ಜೆ.ಪಿ ನಡ್ಡಾ 
ದೇಶ

ಹಂದಿ ಜ್ವರ ಆಂತಕ ಬೇಡ: ಆರೋಗ್ಯ ಸಚಿವ ಜೆ.ಪಿ ನಡ್ಡಾ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಂದಿ ಜ್ವರದಿಂದ ಮಹಿಳೆಯೋರ್ವರು ಮೃತಪಟ್ಟಿರುವುದು ವರದಿಯಾಗಿದ್ದು ಇದೀಗ ದೆಹಲಿಯಲ್ಲಿ ಹಂದಿ ಜ್ವರ ಭೀತಿ ಎದುರಾಗಿದೆ.

ಹಂದಿ ಜ್ವರ ಭೀತಿ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಜೆ.ಪಿ ನಡ್ಡಾ ಅವರು, ದೆಹಲಿಯಲ್ಲಿನ 17 ಸರ್ಕಾರಿ ಆಸ್ಪತ್ರೆಗಳಲ್ಲಿ ಸಮರ್ಪಕ ವೈದ್ಯಕೀಯ ಸೌಲಭ್ಯಗಳು ದೊರೆಯುವುದರಿಂದ ಹಂದಿ ಜ್ವರದ ಬಗ್ಗೆ ದೆಹಲಿ ಜನತೆ ಆಂತಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಅಲ್ಲದೆ ಜನತೆ ಹಂದಿ ಜ್ವರ ರೋಗದ ಲಕ್ಷಣಗಳು ಕಂಡುಬಂದಲ್ಲಿ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷಿಸಿಕೊಳ್ಳಬಹುದು ಎಂದರು.

ಉತ್ತರಪ್ರದೇಶದ ಘಜಿಯಾಬಾದ್ ಆಸ್ಪತ್ರೆಯಲ್ಲಿ ಮಾರಣಾಂತಿಕ ರೋಗ್ಯದಿಂದ ಬಳಲುತ್ತಿದ್ದ 51 ವರ್ಷದ ಮಹಿಳೆಯೋರ್ವರನ್ನು ಡಿಸೆಂಬರ್ 21ರಂದು ದೆಹಲಿಯ ಶ್ರೀ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಮಹಿಳೆಯ ಕಳೆದ ಎರಡು ದಿನಗಳಿಂದ ಹಿಂದೆ ಮೃತಪಟ್ಟಿದ್ದರು ಎಂದು ಆಸ್ಪತ್ರೆಯ ಅಧಿಕಾರಿಗಲು ತಿಳಿಸಿದ್ದಾರೆ.

ಪ್ರಸಕ್ತ ವರ್ಷದಲ್ಲಿ ದೇಶಾದ್ಯಂತ ಹಂದಿ ಜ್ವರದಿಂದಾಗಿ 40 ಮಂದಿ ಮೃತಪಟ್ಟಿದ್ದಾರೆ. ಹೈದರಾಬಾದ್‌ನಲ್ಲಿ ಮೂವರು ಮೃತಪಟ್ಟಿದ್ದು 12ಕ್ಕೂ ಅಧಿಕ ಮಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ಪುಣೆ ಮತ್ತು ಇಂದೋರ್‌ನಲ್ಲೂ ಪ್ರಕರಣಗಳು ವರದಿಯಾಗಿವೆ.

ಚಳಿಗಾಳದಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವ ಹಂದಿ ಜ್ವರ ಗಂಟಲು ಸಮಸ್ಯೆಗಳಿಂದ ಶೂರುವಾಗುತ್ತದೆ. ಬಳಿಕ ಮೈ ಕೆರೆತ ಸುರುವಾಗುತ್ತದೆ. ಇದರಿಂದಾಗಿ ಜನತೆ ಹಂದಿ ಜ್ವರದಿಂದ ತಪ್ಪಿಸಿಕೊಳ್ಳಲು ಸುಚಿತ್ವವನ್ನು ಅಳವಡಿಸಿಕೊಳ್ಳಬೇಕು ಎಂಬ ಸಲಹೆಗಳನ್ನು ಆರೋಗ್ಯ ಇಲಾಖೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT