ಮರು ಮತಾಂತರ 
ದೇಶ

ವಿರೋಧದ ಮಧ್ಯೆ ಮರುಮತಾಂತರ

ಫತೇಗಡ/ಆಗ್ರಾ: ಉತ್ತರಪ್ರದೇಶದ ಆಗ್ರಾದಲ್ಲಿ 300 ಮಂದಿ ಮುಸ್ಲಿಮರು ಹಿಂದೂ ಧರ್ಮಕ್ಕೆ ಮರು ಮತಾಂತರವಾದದ್ದು ವಿವಾದಕ್ಕೆ ಕಾರಣವಾಗಿತ್ತು.

ಈ ಕಿಡಿ ಆರುವ ಮುನ್ನವೇ 12 ಮಂದಿ ಸದಸ್ಯರಿರುವ ಮುಸ್ಲಿಂ ಕುಟುಂಬ ಹಿಂದೂ ಧರ್ಮ ಸ್ವೀಕರಿಸಿದೆ. ಕ್ರಿಸ್‌ಮಸ್ ದಿನದಂದು ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಇದೇ ವೇಳೆ, ಒಡಿಶಾದಲ್ಲಿ ಶನಿವಾರ 80 ಮಂದಿ ಆದಿವಾಸಿಗಳನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಮಾಡಲಾಗಿದೆ.

ಅಕಾಲಿ ದಳ ವಿರೋಧ:
ದೇಶದೆಲ್ಲೆಡೆ ನಡೆಯುತ್ತಿರುವ ಮರುಮತಾಂತರಕ್ಕೆ ಎನ್‌ಡಿಎ ಮಿತ್ರಪಕ್ಷ ಶಿರೋಮಣಿ ಅಕಾಲಿದಳ(ಎಸ್‌ಎಡಿ)ವೂ ಅಪಸ್ವರ ಎತ್ತಿದೆ. ಮತಾಂತರವನ್ನು ದುರದೃಷ್ಟಕರ ಎಂದಿರುವ ಪಂಜಾಬ್ ಮುಖ್ಯಮಂತ್ರಿ ಪ್ರಕಾಶ್‌ಸಿಂಗ್ ಬಾದಲ್, ಬಲವಂತದ ಮತಾಂತರ ಸಿಖ್ ಧರ್ಮಕ್ಕೆ ವಿರುದ್ಧವಾದದ್ದು. ಇಂತಹುದನ್ನು ಧರ್ಮ ಯಾವತ್ತೂ ಒಪ್ಪಿಲ್ಲ ಎಂದೂ ಬಾದಲ್ ತಿಳಿಸಿದ್ದಾರೆ.

ಇದೇ ವೇಳೆ ಕೇರಳದಲ್ಲಿ ಘರ್ ವಾಪಸಿ ಕಾರ್ಯಕ್ರಮ ಮುಂದುವರಿಸುವುದಾಗಿ ವಿಶ್ವ ಹಿಂದೂ ಪರಿಷತ್ ಹೇಳಿದೆ. ಯಾರಿಗೆ ಹಿಂದೂ ಧರ್ಮದ ಬಗ್ಗೆ ಒಲವಿದೆಯೋ ಅವರಿಗೆ ತಮ್ಮ ಇಚ್ಛೆ ಪೂರೈಸಲು ಈ ಕಾರ್ಯಕ್ರಮ ನೆರವಾಗಲಿದೆ ಎಂದಿದೆ. ಜನವರಿ 1ರಂದು ಮತ್ತೊಂದು ತಂಡವನ್ನು ಹಿಂದೂ ಧರ್ಮಕ್ಕೆ ಮರು ಮತಾಂತರ ಮಾಡಲಾಗುವುದು ಎಂದು ವಿಹಿಂಪ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT