ದೆಹಲಿಯಲ್ಲಿ ದಟ್ಟ ಮಂಜು ಕವಿದ ವಾತಾವರಣದಲ್ಲಿ ಸಂಚರಿಸುತ್ತಿರುವ ಜನ 
ದೇಶ

ಉ.ಪ್ರದೇಶದಲ್ಲಿ ಚಳಿಯ ತೀವ್ರತೆಗೆ 24 ಸಾವು, ದೆಹಲಿಯಲ್ಲಿ ವಿಮಾನ, ರೈಲು ಸಂಚಾರ ಅಸ್ತವ್ಯಸ್ತ

ಉತ್ತರ ಭಾರತದಲ್ಲಿ ಚಳಿಯ ತೀವ್ರತೆ ಮತ್ತಷ್ಟು ಹೆಚ್ಚಿದ್ದು, ಶೀತ ಗಾಳಿಯಿಂದಾಗಿ ಉತ್ತರ ಪ್ರದೇಶದಲ್ಲಿ 24 ಮಂದಿ ಮೃತಪಟ್ಟಿದ್ದಾರೆ.

ನವದೆಹಲಿ: ಉತ್ತರ ಭಾರತದಲ್ಲಿ ಚಳಿಯ ತೀವ್ರತೆ ಮತ್ತಷ್ಟು ಹೆಚ್ಚಿದ್ದು, ಶೀತ ಗಾಳಿಯಿಂದಾಗಿ ಉತ್ತರ ಪ್ರದೇಶದಲ್ಲಿ 24 ಮಂದಿ ಮೃತಪಟ್ಟಿದ್ದಾರೆ. ದೆಹಲಿಯಲ್ಲಿ ಮಂಜು ಕವಿದ ವಾತಾವರಣದಿಂದಾಗಿ ವಿಮಾನ ಸಂಚಾರ ಹಾಗೂ ರೈಲು ಸಂಚಾರದಲ್ಲಿ ತೀವ್ರ ಅಸ್ತವ್ಯಸ್ತವಾಗಿದೆ.

ದೆಹಲಿ ಹಾಗೂ ಅಮೃತಸರ ಸೇರಿದಂತೆ ಅನೇಕ ಪ್ರದೇಶಗಳಲ್ಲಿ ತಾಪಮಾನ ಶೂನ್ಯ ಡಿ.ಸೆ.ವರೆಗೆ ತಲುಪಿದೆ. ಅಲ್ಲದೆ ಎಲ್ಲೆಲ್ಲೂ ದಟ್ಟ ಮಂಜು ಆವರಿಸಿದ್ದು, ಇಂದು 60 ವಿಮಾನಗಳು ಹಾಗೂ 100 ರೈಲುಗಳ ಸಂಚಾರ ವಿಳಂಬವಾಗಿದೆ.

ಉತ್ತರ ಪ್ರದೇಶದಲ್ಲಿ ಶೀತ ಗಾಳಿಯಿಂದಾಗಿ ಸುಮಾರು ಎರಡು ಡಜನ್ ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.

ನಾಗ್ಪುರದಲ್ಲಿ 45 ವರ್ಷಗಳಲ್ಲೇ ಮೊದಲ ಬಾರಿಗೆ ಸೋಮವಾರ ತಾಪಮಾನ 5 ಡಿ.ಸೆ.ಗೆ ತಲುಪಿದೆ. ಇನ್ನು ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲೂ 4.1 ಡಿ.ಸೆ. ತಾಪಮಾನ ದಾಖಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT