ದೆಹಲಿಯಲ್ಲಿ ದಟ್ಟ ಮಂಜು ಕವಿದ ವಾತಾವರಣದಲ್ಲಿ ಸಂಚರಿಸುತ್ತಿರುವ ಜನ 
ದೇಶ

ಉ.ಪ್ರದೇಶದಲ್ಲಿ ಚಳಿಯ ತೀವ್ರತೆಗೆ 24 ಸಾವು, ದೆಹಲಿಯಲ್ಲಿ ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

ಉತ್ತರ ಭಾರತದಲ್ಲಿ ಚಳಿಯ ತೀವ್ರತೆ ಮತ್ತಷ್ಟು ಹೆಚ್ಚಿದ್ದು, ಶೀತ ಗಾಳಿಯಿಂದಾಗಿ ಉತ್ತರ ಪ್ರದೇಶದಲ್ಲಿ 24 ಮಂದಿ ಮೃತಪಟ್ಟಿದ್ದಾರೆ.

ನವದೆಹಲಿ: ಉತ್ತರ ಭಾರತದಲ್ಲಿ ಚಳಿಯ ತೀವ್ರತೆ ಮತ್ತಷ್ಟು ಹೆಚ್ಚಿದ್ದು, ಶೀತ ಗಾಳಿಯಿಂದಾಗಿ ಉತ್ತರ ಪ್ರದೇಶದಲ್ಲಿ 24 ಮಂದಿ ಮೃತಪಟ್ಟಿದ್ದಾರೆ. ದೆಹಲಿಯಲ್ಲಿ ಮಂಜು ಕವಿದ ವಾತಾವರಣದಿಂದಾಗಿ ವಿಮಾನ ಸಂಚಾರ ಹಾಗೂ ರೈಲು ಸಂಚಾರದಲ್ಲಿ ತೀವ್ರ ಅಸ್ತವ್ಯಸ್ತವಾಗಿದೆ.

ದೆಹಲಿ ಹಾಗೂ ಅಮೃತಸರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ತಾಪಮಾನ ಶೂನ್ಯ ಡಿ.ಸೆ.ವರೆಗೆ ತಲುಪಿದೆ. ಅಲ್ಲದೆ ಎಲ್ಲೆಲ್ಲೂ ದಟ್ಟ ಮಂಜು ಆವರಿಸಿದ್ದು, ಇಂದು 60 ವಿಮಾನಗಳು ಹಾಗೂ 100 ರೈಲುಗಳ ಸಂಚಾರ ವಿಳಂಬವಾಗಿದೆ.

ಉತ್ತರ ಪ್ರದೇಶದಲ್ಲಿ ಶೀತ ಗಾಳಿಯಿಂದಾಗಿ ಸುಮಾರು ಎರಡು ಡಜನ್ ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ನಾಗ್ಪುರದಲ್ಲಿ 45 ವರ್ಷಗಳಲ್ಲೇ ಮೊದಲ ಬಾರಿಗೆ ಸೋಮವಾರ ತಾಪಮಾನ 5 ಡಿ.ಸೆ.ಗೆ ತಲುಪಿದೆ. ಇನ್ನು ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲೂ 4.1 ಡಿ.ಸೆ. ತಾಪಮಾನ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ತಮಿಳುನಾಡು ರಾಜಕೀಯದಲ್ಲಿ ಬಿಗ್ ಟ್ವಿಸ್ಟ್: ನಾಳೆ ವಿಜಯ್ ಪ್ರಮಾಣವಚನ ಡೌಟ್; ಮತ್ತೆ ಸಂಖ್ಯಾಬಲ ಇಲ್ಲ ಎಂದ ಗವರ್ನರ್!

Google Trends ನಲ್ಲಿಯೂ ವಿಜಯ್- TVK ಅರ್ಭಟ! ಮತಗಳು, ಗೆಲುವಿನ ಬಗ್ಗೆ ಹೆಚ್ಚಿನ ಹುಡುಕಾಟ

ಹೌದು 2025 ರ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಸಹಾಯ ಮಾಡಿದ್ವಿ: ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ 1 ವರ್ಷದ ಬಳಿಕ ಚೀನಾ ಒಪ್ಪಿಗೆ!

ವಿಜಯ್ ಸಿಎಂ ಹಾದಿಗೆ 118 ವಿಘ್ನ: TVK ಗೆ ಬೆಂಬಲ ಇಲ್ಲ- ಮುಸ್ಲೀಂ ಲೀಗ್ ಅಧಿಕೃತ ಘೋಷಣೆ; ಮತ್ತೆ ಮ್ಯಾಜಿಕ್ ನಂಬರ್ ಕೊರತೆ!

ಯಡಿಯೂರಪ್ಪ ರಾಜಕೀಯ ಜೀವನಕ್ಕೆ 50 ವರ್ಷ ಪೂರ್ಣ: ಅಭಿಮಾನೋತ್ಸವ ಸಮಾರಂಭದಲ್ಲಿ ಅಮಿತ್ ಶಾ ಭಾಗಿ ಸಾಧ್ಯತೆ!

SCROLL FOR NEXT