ಕರ್ನಾಟಕ ಹೈಕೋರ್ಟ್‌ 
ದೇಶ

ನಷ್ಟದಲ್ಲಿರುವ ನಿಗಮ ಮಂಡಳಿಗೆ ಅಧ್ಯಕ್ಷರು ಯಾಕೆ?

ರಾಜ್ಯ ಸರ್ಕಾರ ನೇಮಿಸಿ ಹೊರಡಿಸಿರುವ ನಿಗಮ ಮಂಡಳಿ ಅಧ್ಯಕ್ಷರ ಪೈಕಿ 15 ನಿಗಮ ಮಂಡಳಿಗಳು...

ಬೆಂಗಳೂರು: ರಾಜ್ಯ ಸರ್ಕಾರ ನೇಮಿಸಿ ಹೊರಡಿಸಿರುವ ನಿಗಮ ಮಂಡಳಿ ಅಧ್ಯಕ್ಷರ ಪೈಕಿ 15 ನಿಗಮ ಮಂಡಳಿಗಳು ನಷ್ಟ ಅನುಭವಿಸುತ್ತಿದ್ದು, ಅವರ ನೇಮಕ ಆದೇಶ ರದ್ದು ಪಡಿಸಬೇಕೆಂದು ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ದಾಖಲಾಗಿದೆ.

ನಷ್ಟದಲ್ಲಿರುವ 15 ಸಾರ್ವಜನಿಕ ಉದ್ದಿಮೆಗಳಿಗೆ ಸರ್ಕಾರ ಅಧ್ಯಕ್ಷರ ನೇಮಕ ಮಾಡಿದೆ. ಇದರಿಂದ ಇಲಾಖೆಗೆ ಹೆಚ್ಚುವರಿ 2 ಲಕ್ಷ ಬೀಳಲಿದೆ. ನಷ್ಟದಲ್ಲಿರುವ ಇಲಾಖೆಗಳಿಗೆ ಈಗಾಗಲೇ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಆದ್ದರಿಂದ ಅಧ್ಯಕ್ಷರ ನೇಮಕ ಅವಶ್ಯವಿಲ್ಲ ಎಂದು ಅರ್ಜಿಯಲ್ಲಿ ಕೋರಲಾಗಿದೆ.

ರಾಜ್ಯ ಸರ್ಕಾರ ನಿಗಮ ಮಂಡಳಿ ಅಧ್ಯಕ್ಷರ ಸ್ಥಾನಕ್ಕೆ ನೇಮಿಸುವ ಸಂಬಂಧ ಕನಿಷ್ಠ ವಿದ್ಯಾರ್ಹತೆ ಸೇರಿದಂತೆ ಇತರೆ ಅಗತ್ಯ ಹಾಗೂ ಮಾರ್ಗಸೂಚಿಗಳನ್ನೂ ಇದುವರೆಗೆ ಸಿದ್ಧಪಡಿಸಿಲ್ಲ. ನೇಮಕವಾಗುವ ಅಧ್ಯಕ್ಷರು ಸೋತ ಸಂಸದರು, ಇಲ್ಲವೇ ಮಾಜಿಶಾಸಕರಾಗಿರುತ್ತಾರೆ.

ಆಡಳಿತ ರೂಢ ಪಕ್ಷಕ್ಕೆ ನಿಷ್ಟ ಕಾರ್ಯಕರ್ತರಾಗಿರುವುದೇ ಅಧ್ಯಕ್ಷರ ನೇಮಕಕ್ಕೆ ಶ್ರೀರಕ್ಷೆ. ನಿಗಮ ಮಂಡಳಿ ಅಧ್ಯಕ್ಷರ ನೇಮಕ ಎಂಬುದು ಒಂದು ರೀತಿಯಲ್ಲಿ ಸೋತ ಅಭ್ಯರ್ಥಿಗಳಿಗೆ ಹಾಗೂ ಪಕ್ಷದ ನಿಷ್ಠಾವಂತರಿಗೆ ಪುನರ್ವಸತಿ ಕಲ್ಪಿಸುವ ವ್ಯವಸ್ಥೆಯಾಗಿದೆ ಎಂದು ಅರ್ಜಿದಾರರರಾದ ಎನ್.ಪಿ.ಅಮೃತೇಶ್ ಅರ್ಜಿಯಲ್ಲಿ ಆರೋಪಿಸಿದ್ದಾರೆ.

ಅರ್ಜಿ ಕೈಗೆತ್ತಿಕೊಂಡ ನ್ಯಾ.ಎ.ಎನ್.ವೇಣುಗೋಪಾಲ್ ಗೌಡ ಹಾಗೂ ನ್ಯಾ,ಬಿ.ವಿ.ನಾಗರತ್ನ ಅವರಿದ್ದ ರಜಾಕಾಲದ ವಿಭಾಗೀಯ ಪೀಠ ವಿಚಾರಣೆಯನ್ನು ಮುಂದೂಡಿದೆ.

ಯಾವುದು ನಷ್ಟದಲ್ಲಿದೆ?

  • ಮೈಸೂರು ಕಾಗದ ಕಾರ್ಖಾನೆ
  • ಮೈಸೂರು ಸಕ್ಕರೆ ಕಾರ್ಖಾನೆ
  • ಎನ್‌ಜಿಇಎಫ್ (ಹುಬ್ಬಳ್ಳಿ)
  • ಚಾಮುಂಡೇಶ್ವರಿ ವಿದ್ಯುತ್ ಕಂಪನಿ (ಚೆಸ್ಕಾಂ)
  • ಕಲುಬುರ್ಗಿ ವಿದ್ಯುತ್ ಕಂಪನಿ
  • ಈಶಾನ್ಯ ರಸ್ತೆ ಸಾರಿಗೆ ನಿಗಮ
  • ವಾಯುವ್ಯ ರಸ್ತೆ ಸಾರಿಗೆ ನಿಗಮ
  • ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ
  • ಕೃಷ್ಣ ಭಾಗ್ಯ ಜಲ ನಿಗಮ
  • ಲಿಡ್ಕರ್ ಸಂಸ್ಥೆ
  • ರಾಜ್ಯ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ
  • ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ನಿಯಮಿತ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT