ಜಿತನ್ ರಾಮ್ ಮಾಂಜಿ 
ದೇಶ

ಮೇಲ್ಜಾತಿ ಜನರು ವಿದೇಶಿಯರು: ಸಿಎಂ ಮಾಂಜಿ ಹೇಳಿಕೆಗೆ ಬಿಜೆಪಿ ಕಿಡಿ

ಪಾಟ್ನಾ: ಮೇಲ್ಜಾತಿ ಜನರು ವಿದೇಶಿಯರು ಎಂದು ಹೇಳುವ ಮೂಲಕ ಬಿಹಾರ ಮುಖ್ಯಮಂತ್ರಿ ಜಿತನ್ ರಾಮ್ ಮಾಂಜಿ ಅವರು ಜಾತಿ ಉದ್ವಿಗ್ನತೆಯನ್ನು ಪ್ರಚೋದಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಮಾಂಜಿ ಹೇಳಿಕೆ ಹಲವರ ಕಣ್ಣನ್ನು ಕೆಂಪಾಗಿಸಿವೆ. ಮೇಲ್ಜಾತಿ ಜನರ ಜನಾಂಗೀಯತೆ ಪ್ರಶ್ನಿಸುವುದರ ಮೂಲಕ ಸಮಾಜದ ವಿವಿಧ ವಿಭಾಗಗಳ ನಡುವೆ ವಿಷ ಬೀಜ ಬಿತ್ತಲು ಬಿಹಾರ್ ಸಿಎಂ ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿಯ ಸುಶೀಲ್ ಮೋದಿ ಆರೋಪಿಸಿದ್ದಾರೆ.

"ಮಾಂಜಿ ಈ ರೀತಿಯ ಪ್ರಮಾದಗಳನ್ನು ಎಸಗುತ್ತಿರುವುದು ಇದೇ ಮೊದಲಲ್ಲ. ಈ ಮೊದಲು ಕೂಡ ಅವರು ಸಾಮಾಜಿಕ ನೆಲೆಯಲ್ಲಿ ಜನರನ್ನು ವಿಭಾಗಿಸಲು ನೋಡಿದ್ದರು" ಎಂದು ಬಿಜೆಪಿ ನಾಯಕ ಕಿಡಿಕಾರಿದ್ದಾರೆ.

ಕಳೆದ ಮಂಗಳವಾರ ಬೆಟ್ಟೈನಲ್ಲಿ ಸಮಾರಂಭವೊಂದನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಮಾಂಜಿ, ಮೇಲ್ಜಾತಿಯ ಜನರು ವಿದೇಶಿಗರು ಮತ್ತು ಆರ್ಯನ್ ಜನಾಂಗದ ವಂಶಸ್ಥರು. ಅವರು ಅನ್ಯ ದೇಶದಿಂದ ಬಂದವರಾಗಿದ್ದಾರೆ. ಕೇವಲ ಬುಡಕಟ್ಟು ಜನಾಂಗದವರು ಮತ್ತು ದಲಿತರು ಇಲ್ಲಿನ ಮೂಲ ನಿವಾಸಿಗಳು ಎಂಬ ಹೇಳಿಕೆ ತೀವ್ರ ವಿವಾದಕ್ಕೆ ಎಡೆ ಮಾಡಿಕೊಟ್ಟಿದ್ದರು.

ಮುಖ್ಯಮಂತ್ರಿಗಳ ಭಾಷಣ ನೆರೆದವರಿಗೆ ಅರಿವನ್ನು ಮೂಡಿಸುವುದಾಗಿತ್ತು ಮತ್ತು ಮುಂದಿನ ವರ್ಷ ನಡೆಯಲಿರುವ ಚುನಾವಣೆಯಲ್ಲಿ ಸರಕಾರವನ್ನು ರಚಿಸುವಲ್ಲಿ ಜನರು ಹೇಗೆ ಪ್ರಮುಖ ಪಾತ್ರವನ್ನು ವಹಿಸಬಲ್ಲರು ಎಂಬುದನ್ನು ಮನವರಿಕೆ ಮಾಡುವುದಾಗಿತ್ತು ಎಂದು  ಜೆಡಿಯು ತಮ್ಮ ನಾಯಕನ ಹೇಳಿಕೆಯನ್ನು ಸಮರ್ಥಿಸಿಕೊಂಡಿದೆ.
 



Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT