ಸಾಂದರ್ಭಿಕ ಚಿತ್ರ 
ದೇಶ

ಅಕ್ರಮವಾಗಿ ಬಂಧೂಕು ತಯಾರಿಸುತ್ತಿದ್ದ ಕಾರ್ಖಾನೆ ಮೇಲೆ ದಾಳಿ

ನಕ್ಸಲರಿಗೆ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುತ್ತಿದ್ದ ಎಂದು ವಿಚಾರಣೆ ವೇಳೆ ತಿಳಿದು ಬಂತು...

ವಿಜಯವಾಡ: ವಿಜಯವಾಡದಲ್ಲಿ ಅಕ್ರಮವಾಗಿ ಬಂದೂಕುಗಳನ್ನು ತಯಾರಿಸುತ್ತಿದ್ದ ಕಾರ್ಖಾನೆಯ ಮೇಲೆ ಪೊಲೀಸರು ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಬಂಧೂಕುಗಳನ್ನು ವಶಪಡಿಸಿಕೊಂಡಿದ್ದು, ನಾಲ್ವರನ್ನು ಬಂಧಿಸಿದ್ದಾರೆ.

ಕಳೆದ ವಾರ ಅನುಮಾನಸ್ಪದ ರೀತಿಯಲ್ಲಿ ಓಡಾಡುತ್ತಿದ್ದ ಶರತ್ ರೆಡ್ಡಿ ಎಂಬಾತನನ್ನು ಗೋಧಾವರಿ ಪೊಲೀಸರು ಬಂಧಿಸಿದ್ದರು. ಶರತ್ ರೆಡ್ಡಿ, ಬಿ ಟೆಕ್ ಇಂಜಿನೀಯರಿಂಗ್ ಕಾಲೇಜು ವಿದ್ಯಾರ್ಥಿಯಾಗಿದ್ದು, ಈತ ನಕ್ಸಲರಿಗೆ ಶಸ್ತ್ರಾಸ್ತ್ರಗಳನ್ನು ಸರಬರಾಜು ಮಾಡುತ್ತಿದ್ದ ಎಂದು ವಿಚಾರಣೆ ವೇಳೆ ತಿಳಿದು ಬಂತು.

ಈತ ನೀಡಿದ ಮಾಹಿತಿ ಮೇರೆಗೆ ವಿಜಯವಾಡದ ಆಟೋ ನಗರದಲ್ಲಿರುವ ಲಕ್ಷ್ಮೀ ದುರ್ಗಾ ಇಂಜಿನೀಯರಿಂಗ್ ವರ್ಕ್ಸ್ ಕಾರ್ಖಾನೆ ಮೇಲೆ ಏಳೂರು ಪೊಲೀಸರು ದಾಳಿ ನಡೆಸಿದರು. ಈ ವೇಳೆ ಕಾರ್ಖಾನೆಯಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಬಂಧೂಕು, ಮದ್ದುಗುಂಡು ಸೇರಿದಂತೆ ಬಿಡಿ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಖಾನೆಯ ಕೆಲಸದಲ್ಲಿ ತೊಡಗಿದ್ದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.

ಈ ಸಂಬಂಧ ಏಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMC ಹೆಸರು, ಚಿಹ್ನೆ ಮುಟ್ಟುಗೋಲು: ಚುನಾವಣಾ ಆಯೋಗ ಆದೇಶಕ್ಕೆ ತೀವ್ರ ಆಕ್ರೋಶ; 'ಪ್ರತಿಭಟನೆಯೊಂದಿಗೆ' ಹೊಸ ಹೆಸರು, ಚಿಹ್ನೆ ಸಲ್ಲಿಸಿದ ಮಮತಾ ಬ್ಯಾನರ್ಜಿ!

TMC ಹೆಸರು, ಚಿಹ್ನೆ ಮುಟ್ಟುಗೋಲು: 'Vote chori, govt chori ಆಯ್ತು, ಈಗ ಪಾರ್ಟಿ ಚೋರಿ': ಚುನಾವಣಾ ಆಯೋಗದ ವಿರುದ್ಧ ರಾಹುಲ್ ಗಾಂಧಿ ಕಿಡಿ

ದಿಗ್ಬಂಧನ ಉಲ್ಲಂಘಿಸಿದ ಟ್ಯಾಂಕರ್‌ ಮೇಲೆ Iran ಭೀಕರ ದಾಳಿ: ಸಮುದ್ರ ಮಧ್ಯದಲ್ಲೇ ಹೊತ್ತಿ ಉರಿದ ಹಡಗು, Hormuz ಜಲಸಂಧಿಯಲ್ಲಿ ಹೆಚ್ಚಿದ ಉದ್ವಿಗ್ನತೆ..!

TMC ಪಕ್ಷದ ಹೆಸರು, ಚಿಹ್ನೆ ಫ್ರೀಜ್ ಮಾಡಿದ ಚುನಾವಣಾ ಆಯೋಗ: ಉಪಚುನಾವಣೆ ಹೊತ್ತಲ್ಲೇ ದೀದಿಗೆ ಶಾಕ್‌, ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಭಾರಿ ಸಂಚಲನ..!

ಸ್ಥಳೀಯ ಚುನಾವಣೆಗಳಿಗೆ ಕಾಂಗ್ರೆಸ್‌ ರಣತಂತ್ರ: ಜಿಲ್ಲಾಧ್ಯಕ್ಷರ ಕಾರ್ಯಕ್ಷಮತೆ ಮೇಲೆ ಹೈಕಮಾಂಡ್‌ ಕಣ್ಣು, ಬೂತ್‌ನಿಂದ ಜಿಲ್ಲಾ ಮಟ್ಟದವರೆಗೆ ಸಂಘಟನೆಗೆ ಸೂಚನೆ..!