ದೇಶ

ಸಂತಾನ ಹರಣ ಶಸ್ತ್ರಚಿಕಿತ್ಸೆ: ಸಾವಿನ ಸಂಖ್ಯೆ 13ಕ್ಕೆ ಏರಿಕೆ

ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆಯ ಅವಾಂತರಗಳು ಇನ್ನೂ ನಿಂತಿಲ್ಲ...

ರಾಯ್ಪುರ/ಬಿಲಾಸ್‌ಪುರ: ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆಯ ಅವಾಂತರಗಳು ಇನ್ನೂ ನಿಂತಿಲ್ಲ.

ಚತ್ತೀಸ್‌ಗಡದ ಬಿಲಾಸ್‌ಪುರ ಜಿಲ್ಲೆಯ ಪಂಡೇರಾ ಎಂಬಲ್ಲಿ ನಡೆದ ಶಸ್ತ್ರಚಿಕಿತ್ಸೆಯಿಂದಾಗಿ ಮತ್ತೋರ್ವ ಮಹಿಳೆ ಮೃತಪಟ್ಟಿದ್ದು, ಸಾವಿನ ಸಂಖ್ಯೆ 13ಕ್ಕೇರಿದೆ.

ಸಂತಾನ ಶಕ್ತಿ ಹರಣ ಶಸ್ತ್ರಚಿಕಿತ್ಸೆಯ ಅವಾಂತರದಿಂದ ಇನ್ನು 32 ಮಹಿಳೆಯರು ಅಸ್ವಸ್ಥರಾಗಿದ್ದು, ಸ್ಥಿತಿ ಚಿಂತಾಜನಕವಾಗಿದೆ ಎಂದು ಮೂಲಗಳು ತಿಳಿಸಿವೆ.

ಚತ್ತೀಸ್‌ಗಡ ವೈದ್ಯಕೀಯ ಸಂಸ್ಥೆ ದುರಂತದಲ್ಲಿ ಸಾವಿಗೀಡಾದ ಮಹಿಳೆಯರ ಸಂಖ್ಯೆ 11 ಎಂದು ಹೇಳುತ್ತಿದೆ. ಆದರೆ ಮೂಲಗಳ ಪ್ರಕಾರ ದುರಂತದಲ್ಲಿ ಸಾವನ್ನಪ್ಪಿದ ಮಹಿಳೆಯರ ಸಂಖ್ಯೆ 13 ಎಂದು ತಿಳಿದು ಬಂದಿದೆ.

ಚತ್ತೀಸ್‌ಗಡ್‌ನ ಬಿಲಾಸ್‌ಪುರದಲ್ಲಿ ಕಳೆದ ಶನಿವಾರ ಸರ್ಕಾರ ಆಯೋಜಿಸಿದ್ದ ಕುಟುಂಬ ನಿಯಂತ್ರಣ ಶಸ್ತ್ರಚಿಕಿತ್ಸಾ ಶಿಬಿರದಲ್ಲಿ, ಶಸ್ತ್ರಚಿಕಿತ್ಸೆಯ ನಂತರ 8 ಮಹಿಳೆಯರು ಸಾವನ್ನಪ್ಪಿದ್ದರು. ಬಿಲಾಸ್ ಪುರದಲ್ಲಿ ಪ್ರದೇಶದಲ್ಲಿ ಆಯೋಜಿಸಲಾಗಿದ್ದ ಈ ಶಿಬಿರದಲ್ಲಿ 80ಕ್ಕೂ ಹೆಚ್ಚು ಮಹಿಳೆಯರು ಸಂತಾನ ನಿಯಂತ್ರಣ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT