ಸಾಹಿತಿ ಬಿ.ಹೃದಯಕುಮಾರಿ ಸಾಂಧರ್ಭಿಕ ಚಿತ್ರ 
ದೇಶ

ಮಲಯಾಳಂ ಸಾಹಿತಿ ಬಿ.ಹೃದಯಕುಮಾರಿ ನಿಧನ

ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಿ.ಹೃದಯಕುಮಾರಿ ವಿಧಿವಶ.....

ತಿರುವನಂತಪುರ: ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತೆ ಸಾಹಿತಿ ಬಿ.ಹೃದಯಕುಮಾರಿ ರವರು ಶನಿವಾರ ವಿಧಿವಶರಾಗಿದ್ದಾರೆ.

ಸರ್ಕಾರಿ ಮಹಿಳಾ ಕಾಲೇಜಿನ ಮುಖ್ಯಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದ್ದ ಹೃದಯಕುಮಾರಿಯವರಿಗೆ 84 ವರ್ಷ ವಯಸ್ಸಾಗಿದ್ದು, ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಎರಡು ವಾರಗಳ ಹಿಂದೆ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅಸುನೀಗಿದ್ದಾರೆ.

ಸಾಹಿತಿ ಹಾಗೂ ವಿಮರ್ಶಕರಾಗಿದ್ದ ಬಿ.ಹೃದಯಕುಮಾರಿ ಹಲವು ಪುಸ್ತಕಗಳನ್ನು ಬರೆದಿದ್ದು, 1991ರಲ್ಲಿ 'ಕಲ್ಪಾನಿಕಥಾ' ಎಂಬ ಪುಸ್ತಕಕ್ಕೆ ಕೇರಳ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ದೊರೆತಿತ್ತು. ಇವರಿಗೆ ಇಬ್ಬರು ಮಕ್ಕಳಿದ್ದು ಮಗ ಬೊದೇಶ್ವರನ್ ಸಾಹಿತಿ ಹಾಗೂ ಹೋರಾಟಗಾರರಾಗಿದ್ದು, ಮಗಳು ಸಂಸ್ಕೃತ ವಿದ್ವಾಂಸಕರಾಗಿದ್ದಾರೆ.

ಕೇರಳ ಮುಖ್ಯಮಂತ್ರಿ ಒಮೆನ್ ಚಂಡಿ, ವಿರೋಧ ಪಕ್ಷದ ನಾಯಕ ವಿ.ಎಸ್ ಅಚ್ಚುತಾನಂದನ್ ಸೇರಿದಂತೆ ಹಲವು ಗಣ್ಯರು ಹೃದಯಕುಮಾರಿ ನಿವಾಸಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.

ಇಂದು ಸಂಜೆ 5 ಗಂಟೆಗೆ ಶಾಂತಿ ಕವದಂನಲ್ಲಿ ಅವರ ಅಂತ್ಯಕ್ರಿಯೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT