ಸಾಂದರ್ಭಿಕ ಚಿತ್ರ 
ದೇಶ

ಆತ್ಮಾಹುತಿ ದಾಳಿ: 15 ಸಾವು, 26 ಜನರಿಗೆ ಗಾಯ

ಉತ್ತರ ಬಾಗ್ದಾದ್‌ನಲ್ಲಿ ಆತ್ಮಾಹುತಿ ಬಾಂಬರ್ ಮಂಗಳವಾರ ನಡೆಸಿದ...

ಬಾಗ್ದಾದ್: ಉತ್ತರ ಬಾಗ್ದಾದ್‌ನಲ್ಲಿ ಆತ್ಮಾಹುತಿ ಬಾಂಬರ್ ಮಂಗಳವಾರ ನಡೆಸಿದ ದಾಳಿಗೆ 15 ಜನ ಶಿಯಾ ಯಾತ್ರಿಕರು ಬಲಿಯಾಗಿದ್ದು, 27 ಮಂದಿ ಗಾಯಗೊಂಡಿದ್ದಾರೆ.

ಇರಾಕ್ ಸಾರ್ವಜನಿಕರು ಸೇರಿದಂತೆ ಇತರೆ ದೇಶದ ನಾಗರೀಕರು ಸಮರ್ರಾಗೆ ಹೋಗಲು ಯಾತ್ರೆ ಮುಂದುವರೆಸಿದ್ದು, ಹೋಗುವ ದಾರಿಯಲ್ಲಿ ಟೆಂಟ್‌ಗಳನ್ನು ಹೂಡಿ ಯಾತ್ರೆ ಕೈಗೊಂಡಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಅನಾಮಿಕ ವ್ಯಕ್ತಿಯೊಬ್ಬರು ಬಾಂಬ್ ಸ್ಫೋಟಿಸಿದ್ದಾರೆ. ಘಟನೆ ವೇಳೆ ಟೆಂಟ್‌ಗಳಲ್ಲಿದ್ದ 15 ಜನರು ಸಾವನ್ನಪ್ಪಿದ್ದು, 27 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಮರ್ರಾಗೆ ನಡೆದುಕೊಂಡು ಹೋಗುತ್ತಿದ್ದ ಯಾತ್ರಿಕರಿಗೆ  ಊಟ, ಹಣ್ಣು ಹಾಗೂ ಟೀ ನೀಡಲಾಗುತ್ತಿತ್ತು. ಈ ವೇಳೆ ಮುಸುಕುಧಾರಿಯಾಗಿ ಬಂದ ಅನಾಮಿಕನೊಬ್ಬನು ಇದ್ದಕ್ಕಿದ್ದಂತೆ ಬಾಂಬ್ ಸ್ಫೋಟಿಸಿಕೊಂಡನು ಎಂದು ದಾಳಿ ವೇಳೆ ಗಾಯಗೊಂಡ ಸಜ್ಜಿದ್(25) ಹೇಳಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ಸಿಬ್ಬಂದಿಗಳು ಗಾಯಗೊಂಡ ಯಾತ್ರಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT