ಪಿಕೆ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿದ ಅಖಿಲೇಶ್ ಯಾದವ್ 
ದೇಶ

ಪಿಕೆ ಉತ್ತಮ ಸಂದೇಶ ಸಾರುವ ಚಿತ್ರ: ಅಖಿಲೇಶ್ ಪ್ರಶಂಸೆ

ಇದೊಂದು ಉತ್ತಮ ಚಿತ್ರವಾಗಿದ್ದು, ಜನತೆಗೆ ಇದು ಉತ್ತಮ ಸಂದೇಶ ನೀಡುತ್ತದೆ...

ಲಕ್ನೋ: ಇತ್ತೀಚೆಗೆ ವಿಶ್ವದಾದ್ಯಂತ ಏಕಕಾಲಕ್ಕೆ ತೆರೆಕಂಡಿರುವ ಅಮೀರ್‌ಖಾನ್ ನಟನೆಯ ಪಿಕೆ ಚಿತ್ರಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಚಿತ್ರಕ್ಕೆ ತೆರಿಗೆ ವಿನಾಯಿತಿಯೂ ನೀಡಿರುವುದು ಅಭಿಮಾನಿಗಳಲ್ಲಿ ಸಂತಸ ತಂದಿದೆ.

ಪಿಕೆ ಚಿತ್ರದಲ್ಲಿ ಹಿಂದು ಧರ್ಮವನ್ನು ಹಾಗೂ ದೇವತೆಗಳನ್ನು ಅವಹೇಳನಕಾರಿಯಾಗಿ ಚಿತ್ರೀಕರಿಸಲಾಗಿದೆ ಎಂದು ವಿಶ್ವಹಿಂದೂ ಪರಿಷತ್, ಬಜರಂಗ ದಳ, ಶಿವಸೇನೆ ಸೇರಿದಂತೆ ಹಿಂದೂಪರ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದವು.

ಉತ್ತರ ಭಾರತದ ಹಲವೆಡೆ ಪಿಕೆ ಚಿತ್ರ ಪ್ರದರ್ಶನಗೊಳ್ಳುತ್ತಿದ್ದ ಸಿನಿಮಾ ಮಂದಿಗಳಿಗೆ ನುಗ್ಗಿದ ಕೆಲ ಹಿಂದೂಪರ ಸಂಘಟನೆಯ ಕಾರ್ಯಕರ್ತರು, ಪಿಕೆ ಚಿತ್ರದ ಪೋಸ್ಟರ್‌ಗಳಿಗೆ ಬೆಂಕಿ ಹಚ್ಚಿದರು.

ನಿನ್ನೆ ದೆಹಲಿಯಲ್ಲಿನ ಗಂಗಾ ಸಿನಿಮಾ ಮಂದಿರದಲ್ಲಿ ಬಜರಂಗ ದಳ ಕಾರ್ಯಕರ್ತರು, ಥಿಯೇಟರ್‌ನ ಕಿಟಕಿ ಗಾಜುಗಳನ್ನು ಪುಡಿ ಪುಡಿ ಮಾಡಿ ಖಂಡನೆ ವ್ಯಕ್ತಪಡಿಸಿದ್ದರು.

ಈ ಮಧ್ಯೆ ಮುಖ್ಯಮಂತ್ರಿ ಅಖಿಲೇಶ್ ಯಾದವ್, ಉತ್ತರ ಪ್ರದೇಶದಲ್ಲಿ ಪಿಕೆ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಿ, ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿರುವುದು ಅಮೀರ್‌ಖಾನ್‌ಗೆ ಕೊಂಚ ಸಂತಸ ತಂದಿದೆ. ಇದೇ ವೇಳೆ ಸುದ್ದಿಗೊರರೊಂದಿಗೆ ಮಾತನಾಡಿದ ಅಖಿಲೇಶ್, ಇದೊಂದು ಉತ್ತಮ ಚಿತ್ರವಾಗಿದ್ದು, ಜನತೆಗೆ ಇದು ಉತ್ತಮ ಸಂದೇಶ ನೀಡುತ್ತದೆ ಎಂದು ಶ್ಲಾಘಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT