ಸಾಂದರ್ಭಿಕ ಚಿತ್ರ- ನರೇಂದ್ರ ಮೋದಿ 
ದೇಶ

ಜಯಪುರ ಗ್ರಾಮ ದತ್ತು ಪಡೆದ ಮೋದಿ

ಉತ್ತರಪ್ರದೇಶ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ಇಂದು ಅದೇ ಕ್ಷೇತ್ರದ...

ವಾರಣಾಸಿ: ಉತ್ತರಪ್ರದೇಶ ವಾರಣಾಸಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರಧಾನಿ ನರೇಂದ್ರ ಮೋದಿ ಇಂದು ಅದೇ ಕ್ಷೇತ್ರದ ಜಯಪುರ ಗ್ರಾಮವನ್ನು ದತ್ತು ಪಡೆದಿದ್ದಾರೆ.

ಗ್ರಾಮವೊಂದನ್ನು ದತ್ತು ಪಡೆದು ಆದರ್ಶ ಗ್ರಾಮ ನಿರ್ಮಿಸುವಂತೆ ಸಂಸದರಿಗೆ ಕರೆ ನೀಡಿದ್ದ ಮೋದಿ, ಮೊದಲಿಗೆ ತಾವೇ ಗ್ರಾಮವೊಂದನ್ನು ದತ್ತು ಪಡೆದರು. ಈ ವೇಳೆ ಮಾತನಾಡಿದ ಅವರು, ಯಾವೊಬ್ಬ ಶಾಸಕರು ಗ್ರಾಮಗಳನ್ನು ದತ್ತು ಪಡೆಯದಿರುವುದಕ್ಕೆ ವಿಷಾಧಿಸಿದರು.

ಗ್ರಾಮಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದಾಗಿ ಆಗಸ್ಟ್ 15ರಂದು ಕೆಂಪುಕೋಟೆ ಮೇಲೆ ಮಾತನಾಡಿದ್ದ ಪ್ರಧಾನಿ ಮೋದಿ ಅವರು, ಪ್ರತಿಯೊಬ್ಬ ಸಂಸದನು ಆದರ್ಶ ಗ್ರಾಮ ಯೋಜನೆಯಡಿ ಒಂದು ಗ್ರಾಮವನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಬೇಕು ಎಂದು ಸಂಸದರಿಗೆ ಸೂಚಿಸಿದ್ದರು.

ಜಯಪುರ ಗ್ರಾಮವನ್ನು ದತ್ತು ಪಡೆದಿರುವ ಮೋದಿ ಅವರು ಗ್ರಾಮವನ್ನು ಯಾವ ಮಟ್ಟಿಗೆ ಅಭಿವೃದ್ಧಿ ಪಡಿಸುತ್ತಾರೆ ಎಂದು ಕಾದು ನೋಡಬೇಕಿದೆ.


Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

ಯಾವುದೇ ಸಿದ್ಧಾಂತ ಅಥವಾ ಅಜೆಂಡಾವನ್ನು ಪ್ರಚಾರ ಮಾಡುತ್ತಿಲ್ಲ; 'ಕಾಂತಾರ: ಚಾಪ್ಟರ್ 1' ಕುರಿತು ರಿಷಬ್ ಶೆಟ್ಟಿ

SCROLL FOR NEXT