ಬೆಂಗಳೂರು ವಿಶ್ವವಿದ್ಯಾಲಯದ (ಸಾಂದರ್ಭಿಕ ಚಿತ್ರ ) 
ದೇಶ

ಬೆಂವಿವಿ ಕುಲಪತಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು ವಿವಿ ಕುಲಪತಿ, ಕುಲಸಚಿವರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರ...

ಅಶಿಸ್ತಿಗೆ ನೋಟಿಸು ಜಾರಿ ಹಿನ್ನೆಲೆಯಲ್ಲಿ ಪ್ರತೀಕಾರದ ಕ್ರಮ: ಕುಲಪತಿ

ಬೆಂಗಳೂರು: ಬೆಂಗಳೂರು ವಿವಿ ಕುಲಪತಿ, ಕುಲಸಚಿವರು ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರ ವಿರುದ್ಧ ಹಾಲಿ ಹಾಗೂ ನಿವೃತ್ತ ಮಹಿಳಾ ಪ್ರಾಧ್ಯಾಪಕರು ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ವಿವಿ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಹೊನ್ನು ಸಿದ್ದಾರ್ಥರ ವಿರುದ್ಧ ಕಿರುಕುಳ ದೂರು ನೀಡಲಾಗಿದೆ. ಆದರೆ, ಕುಲಪತಿ ಹಾಗೂ ಕುಲಸಚಿವರು ಇದನ್ನು ಗಂಭೀರವಾಗಿ ಪರಿಗಣಿಸದೇ ಇನ್ನಷ್ಟು ಕಿರುಕುಳ ನೀಡುತ್ತಿದ್ದಾರೆ. ಮೂವರ ವಿರುದ್ಧವೂ ಕಾನೂನು ಕ್ರಮ ಜರುಗಿಸುವಂತೆ 4 ಹಾಲಿ ಹಾಗೂ ಇಬ್ಬರು ನಿವೃತ್ತ ಪ್ರಾಧ್ಯಾಪಕರು ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸಾ ಅವರಿಗೆ ದೂರು ನೀಡಿದ್ದಾರೆ.

ವಿಭಾಗದಲ್ಲಿ ನಡೆಯುತ್ತಿರುವ ಕಿರುಕುಳದ ಬಗ್ಗೆ ಸುಮಾರು ಒಂದು ವರ್ಷದಿಂದ ವಿವಿಯ ಹಿರಿಯ ಅಧಿಕಾರಿಗಳಿಗೆ ದೂರು ನೀಡಲಾಗಿದೆ. ಆದರೆ ವಿಚಾರಣೆ ನಡೆಸುವ ಬದಲು ದೂರುದಾರರಿಗೆ ಕಿರುಕುಳ ನೀಡಲಾಗಿದೆ.

ಮತ್ತೊಂದೆಡೆ ದೂರುದಾರರನ್ನು ಕಡೆಗಣಿಸಿ, ಬೇಜವಾಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಪ್ರೊ.ಬಿ.ತಿಮ್ಮೇಗೌಡ ಹಾಗೂ ಸೀತಮ್ಮ ವಿರುದ್ಧ ದೂರು ನೀಡಲಾಗಿದೆ. ಕನ್ನಡ ವಿಭಾಗದ ಮುಖ್ಯಸ್ಥ ಹೊನ್ನು ಸಿದ್ದಾರ್ಥ ಅವರು ಕಚೇರಿಯಲ್ಲಿ ಅಮಾನವೀಯವಾಗಿ ನಡೆಸಿಕೊಂಡಿದ್ದಾರೆ. ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಆಯೋಗಕ್ಕೆ ನೀಡಿರುವ ದೂರಿನಲ್ಲಿ ಹೇಳಲಾಗಿದೆ.

ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸಾ 'ಕನ್ನಡಪ್ರಭ'ದೊಂದಿಗೆ ಮಾತನಾಡಿ, ಪ್ರಾಧ್ಯಾಪಕರ ದೂರು ನನ್ನ ಕೈ ಸೇರಿದೆ. ಪ್ರಾಥಮಿಕ ವಿಚಾರಣೆ ನಡೆಸಿ ಮುಂದಿನ ಕ್ರಮ ಜರುಗಿಸುತ್ತೇವೆ ಎಂದು ಹೇಳಿದ್ದಾರೆ.

ವಿವಿ ಗಮನಕ್ಕೆ ತಾರದೇ ಮಹಿಳಾ ಆಯೋಗದ ಮೆಟ್ಟಿಲು ಹತ್ತಿರುವುದು ಸರಿಯಲ್ಲ. ಬುಧವಾರ ನಡೆಯುವ ಸಿಂಡಿಕೇಟ್ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು.
ಸೀತಮ್ಮ, ಕುಲಸಚಿವೆ

ದೂರು ನೀಡಿರುವ ಪ್ರಾಧ್ಯಾಪಕಿಯರು ಸಮಯಕ್ಕೆ ಸರಿಯಾಗಿ ವಿಭಾಗಕ್ಕೆ ಬರುತ್ತಿರಲಿಲ್ಲ. ಅವರ ವಿರುದ್ಧ ಸಾಕಷ್ಟು ಆರೋಪಗಳಿವೆ. ಈ ಸಂಬಂಧ ವಿಭಾಗದ ಮುಖ್ಯಸ್ಥರು ನೋಟಿಸ್ ನೀಡಿದ್ದರು. ಇದಕ್ಕೆ ಪ್ರತಿಯಾಗಿ ಕಿರುಕುಳದ ದೂರು ನೀಡಿದ್ದಾರೆ.
ಪ್ರೊ.ಬಿ.ತಿಮ್ಮೇಗೌಡ, ಕುಲಪತಿ 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

SCROLL FOR NEXT