ಸ್ವಚ್ಛತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ. 
ದೇಶ

ಅಸ್ಸಿಘಾಟ್‌ನಲ್ಲಿ ಸ್ವಚ್ಛತಾ ಅಭಿಯಾನ ಕೈಗೊಂಡ ಪ್ರಧಾನಿ ಮೋದಿ

ವಾರಾಣಾಸಿಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ಶನಿವಾರ...

ವಾರಾಣಾಸಿ: ವಾರಾಣಾಸಿಗೆ ಭೇಟಿ ನೀಡಿರುವ ಪ್ರಧಾನಿ ಮೋದಿ ಅವರು ಶನಿವಾರ ಅಸ್ಸಿಘಾಟ್‌ನಲ್ಲಿ ಸ್ವತಃ ಸ್ವಚ್ಛತಾ ಅಭಿಯಾನ ಕೈಗೊಂಡರು.

ಸ್ವಚ್ಛ ಭಾರತ ಅಭಿಯಾನ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ಒಂಭತ್ತು ಹೆಸರುಗಳನ್ನು ನಾಮಕರಣ ಮಾಡಿದ್ದಾರೆ.

ಇಂದು ಅಸ್ಸಿ ಘಾಟ್‌ಗೆ ಭೇಟಿ ನೀಡಿದ ಮೋದಿ, ಮೊದಲಿಗೆ ಗಂಗಾ ನದಿಗೆ ಪ್ರಾರ್ಥನೆ ಸಲ್ಲಿಸಿ, ತದ ನಂತರ ಬಿಜೆಪಿ ಮುಖಂಡರೊಂದಿಗೆ ಸೇರಿ ಸುತ್ತಮುತ್ತಲಿರುವ ಕಸವನ್ನು ತೆಗೆದು ಸ್ವಚ್ಛಗೊಳಿಸಿದರು.

ದೇಶವನ್ನು ನಿರ್ಮಲ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಪ್ರಧಾನಿ ನರೇಂದ್ರ ಮೋದಿ ಅವರು ಕೈಗೊಂಡಿರುವ ಸ್ವಚ್ಛ ಭಾರತ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದರೆ, ಮತ್ತೊಂದು ಕಡೆ ಮೋದಿ ಅವರನ್ನು ಮೆಚ್ಚಿಸುವುದಕ್ಕೆ ಅಭಿಯಾನದ ಹೆಸರಲ್ಲಿ ಫೋಟೋ ಕ್ಲಿಕ್ಕಿಸಿಕೊಳ್ಳುತ್ತಿರುವವರು ಹೆಚ್ಚಿದ್ದಾರೆ.

ಆದರೆ, ಇಂತಹವರಿಗೆ ಪಾಠ ಕಲಿಸಲೆಂದೇ ಮೋದಿ ಅವರು ತಾವೇ ಸ್ವತಃ ಸ್ವಚ್ಛತೆ ಕಾರ್ಯಕ್ರಮದಲ್ಲಿ ತೊಡಗಿಕೊಂಡಿದ್ದಾರೆ.

ಗಂಗಾ ನದಿಯ ತೀರದಲ್ಲಿರುವ ಕಸವನ್ನು ತೆಗೆದುಹಾಕಿದ ಮೋದಿ, ಜನರಿಂದ ಸ್ವಚ್ಛತಾ ಕಾರ್ಯಕ್ರಮಕ್ಕೆ ಉತ್ತಮ ಬೆಂಬಲ ದೊರೆಯುತ್ತಿದೆ. ಇಂತಹ ಬೆಂಬಲ ಉತ್ತರಪ್ರದೇಶದ ಜನತೆಯಿಂದಲೂ ನಾನು ನಿರೀಕ್ಷಿಸುತ್ತೇನೆ ಎಂದು ಹೇಳಿದ್ದಾರೆ.

ಅಖಿಲೇಶ್ ಯಾದವ್, ಭೋಜ್‌ಪುರಿ ನಟ ಮನೋಜ್ ತಿವಾರಿ, ಸುಫಿ ಗಾಯ ಕೈಲಾಶ್ ಖೇರ್, ಹಾಸ್ಯನಟ ರಾಜು ಶ್ರೀವತ್ಸವ್, ಕ್ರಿಕೆಟಿಗರಾದ ಮೊಹದ್ ಕೈಫ್ ಮತ್ತು ಸುರೇಶ್ ರೈನಾ, ಸೇರಿದಂತೆ 9 ಮಂದಿಯನ್ನು ನಾಮಿನೇಟ್ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT