ಝಕೀವುರ್ ಲಖ್ವಿ 
ದೇಶ

ಭಾರತದ ಒತ್ತಡಕ್ಕೆ ಮಣಿದು ಮತ್ತೆ ನನ್ನನ್ನು ಬಂಧಿಸಲಾಗಿದೆ: ಲಖ್ವಿ

ಭಾರತದ ಒತ್ತಡಕ್ಕೆ ಮಣಿದು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಮತ್ತೆ ಬಂಧಿಸಲಾಗಿದೆ...

ಇಸ್ಲಾಮಾಬಾದ್: ಭಾರತದ ಒತ್ತಡಕ್ಕೆ ಮಣಿದು ನನ್ನ ವಿರುದ್ಧ ಸುಳ್ಳು ಆರೋಪ ಮಾಡಿ ಮತ್ತೆ ಬಂಧಿಸಲಾಗಿದೆ ಎಂದು ಮುಂಬೈ ದಾಳಿ ಮಾಸ್ಟರ್ ಮೈಂಡ್ ಝಕೀವುರ್ ಲಖ್ವಿ ಹೇಳಿದ್ದಾನೆ.

ಇನ್ನೇನು ಜೈಲಿನಿಂದ ಬಿಡುಗಡೆ ಆಗಬೇಕು ಎನ್ನುವಷ್ಟರಲ್ಲಿ ಮತ್ತೆ ಜೈಲು ಸೇರಿದ ಲಖ್ವಿ, ನನ್ನ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ, ಎಫ್‌ಐಆರ್ ದಾಖಲಿಸಲಾಗಿದೆ. ಪಾಕಿಸ್ತಾನ ಸರ್ಕಾರಕ್ಕೆ ಭಾರತ ಒತ್ತಡ ಹೇರುತ್ತಿದೆ ಎಂದು ಆರೋಪಿಸಿದ್ದಾನೆ.

ನನ್ನ ವಿರುದ್ಧ ಸುಳ್ಳು ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯದಲ್ಲಿ ಬುಧವಾರ ಲಖ್ವಿ ಅರ್ಜಿ ಸಲ್ಲಿಸಿದ್ದಾನೆ.

ಭಾರತದ ಒತ್ತಡಕ್ಕೆ ಮಣಿದು ಪಾಕ್ ಸರ್ಕಾರ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದೆ. ನನ್ನ ಕಕ್ಷಿದಾರನನ್ನು ಜೈಲಿನಲ್ಲೇ ಉಳಿಸಿಕೊಳ್ಳುವ ಹುನ್ನಾರ ನಡೆಸಲಾಗಿದೆ ಎಂದು ಲಖ್ವಿ ಪರ ವಕೀಲ ಹೇಳಿದ್ದಾರೆ.

ಅಪಹರಣ ಪ್ರಕರಣದ ಹೆಸರಲ್ಲಿ 2 ದಿನಗಳ ಮಟ್ಟಿಗೆ ಪಾಕಿಸ್ತಾನ ನ್ಯಾಯಾಲಯ ಲಖ್ವಿಯನ್ನು ಪೊಲೀಸ್ ವಶಕ್ಕೊಪ್ಪಿಸಿತ್ತು.

ಜಾಮೀನಿನ ಮೇಲೆ ಇತ್ತೀಚೆಗಷ್ಟೇ ಬಿಡುಗಡೆಗೊಂಡಿದ್ದ ಲಖ್ವಿಯನ್ನು ಸಾರ್ವಜನಿಕ ಭದ್ರತಾ ಆದೈಶದನ್ವಯ ಪಾಕ್ ಸರ್ಕಾರ ಮತ್ತೆ ವಶಕ್ಕೆ ತೆಗೆದುಕೊಂಡಿತ್ತು. ಆದರೆ ಪಾಕ್ ಸರ್ಕಾರದ ಆದೇಶವನ್ನು ತಳ್ಳಿಹಾಕಿದ್ದ ಕೋರ್ಟ್ ಲಖ್ವಿಯನ್ನು ಮಂಗಳವಾರ ಬೆಳಗ್ಗೆ ಬಿಡುಗಡೆಗೊಳಿಸುವಂತೆ ಸೂಚಿಸಿತ್ತು.

ಕೋರ್ಟ್ ಆದೇಶದ ಪ್ರತಿ ಜೈಲಧಿಕಾರಿಯ ಕೈ ಸೇರುವುದಕ್ಕೆ ಮುನ್ನ ಬೇರೊಂದು ಪ್ರಕರಣ ಸಂಬಂಧ ಆತ ಮತ್ತೆ ಜೈಲು ಸೇರುವಂತಾಗಿದೆ. ಮಹಮ್ಮದ್ ಅನ್ವರ್ ಎಂಬಾತನನ್ನು ಅಪಹರಣ ಮಾಡಿದ ಪ್ರಕರಣ ಸಂಬಂಧ ಸೋಮವಾರ ದೂರು ದಾಖಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT