ಜಾರ್ಖಂಡ್‌ ಮುಖ್ಯಮಂತ್ರಿಯಾಗಿ ರಘುಬರ್ ದಾಸ್ ಪ್ರಮಾಣ ವಚನ ಸ್ವೀಕಾರ 
ದೇಶ

ಜಾರ್ಖಂಡ್‌ನ ನೂತನ ಸಿಎಂ ಆಗಿ ರಘುಬರ್ ದಾಸ್ ಪ್ರಮಾಣ ವಚನ

10ನೇ ಮುಖ್ಯಮಂತ್ರಿಯಾಗಿ ರಘುಬರ್ ದಾಸ್‌ಗೆ ಪ್ರತಿಜ್ಞಾ ವಿಧಿ ಬೋಧಿಸಿದರು...

ರಾಂಚಿ: ಜಾರ್ಖಂಡ್‌ನಲ್ಲಿ ಪ್ರಪ್ರಥಮ ಬಾರಿಗೆ ಜನಾಂಗೇರತರ ಮುಖ್ಯಮಂತ್ರಿಯಾಗಿ ರಘುಬರ್ ದಾಸ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನಗರದ ಫುಟ್ಪಾಲ್ ಮೈದಾನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಸೈಯದ್ ಅಹಮ್ಮದ್, ಜಾರ್ಖಂಡ್‌ನ 10ನೇ ಮುಖ್ಯಮಂತ್ರಿಯಾಗಿ ರಘುಬರ್ ದಾಸ್‌ಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಇದೇ ವೇಳೆ ನಾಲ್ವರು ಶಾಸಕರು ನೂತನ ಸಚಿವರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದರು. ನಾಲ್ವರು ಶಾಸಕರ ಪೈಕಿ ಮೂವರು ಬಿಜೆಪಿ, ಹಾಗೂ ಮತ್ತೋರ್ವ ಜೆಡಿಎಸ್ ಶಾಸಕರಾಗಿದ್ದಾರೆ.

ನೀಲಕಂಠ ಸಿಂಗ್ ಮುಂಡಾ-ಜಾರ್ಖಂಡ್‌ನ ಖೂಂಟಿ ಕ್ಷೇತ್ರದ ಬಿಜೆಪಿ ಶಾಸಕ, ಸಿ.ಪಿ.ಸಿಂಗ್ ಜಾರ್ಖಂಡ್‌ನ ರಾಂಚಿ ಕ್ಷೇತ್ರದ ಬಿಜೆಪಿ ಶಾಸಕ, ಲೂಯಿಸಿ ಮರಾಂಡಿ- ದಮ್ಕಾ ಕ್ಷೇತ್ರದ ಬಿಜೆಪಿ ಶಾಸಕ, ಚಂದ್ರ ಪ್ರಕಾಶ್ ಚೌಧರಿ-ರಾಮಘಡ ಕ್ಷೇತ್ರದ ಜೆಡಿಎಸ್ ಶಾಸಕ.

ಸಮಾರಂಭದಲ್ಲಿ ಸಚಿವ ವೆಂಕಯ್ಯ ನಾಯ್ಡು, ನಿತಿನ್ ಗಡ್ಕರಿ, ಛತ್ತಿಸ್‌ಘಡದ ಮುಖ್ಯಮಂತ್ರಿ ರಮಣ್‌ಸಿಂಗ್, ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನಾವಿಸ್ ಸೇರಿದಂತೆ ಇತರೆ ಗಣ್ಯರು ಭಾಗವಹಿಸಿದ್ದರು.

ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಸಚಿವ ರಾಜನಾಥ್ ಸಿಂಗ್ ಆಗಮಿಸಬೇಕಿತ್ತು. ಪ್ರತಿಕೂಲ ವಾತಾವರಣದಿಂದಾಗಿ ಸಮಾರಂಭದಲ್ಲಿ ಭಾಗವಹಿಸಲು ಸಾಧ್ಯವಾಗಲಿಲ್ಲ ಎಂದು ಟ್ವಿಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

SCROLL FOR NEXT