ದೆಹಲಿಯಲ್ಲಿ ದಟ್ಟ ಮಂಜು ಕವಿದ ವಾತಾವರಣದಲ್ಲಿ ಸಂಚರಿಸುತ್ತಿರುವ ಜನ 
ದೇಶ

ಉ.ಪ್ರದೇಶದಲ್ಲಿ ಚಳಿಯ ತೀವ್ರತೆಗೆ 24 ಸಾವು, ದೆಹಲಿಯಲ್ಲಿ ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

ಉತ್ತರ ಭಾರತದಲ್ಲಿ ಚಳಿಯ ತೀವ್ರತೆ ಮತ್ತಷ್ಟು ಹೆಚ್ಚಿದ್ದು, ಶೀತ ಗಾಳಿಯಿಂದಾಗಿ ಉತ್ತರ ಪ್ರದೇಶದಲ್ಲಿ 24 ಮಂದಿ ಮೃತಪಟ್ಟಿದ್ದಾರೆ.

ನವದೆಹಲಿ: ಉತ್ತರ ಭಾರತದಲ್ಲಿ ಚಳಿಯ ತೀವ್ರತೆ ಮತ್ತಷ್ಟು ಹೆಚ್ಚಿದ್ದು, ಶೀತ ಗಾಳಿಯಿಂದಾಗಿ ಉತ್ತರ ಪ್ರದೇಶದಲ್ಲಿ 24 ಮಂದಿ ಮೃತಪಟ್ಟಿದ್ದಾರೆ. ದೆಹಲಿಯಲ್ಲಿ ಮಂಜು ಕವಿದ ವಾತಾವರಣದಿಂದಾಗಿ ವಿಮಾನ ಸಂಚಾರ ಹಾಗೂ ರೈಲು ಸಂಚಾರದಲ್ಲಿ ತೀವ್ರ ಅಸ್ತವ್ಯಸ್ತವಾಗಿದೆ.

ದೆಹಲಿ ಹಾಗೂ ಅಮೃತಸರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ತಾಪಮಾನ ಶೂನ್ಯ ಡಿ.ಸೆ.ವರೆಗೆ ತಲುಪಿದೆ. ಅಲ್ಲದೆ ಎಲ್ಲೆಲ್ಲೂ ದಟ್ಟ ಮಂಜು ಆವರಿಸಿದ್ದು, ಇಂದು 60 ವಿಮಾನಗಳು ಹಾಗೂ 100 ರೈಲುಗಳ ಸಂಚಾರ ವಿಳಂಬವಾಗಿದೆ.

ಉತ್ತರ ಪ್ರದೇಶದಲ್ಲಿ ಶೀತ ಗಾಳಿಯಿಂದಾಗಿ ಸುಮಾರು ಎರಡು ಡಜನ್ ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ನಾಗ್ಪುರದಲ್ಲಿ 45 ವರ್ಷಗಳಲ್ಲೇ ಮೊದಲ ಬಾರಿಗೆ ಸೋಮವಾರ ತಾಪಮಾನ 5 ಡಿ.ಸೆ.ಗೆ ತಲುಪಿದೆ. ಇನ್ನು ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲೂ 4.1 ಡಿ.ಸೆ. ತಾಪಮಾನ ದಾಖಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಿವಿ ಘಟಿಕೋತ್ಸವಕ್ಕೆ CJI ಸೂರ್ಯಕಾಂತ್ ಗೆ ಆಹ್ವಾನ: ಅವರಿಂದ ಪದವಿಪತ್ರ ಸ್ವೀಕರಿಸಲ್ಲ ಎಂದ NALSAR ವಿದ್ಯಾರ್ಥಿಗಳು!

"ಹಮಾಸ್ ನಿಶ್ಯಸ್ತ್ರಗೊಳಿಸುದೇ ಅಂತಿಮ ಗುರಿ": ಟ್ರಂಪ್ ಗಾಜಾ ಶಾಂತಿ ಯೋಜನೆ ತಿರಸ್ಕರಿಸಿದ ಇಸ್ರೇಲ್!

Video: ಮತ್ತೊಂದು ಗ್ಯಾಸ್ ಬಲೂನ್ ದುರಂತ: ಸಿಲಿಂಡರ್ ಸ್ಫೋಟ, 4 ಮಂದಿಗೆ ಗಾಯ, ಸ್ಥಳದಲ್ಲಿ ಆತಂಕ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನ ಕೊಲೆ: ಆರು ತಿಂಗಳ ಬಳಿಕ ಕೊಲೆಗಾತಿ ಪತ್ನಿ, ಪ್ರಿಯಕರನ ಬಂಧನ!

ಪಾಕ್ ನಲ್ಲಿ ಮತ್ತೆ 'ದುರಂಧರ್' ಆಟ: ಲಷ್ಕರ್ ಕಮಾಂಡರ್ ನಿಗೂಢ ಸಾವು, ಊಟ ಮಾಡಿ ಮಸೀದಿ ಬಳಿ ಕುಸಿದು ಬಿದ್ದ Qari Saeed Abdul Aziz