ಸಂತಾನಹರಣ ಶಸ್ತ್ರಕ್ರಿಯಾ ಶಿಬಿರ 
ದೇಶ

ಛತ್ತೀಸ್‌ಗಡ ಶಸ್ತ್ರಚಿಕಿತ್ಸೆ ಅವಘಡ: ತುಕ್ಕು ಹಿಡಿದ ಉಪಕರಣ ಬಳಸಿದ ವೈದ್ಯರು

ಸಂತಾನಹರಣ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಶಸ್ತ್ರಕ್ರಿಯೆ ಮಾಡಿದ್ದ...

ಛತ್ತೀಸ್‌ಗಡ: ಸಂತಾನಹರಣ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಶಸ್ತ್ರಕ್ರಿಯೆ ಮಾಡಿದ್ದ ಅಲ್ಲಿನ ವೈದ್ಯರು ತುಕ್ಕು ಹಿಡಿದ ಉಪಕರಣಗಳನ್ನು ಬಳಸಿದ್ದರು ಎಂಬ ವಿಷಯ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಮಹಿಳೆಯರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ, ಆದರೆ ಪ್ರಕರಣಕ್ಕೆ ವೈದ್ಯರು ಬಳಸಿರುವ ಔಷಧಿ ಹಾಗೂ ತುಕ್ಕು ಹಿಡಿದ ಉಪಕರಣಗಳೇ ಕಾರಣವಾಗಿರಬಹುದು ಎಂದು ಹಿರಿಯ ಅಧಿಕಾರಿ ಸಿದ್ಧಾರ್ಥ್ ಕೋಮಲ್ ಸಿಂಗ್ ಹೇಳಿದ್ದಾರೆ.

ಜನಸಂಖ್ಯಾ ಸ್ಫೋಟ ನಿಯಂತ್ರಿಸುವ ಸಲುವಾಗಿ ಬಿಲಾಸ್ ಪುರದಲ್ಲಿ ಛತ್ತೀಸ್‌ಘಡದ ಸರ್ಕಾರ ಸಂತಾನಹರಣ ಶಸ್ತ್ರಚಿಕಿತ್ಸಾ ಶಿಬಿರವನ್ನು ಏರ್ಪಡಿಸಿತ್ತು. ಶಿಬಿರದಲ್ಲಿ ಡಾ.ಆರ್.ಕೆ. ಗುಪ್ತಾ ಸೇರಿದಂತೆ ಅವರ ಇಬ್ಬರು ಸಹಾಯಕ ಸಿಬ್ಬಂದಿಗಳು ಸೇರಿ ಕೇವಲ ಕೆಲವು ಘಂಟೆಗಳಲ್ಲಿ ಸುಮಾರು 80 ಮಹಿಳೆಯರಿಗೆ ಸಂತಾನಹರಣ ಶಸ್ತ್ರಕ್ರಿಯೆ ನಡೆಸಿದ್ದರು. ಶಸ್ತ್ರಚಿಕಿತ್ಸೆ ನಂತರ 11 ಮಂದಿ ಮಹಿಳೆಯರು ಸಾವನ್ನಪ್ಪಿದ್ದರಲ್ಲದೇ 49 ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ 20 ಮಹಿಳೆಯರ ಸ್ಥಿತಿ ಇಂದಿಗೂ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಚಿನ್ನಸ್ವಾಮಿ ಮೈದಾನದಲ್ಲಿ CSK ಮಣಿಸಿದ RCB, ಚೆನ್ನೈಗೆ ಸತತ 3ನೇ ಸೋಲು!

ಗುಜರಾತ್ ಜನರು ಅನಕ್ಷರಸ್ಥರು..; ಮೋದಿ, ಪಿಣರಾಯಿ ವಿಜಯನ್ ಜನರ ದಾರಿ ತಪ್ಪಿಸಿದ್ದಾರೆ: Mallikarjun Kharge

ಟ್ರಂಪ್ 48 ಗಂಟೆಗಳ ಗಡುವು ಬೆನ್ನಲ್ಲೇ ಇರಾನ್‌ನ ಮತ್ತೊಬ್ಬ IRGC ಹಿರಿಯ ಕಮಾಂಡರ್ ಹತ್ಯೆಗೈದ ಇಸ್ರೇಲ್!

Operation Eagle Claw ವೈಫಲ್ಯ, ಮಣ್ಣು ಮುಕ್ಕಿದ್ದು ಮರೆತುಬಿಟ್ರಾ? 'ಈ ಸಂದೇಶ' ನೆನಪಿಡಿ: US Crazy Bast*rds ಪೋಸ್ಟ್ ಗೆ ಇರಾನ್ ವ್ಯಂಗ್ಯ!

IPL 2026: ಚಿನ್ನಸ್ವಾಮಿಯಲ್ಲಿ ಸಿಕ್ಸರ್​ಗಳ ಸುರಿಮಳೆ; CSK ವಿರುದ್ಧ ದಾಖಲೆಯ 250 ರನ್ ಪೇರಿಸಿದ RCB

SCROLL FOR NEXT