾಮೀನು ನೀಡಲು ಕಾನೂನು ಲೋಪದೋಷ ಕಾರಣ: ಪಾಕ್ ಕೋರ್ಟ್

ಮುಂಬೈ ದಾಳಿ ಸೂತ್ರಧಾರ, ಲಷ್ಕರ್-ಎ-ತೋಯ್ಬಾ ಮುಖ್ಯ ಕಮಾಂಡರ್ ಝಕಿ-ಉರ್ ರೆಹಮಾನ್ ಲಖ್ವಿಗೆ ಜಾಮೀನು..

ಇಸ್ಲಾಮಾಬಾದ್: ಮುಂಬೈ ದಾಳಿ ಸೂತ್ರಧಾರ, ಲಷ್ಕರ್-ಎ-ತೋಯ್ಬಾ ಮುಖ್ಯ ಕಮಾಂಡರ್ ಝಕಿ-ಉರ್ ರೆಹಮಾನ್ ಲಖ್ವಿಗೆ ಜಾಮೀನು ನೀಡಲು ಕಾನೂನಿನ ಲೋಪದೋಷಗಳೇ ಕಾರಣ ಎಂದು ಪಾಕಿಸ್ತಾನ ಉಗ್ರ ನಿಗ್ರಹ ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ಪ್ರಬಲ ಸಾಕ್ಷ್ಯಾಧಾರಗಳ ಕೊರತೆ ಹಾಗೂ ಎಫ್‌ಐಆರ್‌ನಲ್ಲಿ ಅಪ್ರಸ್ತುತ ಸೆಕ್ಸೆನ್‌ಗಳನ್ನು ದಾಖಲಿಸಿರುವುದು ಆರೋಪಿ ಲಖ್ವಿಗೆ ಜಾಮೀನು ನೀಡಲು ಪ್ರಮುಖ ಕಾರಣವಾಯಿತು. ಅಲ್ಲದೆ ಸಾಕ್ಷ್ಯಾಧಾರಗಳು ಆರೋಪಿಯ ಪರವಾಗಿವೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ಹೇಳಿರುವುದಾಗಿ ಶನಿವಾರ ಡಾನ್ ವರದಿ ಮಾಡಿದೆ.

ಮುಂಬೈ ದಾಳಿ ಪ್ರಕರಣದಲ್ಲಿ 2009ರಿಂದ ಜೈಲಿನಲ್ಲಿರುವ ಲಖ್ವಿಗೆ ಸಾಕ್ಷ್ಯಾಧಾರಗಳ ಕೊರೆತೆ ಆಧಾರದ ಮೇಲೆ ಭಯೋತ್ಪಾದನೆ ನಿಗ್ರಹ ನ್ಯಾಯಾಲಯ ಜಾಮೀನು ನೀಡಿತ್ತು. ಅದರಂತೆ ರಾವಲ್ಪಿಂಡಿಯ ಅಧಿಯಾಲ ಜೈಲಿನಿಂದ ಲಖ್ವಿ ಶುಕ್ರವಾರಿ ಬಿಡುಗಡೆಯಾಗಬೇಕಿತ್ತು. ಆದರೆ, ಇದರ ವಿರುದ್ಧ ಭಾರತ ಮಾತ್ರವಲ್ಲದೆ ಪಾಕ್‌ನೊಳಗೂ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ ಲಖ್ವಿಯನ್ನು ಸಾರ್ವಜನಿಕ ಸುವ್ಯವಸ್ಥೆ ಕಾಪಾಡಲು (ಎಂಪಿಒ) ಸರ್ಕಾರ ವಶಕ್ಕೆ ತೆಗೆದುಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸುಬ್ಬಾರೆಡ್ಡಿ ಶಾಸಕ ಸ್ಥಾನ ಅಸಿಂಧು ಆದೇಶಕ್ಕೆ ಸುಪ್ರೀಂ ತಡೆ!

ಬೆಂಗಳೂರಿನಲ್ಲಿ ಸುಡು ಬಿಸಿಲು: 30 ಡಿಗ್ರಿ ಸೆ.ಗಿಂತ ಹೆಚ್ಚಿನ ಉಷ್ಣಾಂಶ ದಾಖಲು! ಆರೋಗ್ಯ ತಜ್ಞರು ಏನಂತಾರೆ?

ಕೋಲ್ಕತ್ತಾ: ಕೇಂದ್ರ ಸಚಿವ ಸುಕಾಂತ ಮಜುಂದಾರ್ ಭಾಷಣ ಮಾತನಾಡುತ್ತಿದ್ದಾಗ ಭೂಕಂಪ: ಅನುಭವ ಹೇಗಿತ್ತು ಗೊತ್ತಾ? Video ನೋಡಿ..

'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್-Video

Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ-Video

SCROLL FOR NEXT