ಘೇಂಡಾಮೃಗ 
ದೇಶ

ಘೇಂಡಾಮೃಗವನ್ನು ಕೊಂದ ಕಳ್ಳ ಬೇಟೆಗಾರರು!

ಸೋನಿತ್‌ಪುರ್ ಜಿಲ್ಲೆಯಲ್ಲಿರುವ ರಾಷ್ಟ್ರೀಯ...

ಸೋನಿತ್‌ಪುರ/ಅಸ್ಸಾಂ: ಸೋನಿತ್‌ಪುರ್ ಜಿಲ್ಲೆಯಲ್ಲಿರುವ ರಾಷ್ಟ್ರೀಯ ಉದ್ಯಾನವನದಲ್ಲಿ ಘೇಂಡಾಮೃಗವನ್ನು ಕಳ್ಳ ಬೇಟೆಗಾರರು ಬುಧವಾರ ಬೆಳಗ್ಗೆ ಗುಂಡಿಟ್ಟು ಕೊಂದಿದ್ದಾರೆ.

ನಾಲ್ಕು ಮಂದಿ ಕಳ್ಳ ಬೇಟೆಗಾರರು ಇಂದು ಬೆಳಗ್ಗೆ 2.45ರ ಸುಮಾರಿಗೆ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಘೇಂಡಾಮೃಗವನ್ನು ಕೊಂದಿದ್ದಾರೆ. ಈ ವೇಳೆ ಅಲ್ಲೇ ತಿರುಗುತ್ತಿದ್ದ ಅರಣ್ಯ ಸಿಬ್ಬಂದಿ ಕಳ್ಳ ಬೇಟೆಗಾರರ ಮೇಲೆ ಗುಂಡು ಹಾರಿಸಿದ್ದಾರೆ. ಈ ಗುಂಡಿನ ಸಂಘರ್ಷದಲ್ಲಿ ಓರ್ವ ಅರಣ್ಯ ಸಿಬ್ಬಂದಿ ಮೃತಪಟ್ಟಿದ್ದಾನೆ.

ಮೃತ ಅರಣ್ಯ ಸಿಬ್ಬಂದಿಯನ್ನು 28 ವರ್ಷದ ಸುಶೀಲ್ ಸಿಯಲ್ ಎಂದು ಗುರುತಿಸಲಾಗಿದೆ. ಸುಶೀಲ್ ಸುಮಾರು 4 ವರ್ಷಗಳಿಂದ ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಉದ್ಯಾನವನದ ನಾಲ್ಕು ಕಿ.ಮೀ ದೂರದಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದ.

ಕಳ್ಳ ಬೇಟೆಗಾರರು ಸ್ಥಳದಿಂದ ದೌಡಾಯಿಸಿದ್ದು, ಅವರು ಬಳಸುತ್ತಿದ್ದ ಎಂಕೆ1.303 ರೈಫಲ್ ಹಾಗೂ ಒಂದು ಪಿಸ್ತೂಲನ್ನು ಅರಣ್ಯ ಸಿಬ್ಬಂದಿಗಳು ವಶಪಡಿಸಿಕೊಂಡಿದ್ದಾರೆ.

ಅಳಿವಿನ ಅಂಚಿನಲ್ಲಿರುವ ಒಂಟಿ ಕೊಂಬಿನ ಘೇಂಡಾಮೃಗಗಳಿಗೆ ಅಸ್ಸಾಂ ರಕ್ಷಿತಾರಣ್ಯವಾಗಿದೆ. ಅತಿದೊಡ್ಡ ಜನಸಂಖ್ಯೆಯಲ್ಲಿ ಘೇಂಡಾಮೃಗಗಳು ಇಲ್ಲಿ ವಾಸವಾಗಿವೆ. ಆದರೆ ಕಳ್ಳ ಬೇಟೆಗಾರರ ಹಾವಳಿಯಿಂದಾಗಿ ಘೇಂಡಾಮೃಗಗಳ ಜೀವಕ್ಕೆ ಕುತ್ತಾಗಿದೆ. ಅಸ್ಸಾಂನಾದ್ಯಂತ ಇಲ್ಲಿಯವರೆಗೂ 200 ಒಂಟಿ ಕೊಂಬಿನ ಘೇಂಡಾಮೃಗಗಳನ್ನು ಮೃತಪಟ್ಟಿದ್ದಾರೆ. ಇದೇ ವರ್ಷದಲ್ಲಿ 20 ಘೇಂಡಾಮೃಗಗಳು ಕಳ್ಳ ಬೇಟೆಗಾರರ ಕ್ರೌರ್ಯಕ್ಕೆ ಬಲಿಯಾಗಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ವೆನೆಜುವೆಲಾ ಪರಿಸ್ಥಿತಿ ನಿಮಗೂ ಬರಬಹುದು.. ತಡ ಮಾಡದೇ ನಮ್ ಜೊತೆ ಒಪ್ಪಂದ ಮಾಡ್ಕೊಳ್ಳಿ': ಕ್ಯೂಬಾಗೂ Donald Trump ಎಚ್ಚರಿಕೆ!

ಒಂದು ವಾರದ ಚಿಕಿತ್ಸೆ ಬಳಿಕ ಆಸ್ಪತ್ರೆಯಿಂದ ಸೋನಿಯಾ ಗಾಂಧಿ ಡಿಸ್ಚಾರ್ಜ್!

Tubelight in his head: ಹಿಮಂತಾ ಬಿಸ್ವಾ ಶರ್ಮಾ ವಿರುದ್ಧ AIMIM ಮುಖ್ಯಸ್ಥ ಓವೈಸಿ ಕಿಡಿ! ಏನಿದು ವಿವಾದ?

'ಒಬ್ಬ ಅಲ್ಲ.. ಭಾರತದ ಮೇಲೆ ದಾಳಿಗೆ ಸಾವಿರಾರು ಆತ್ಮಹತ್ಯಾ ಬಾಂಬರ್‌ಗಳು ಸಿದ್ಧ': ಪಾಕ್ ಮೂಲದ ಉಗ್ರ Masood Azhar ಆಡಿಯೋ ವೈರಲ್!

1st ODI: ನ್ಯೂಜಿಲೆಂಡ್ ವಿರುದ್ಧ ಭರ್ಜರಿ ಬ್ಯಾಟಿಂಗ್, ಸಚಿನ್ ತೆಂಡೂಲ್ಕರ್, ಸಂಗಕ್ಕಾರ ದಾಖಲೆ ಮುರಿದ Virat Kohli

SCROLL FOR NEXT