ಸೈಬರ್ ಕೆಫೆಯಲ್ಲಿ ವ್ಯಕ್ತಿಯ ಬಂಧನ 
ದೇಶ

ಬೆದರಿಕೆ ಇಮೇಲ್ ಸಂದೇಶ ಕಳುಹಿಸಿದ್ದ ವ್ಯಕ್ತಿಯ ಬಂಧನ

ಐಪಿ ವಿಳಾಸದ ಮೂಲಕ ಜೈಪುರದ ಸೈಬರ್ ಕೆಫೆಯೊಂದರಲ್ಲಿ ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿ...

ಜೈಪುರ: ರಾಜಸ್ಥಾನದಲ್ಲಿ ಭಯೋತ್ಪಾದನೆ ಕೃತ್ಯಗಳನ್ನು ನಡೆಸುವುದಾಗಿ ರಾಜಸ್ಥಾನ ಸಚಿವರಿಗೆ ಬೆದರಿಕೆ ಹಾಕಿದ್ದ ಆರೋಪಿಯನ್ನು ಭಯೋತ್ಪಾದಕ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ.

ಸುಶೀಲ್ ಚೌಧರಿ ಎಂಬಾತ ಇತ್ತೀಚೆಗಷ್ಟೇ ರಾಜಸ್ಥಾನದ 16 ಮಂದಿ ಸಚಿವರಿಗೆ, ರಾಜಸ್ಥಾನದಾದ್ಯಂತ ಭಯೋತ್ಪಾದಕ ಕೃತ್ಯಗಳನ್ನು ನಡೆಸುವುದಾಗಿ ಇಮೇಲ್ ಮೂಲಕ ಬೆದರಿಕೆ ಸಂದೇಶ ರವಾನಿಸಿದ್ದನು.

ಈ ಕುರಿತು ತನಿಖೆ ನಡೆಸಿದ ಭಯೋತ್ಪಾದಕ ನಿಗ್ರಹ ದಳ ಪೊಲೀಸರು, ಆರೋಪಿಗಾಗಿ ಜಾಲ ಬೀಸಿದ್ದರು. ಗೂಗಲ್ ಸಹಾಯದೊಂದಿಗೆ ಇಮೇಲ್ ಕಳುಹಿಸಿದ್ದ ಸಂದೇಶಕ್ಕೆ ಆತ ಬಳಸಿದ್ದ ಐಪಿ ವಿಳಾಸ ಪಡೆಯಲಾಗಿತ್ತು. ಐಪಿ ವಿಳಾಸದ ಮೂಲಕ ಜೈಪುರದ ಸೈಬರ್ ಕೆಫೆಯೊಂದರಲ್ಲಿ ಆತನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಆತ ಯಾವುದೇ ಭಯೋತ್ಪಾದಕ ಸಂಘಟನೆಗಳೊಂದಿಗೆ ನಂಟುಹೊಂದಿಲ್ಲ ಎಂಬುದು ಪ್ರಾಥಮಿಕ ವರದಿಯಿಂದ ತಿಳಿದುಬಂದಿದೆ.

ಭಯೋತ್ಪಾದಕ ಕೃತ್ಯ ನಡೆಸುವ ಕುರಿತು ಬೆದರಿಕೆ ಇಮೇಲ್ ಸಂದೇಶ ಕಳುಹಿಸಿದ್ದ ಹಿನ್ನಲೆಯಲ್ಲಿ ರಾಜಸ್ಥಾನದ್ಯಂತ ಪೊಲೀಸ್ ಇಲಾಖೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿತ್ತು. ಈತನ ಬಂಧನದ ಬಳಿಕ ಸಾರ್ವಜನಿಕರು ಇದೀಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT