ಸಂತಾನಹರಣ ಶಸ್ತ್ರಕ್ರಿಯಾ ಶಿಬಿರ 
ದೇಶ

ಛತ್ತೀಸ್‌ಗಡ ಶಸ್ತ್ರಚಿಕಿತ್ಸೆ ಅವಘಡ: ತುಕ್ಕು ಹಿಡಿದ ಉಪಕರಣ ಬಳಸಿದ ವೈದ್ಯರು

ಸಂತಾನಹರಣ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಶಸ್ತ್ರಕ್ರಿಯೆ ಮಾಡಿದ್ದ...

ಛತ್ತೀಸ್‌ಗಡ: ಸಂತಾನಹರಣ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ ಶಸ್ತ್ರಕ್ರಿಯೆ ಮಾಡಿದ್ದ ಅಲ್ಲಿನ ವೈದ್ಯರು ತುಕ್ಕು ಹಿಡಿದ ಉಪಕರಣಗಳನ್ನು ಬಳಸಿದ್ದರು ಎಂಬ ವಿಷಯ ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ.

ಮಹಿಳೆಯರ ಸಾವಿಗೆ ನಿಖರ ಕಾರಣ ಇನ್ನೂ ತಿಳಿದು ಬಂದಿಲ್ಲ, ಆದರೆ ಪ್ರಕರಣಕ್ಕೆ ವೈದ್ಯರು ಬಳಸಿರುವ ಔಷಧಿ ಹಾಗೂ ತುಕ್ಕು ಹಿಡಿದ ಉಪಕರಣಗಳೇ ಕಾರಣವಾಗಿರಬಹುದು ಎಂದು ಹಿರಿಯ ಅಧಿಕಾರಿ ಸಿದ್ಧಾರ್ಥ್ ಕೋಮಲ್ ಸಿಂಗ್ ಹೇಳಿದ್ದಾರೆ.

ಜನಸಂಖ್ಯಾ ಸ್ಫೋಟ ನಿಯಂತ್ರಿಸುವ ಸಲುವಾಗಿ ಬಿಲಾಸ್ ಪುರದಲ್ಲಿ ಛತ್ತೀಸ್‌ಘಡದ ಸರ್ಕಾರ ಸಂತಾನಹರಣ ಶಸ್ತ್ರಚಿಕಿತ್ಸಾ ಶಿಬಿರವನ್ನು ಏರ್ಪಡಿಸಿತ್ತು. ಶಿಬಿರದಲ್ಲಿ ಡಾ.ಆರ್.ಕೆ. ಗುಪ್ತಾ ಸೇರಿದಂತೆ ಅವರ ಇಬ್ಬರು ಸಹಾಯಕ ಸಿಬ್ಬಂದಿಗಳು ಸೇರಿ ಕೇವಲ ಕೆಲವು ಘಂಟೆಗಳಲ್ಲಿ ಸುಮಾರು 80 ಮಹಿಳೆಯರಿಗೆ ಸಂತಾನಹರಣ ಶಸ್ತ್ರಕ್ರಿಯೆ ನಡೆಸಿದ್ದರು. ಶಸ್ತ್ರಚಿಕಿತ್ಸೆ ನಂತರ 11 ಮಂದಿ ಮಹಿಳೆಯರು ಸಾವನ್ನಪ್ಪಿದ್ದರಲ್ಲದೇ 49 ಮಂದಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರಲ್ಲಿ 20 ಮಹಿಳೆಯರ ಸ್ಥಿತಿ ಇಂದಿಗೂ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

SCROLL FOR NEXT