ಸಾಂದರ್ಭಿಕ ಚಿತ್ರ- ಸಿಬಿಐ 
ದೇಶ

ಕಲ್ಲಿದ್ದಲು ಹಗರಣ ಸಿಬಿಐ ಯು-ಟರ್ನ್

ನವದೆಹಲಿ: ಕಲ್ಲಿದ್ದಲು ನಿಕ್ಷೇಪ ಹಂಚಿಕೆ ಹಗರಣಕ್ಕೆ ಸಂಬಂಧಿಸಿ ಸಿಬಿಐ ಯು-ಟರ್ನ್ ಹೊಡೆದಿದೆ. ಈವರೆಗೆ ಏನೋ ಹೇಳುತ್ತಿದ್ದ ಸಿಬಿಐ ಈಗ ತನ್ನ ಹೇಳಿಕೆಯನ್ನೇ ಬದಲಾಯಿಸಿದೆ.

ಕೈಗಾರಿಕೋದ್ಯಮಿ ಕುಮಾರ ಮಂಗಲಂ ಬಿರ್ಲಾ, ಕಲ್ಲಿದ್ದಲು ಮಾಜಿ ಕಾರ್ಯದರ್ಶಿ ಪಿ.ಸಿ ಪಾರಖ್ ಮತ್ತು ಇತರರ ವಿರುದ್ಧದ ಆರೋಪವನ್ನು ಅಲ್ಲಗಳೆದು, ಸಮಾಪ್ತಿ ವರದಿ ಸಲ್ಲಿಸಿದ್ದ ಸಿಬಿಐ ಈಗ ಈ ಆರೋಪಿಗಳ ವಿರುದ್ಧ ಸಾಕಷ್ಟು ಸಾಕ್ಷ್ಯಗಳಿವೆ ಎನ್ನುವ ಮೂಲಕ ಎಲ್ಲರನ್ನೂ ಅಚ್ಚರಿಗೆ ನೂಕಿದೆ.

ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ವಿಶೇಷ ಸರ್ಕಾರಿ ವಕೀಲ ಆರ್, ಎಸ್, ಚೀಮಾ ಅವರು ಸೋಮವಾರ ಸಿಬಿಐ ವಿಶೇಷ ನ್ಯಾಯಾಧೀಶರ ಮುಂದೆ ಹಾಜರಾಗಿ, ಅ. 21ರಂದು ಸಿಬಿಐ ಸಲ್ಲಿಸಿದ್ದ ಸಮಾಪ್ತಿ ವರದಿಯನ್ನು ಮತ್ತೆ ಪರಿಗಣನೆಗೆ ತೆಗೆದುಕೊಳ್ಳುವಂತೆ ತಿಳಿಸಿದ್ದಾರೆ.

ಮೇಲ್ನೋಟಕ್ಕೆ ಹಗರಣದಲ್ಲಿ ಖಾಸಗಿ ವ್ಯಕ್ತಿಗಳು ಮತ್ತು ಕೆಲವು ಸರ್ಕಾರಿ ಅಧಿಕಾರಿಗಳು ಪಾಲ್ಗೊಂಡಿರುವ ಬಗ್ಗೆ ಸಾಕ್ಷ್ಯಗಳಿವೆ. ಹಾಗಾಗಿ ಅವರ ವಿರುದ್ಧದ ಆರೋಪಗಳ ಬಗ್ಗೆ ಪರಿಶೀಲನೆ ನಡೆಸಬಹುದು ಎಂದು ಚೀಮಾ ಹೇಳಿದ್ದಾರೆ. ಜತೆಗೆ ಪ್ರಕರಣಕ್ಕೆ ಸಂಬಂಧಸಿದ ಕೆಲವು ದಾಖಲೆಗಳನ್ನೂ ನ್ಯಾಯಾಲಯಕ್ಕೆ ಒದಗಿಸಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ಸಮಾಪ್ತಿ ವರದಿಯ ಪರಿಶೀಲನೆಯ ದಿನಾಂಯವನ್ನು ನ. 25ಕ್ಕೆ ನಿಗದಿ ಮಾಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತೀಯ ನಾವಿಕರ ಹತ್ಯೆ: ಅಮೆರಿಕಾ ಆದೇಶಗಳ ಪಾಲಿಸುವ 'obedient servant': ಪ್ರಧಾನಿ ಮೋದಿ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ಭಾರತೀಯ ನಾವಿಕರ ಸಾವು: ‘ವಾಣಿಜ್ಯ ಹಡಗುಗಳ ಮೇಲಿನ ದಾಳಿ ನ್ಯಾಯಸಮ್ಮತವಲ್ಲ’; ಅಮೆರಿಕಾಗೆ ಭಾರತ ಖಡಕ್‌ ಸಂದೇಶ, ರಾಜತಾಂತ್ರಿಕ ಸಂಘರ್ಷ ಉಲ್ಬಣ

ಬೆಂಗಳೂರು ಅಭಿವೃದ್ಧಿ ಖಾತೆ ಹಗ್ಗಜಗ್ಗಾಟ: ಅಧಿಕಾರಗಳ ಬಗ್ಗೆ ಸ್ಪಷ್ಟತೆ ಸಿಕ್ಕ ಬಳಿಕವಷ್ಟೇ ಅಧಿಕಾರ ಸ್ವೀಕಾರ: ಕೃಷ್ಣ ಬೈರೇಗೌಡ

ಯಾವುದೇ ನಾಗರಿಕರು ಮತದಾನದ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಸಚಿವರು, DCಗಳಿಗೆ CM ಡಿಕೆಶಿ ಖಡಕ್ ಸೂಚನೆ

ವಿದ್ಯಾರ್ಥಿಗಳ ಉಚಿತ ಬಸ್ ಪಾಸ್ ಯೋಜನೆಗೆ ಭರ್ಜರಿ ಸ್ಪಂದನೆ; 2 ದಿನದಲ್ಲಿ 2,764 ಪಾಸ್ ವಿತರಣೆ

SCROLL FOR NEXT