ಮೀಸಲಾತಿ ಮಿರೋಧಿ ಪ್ರತಿಭಟನೆ (ಸಂಗ್ರಹ ಚಿತ್ರ) 
ದೇಶ

ಮರಾಠರಿಗೆ ಉದ್ಯೋಗ ಮೀಸಲಾತಿ: ಹೈಕೋರ್ಟ್ ನಿಂದ ಆದೇಶ ವಜಾ

ಮರಾಠರಿಗೆ ಮಹಾರಾಷ್ಟ್ರದ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ೧೬% ಮೀಸಾಲಾತಿ...

ಮುಂಬೈ: ಮರಾಠರಿಗೆ ಮಹಾರಾಷ್ಟ್ರದ ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ೧೬% ಮೀಸಾಲಾತಿ ಸೃಷ್ಟಿಸಿದ್ದ ಹಿಂದಿನ ಕಾಂಗ್ರೆಸ್-ಎನ್ ಸಿ ಪಿ ಸರ್ಕಾರದ ಆದೇಶವನ್ನು ಮುಂಬೈ ಉಚ್ಛ ನ್ಯಾಯಾಲಯ ವಜಾ ಮಾಡಿದೆ.

ಈ ನಿರ್ಣಯ ಸಂವಿಧಾನ ವಿರೋಧಿ ಎಂಬ ಸಾರ್ವಜನಿಕ ಅರ್ಜಿಯ ಹಿನ್ನಲೆಯಲ್ಲಿ ಕೋರ್ಟ್ ಈ ತೀರ್ಪು ನೀಡಿದೆ.

ಸಾರ್ವಜನಿಕ ಸೇವೆಗಳಲ್ಲಿ ಮುಸ್ಲಿಮರಿಗೆ ೫% ಮೀಸಲಿಟ್ಟಿದ್ದ, ಹಿಂದಿನ ಪೃಥ್ವಿರಾಜ್ ಚೌಹಾನ್ ಸರ್ಕಾರದ ಆದೇಶಕ್ಕೂ ಕೋರ್ಟ್ ತಡೆಯೊಡ್ಡಿದೆ. ಆದರೆ ಶಿಕ್ಷಣ ಸಂಸ್ಥೆಗಳಿಗೆ ಮುಸ್ಲಿಮರಿಗೆ ಕೊಟ್ಟಿದ್ದ ಕೋಟಾವನ್ನು ಮಾತ್ರ ಮನ್ನಣೆ ಮಾಡಿದೆ.

ಸಲ್ಲಿಸಿದ್ದ ಈ ಸಾರ್ವಜನಿಕ ಅರ್ಜಿಯಲ್ಲಿ ಮರಾಠರಿಗೆ ಕೊಟ್ಟಿದ್ದ ಮೀಸಲಾತಿಯನ್ನಷ್ಟೇ ಪ್ರಶ್ನಿಸಿ, ಸರ್ಕಾರ ತನ್ನ ನಿರ್ಣಯವನ್ನು ವಾಪಸ್ ತೆಗೆದುಕೊಳ್ಳಲು ಸೂಚಿಸುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು.

ವಿಧಾನಸಭೆಗೆ ಇನ್ನು ೪ ತಿಂಗಳು ಉಳಿದಿರುವ ಸಮಯದಲ್ಲಿ, ಕಾಂಗ್ರೆಸ್-ಎನ್ ಸಿ ಪಿ ಸರ್ಕಾರ, ಸರ್ಕಾರಿ ಉದ್ಯೋಗಗಳಲ್ಲಿ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಮರಾಠರಿಗೆ ಮತ್ತು ಮುಸ್ಲಿಮರಿಗೆ ಕ್ರಮವಾಗಿ ೧೬% ಮತ್ತು ೫% ಮೀಸಲಾತಿ ಒದಗಿಸುವ ನಿರ್ಣಯ ಕೈಗೊಂಡಿತ್ತು.

ಮರಾಠ ಸಮುದಾಯವನ್ನು ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದವರು ಎಂದು ಸರ್ಕಾರ ತಿಳಿಸಿರುವುದು "ಮಹಾರಾಷ್ಟ್ರದ ಜನತೆಗೆ ಮತ್ತು ಸಮುದಾಯಕ್ಕೆ ಮಾಡಿರುವ ಅವಮಾನ". ಮಾರಾಠ ಎಂಬುವುದು ಮರಾಠಿ ಮಾತನಾಡುವ ಭಾಷಾಮಾಧ್ಯಮದ ಗುಂಪು ಅಷ್ಟೇ ಎಂದು ನ್ಯಾಯಾಲಯಕ್ಕೆ ಸಲ್ಲಿಸಿದ ಸಾರ್ವಜನಿಕ ಅರ್ಜಿಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT