ಸಾಂದರ್ಭಿಕ ಚಿತ್ರ 
ದೇಶ

ಆತ್ಮಾಹುತಿ ದಾಳಿ: 15 ಸಾವು, 26 ಜನರಿಗೆ ಗಾಯ

ಉತ್ತರ ಬಾಗ್ದಾದ್‌ನಲ್ಲಿ ಆತ್ಮಾಹುತಿ ಬಾಂಬರ್ ಮಂಗಳವಾರ ನಡೆಸಿದ...

ಬಾಗ್ದಾದ್: ಉತ್ತರ ಬಾಗ್ದಾದ್‌ನಲ್ಲಿ ಆತ್ಮಾಹುತಿ ಬಾಂಬರ್ ಮಂಗಳವಾರ ನಡೆಸಿದ ದಾಳಿಗೆ 15 ಜನ ಶಿಯಾ ಯಾತ್ರಿಕರು ಬಲಿಯಾಗಿದ್ದು, 27 ಮಂದಿ ಗಾಯಗೊಂಡಿದ್ದಾರೆ.

ಇರಾಕ್ ಸಾರ್ವಜನಿಕರು ಸೇರಿದಂತೆ ಇತರೆ ದೇಶದ ನಾಗರೀಕರು ಸಮರ್ರಾಗೆ ಹೋಗಲು ಯಾತ್ರೆ ಮುಂದುವರೆಸಿದ್ದು, ಹೋಗುವ ದಾರಿಯಲ್ಲಿ ಟೆಂಟ್‌ಗಳನ್ನು ಹೂಡಿ ಯಾತ್ರೆ ಕೈಗೊಂಡಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಅನಾಮಿಕ ವ್ಯಕ್ತಿಯೊಬ್ಬರು ಬಾಂಬ್ ಸ್ಫೋಟಿಸಿದ್ದಾರೆ. ಘಟನೆ ವೇಳೆ ಟೆಂಟ್‌ಗಳಲ್ಲಿದ್ದ 15 ಜನರು ಸಾವನ್ನಪ್ಪಿದ್ದು, 27 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸಮರ್ರಾಗೆ ನಡೆದುಕೊಂಡು ಹೋಗುತ್ತಿದ್ದ ಯಾತ್ರಿಕರಿಗೆ  ಊಟ, ಹಣ್ಣು ಹಾಗೂ ಟೀ ನೀಡಲಾಗುತ್ತಿತ್ತು. ಈ ವೇಳೆ ಮುಸುಕುಧಾರಿಯಾಗಿ ಬಂದ ಅನಾಮಿಕನೊಬ್ಬನು ಇದ್ದಕ್ಕಿದ್ದಂತೆ ಬಾಂಬ್ ಸ್ಫೋಟಿಸಿಕೊಂಡನು ಎಂದು ದಾಳಿ ವೇಳೆ ಗಾಯಗೊಂಡ ಸಜ್ಜಿದ್(25) ಹೇಳಿದ್ದಾರೆ.

ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಗ್ನಿಶಾಮಕ ಸಿಬ್ಬಂದಿಗಳು ಗಾಯಗೊಂಡ ಯಾತ್ರಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT