ರಾಷ್ಟ್ರೀಯ ಮಕ್ಕಳ ಪ್ರಶಸ್ತಿ 2014 
ದೇಶ

ರಾಷ್ಟ್ರೀಯ ಮಕ್ಕಳ ಪ್ರಶಸ್ತಿ ಪಡೆದ ಮಾಸ್ಟರ್ ಆಂಜಿನಯ್ಯ

ಅಂಗವೈಕಲ್ಯವಿದ್ದರೂ ಅಸಾಧಾರಣ ಸಾಧನೆ...

ಬೆಂಗಳೂರು: ಅಂಗವೈಕಲ್ಯವಿದ್ದರೂ ಅಸಾಧಾರಣ ಸಾಧನೆ ತೋರಿದ ಬೆಂಗಳೂರಿನ ಮಾಸ್ಟರ್ ಎಲ್.ಆಂಜಿನಯ್ಯ 2014ನೇ ಸಾಲಿನ 'ರಾಷ್ಟ್ರೀಯ ಮಕ್ಕಳ ಪ್ರಶಸ್ತಿ' ಪಡೆದಿದ್ದಾರೆ.

ಮಕ್ಕಳ ದಿನಾಚರಣೆ ಅಂಗವಾಗಿ ನವದೆಹಲಿಯ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ಮಾ.ಆಂಜಿನಯ್ಯ, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಂದ ಪ್ರಶಸ್ತಿ ಪಡೆದಿದ್ದಾರೆ. ಪ್ರಶಸ್ತಿಯು 10,000 ನಗದು ಹಾಗೂ ಬೆಳ್ಳಿ ಪದಕವನ್ನೊಳಗೊಂಡಿದೆ.

ಸಮರ್ಥನಂ ಟ್ರಸ್ಟ್ ಫಾರ್ ಡಿಸೇಬಲ್ಡ್‌ಗೆ ಸೇರಿದ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿರುವ ಮಾ.ಆಂಜಿನಯ್ಯ (12) ಅವರು ಕೈ, ಕಾಲು ಸಹಜವಾಗಿ ಬೆಳೆದಿಲ್ಲ, ಬಳ್ಳಾರಿ ಜಿಲ್ಲೆಯ ಹಡಗಲಿ ತಾಲೂಕಿನ ಹಂಪಸಾಗರ ಮೂಲದವರಾದ ಇವರು ಬಡವ ಕುಟುಂಬಕ್ಕೆ ಸೇರಿದ್ದಾರೆ.

ಬಾಲ್ಯದಲ್ಲಿಯೇ ತಂದೆಯನ್ನು ಕಳೆದುಕೊಂಡಿದ್ದಾರೆ. ಕುಟುಂಬದ ಜವಾಬ್ದಾರಿ ಹೊತ್ತಿರುವ ತಾಯಿ, ಮಗನ ವಿದ್ಯಾಭ್ಯಾಸಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. ಕೈ ಇಲ್ಲದ ಆಂಜಿನಯ್ಯ ಕಾಲಿನಿಂದಲೇ ಬರೆಯುತ್ತಾರೆ. ಚಿತ್ರವನ್ನು ಬಿಡುತ್ತಾರೆ.

ಈತನ ಚಿತ್ರಗಳು ವೃತ್ತಿಪರ ಕಲಾವಿದರಷ್ಟೇ ಉತ್ತಮವಾಗಿದೆ ಎಂಬ ಖ್ಯಾತಿಗೆ ಒಳಗಾಗಿದ್ದು, ರಾಜ್ಯಮಟ್ಟದ ಹಲವು ಸ್ಪರ್ಧೆಗಳಲ್ಲಿಯೂ ಬಹುಮಾನಗಳು ಬಂದಿವೆ.

ಇದೇ ವೇಳೆ ಸಮರ್ಥನಂ ಸಂಸ್ಥೆ ಎರಡನೇ ಬಾರಿಗೆ 'ಇನ್ಸ್‌ಟಿಟ್ಯೂಷನ್ಸ್‌' ವಿಭಾಗದಲ್ಲಿ 'ಮಕ್ಕಳ ಕಲ್ಯಾಣಕ್ಕಾಗಿ ರಾಷ್ಟ್ರೀಯ ಪ್ರಶಸ್ತಿ' ಪಡೆದಿದೆ. ಸಂಸ್ಥೆಯ ಸಂಸ್ಥಾಪಕ ಜಿ.ಕೆ.ಮಹಾಂತೇಶ್ ರಾಷ್ಟ್ರಪತಿಯಿಂದ ಪ್ರಶಸ್ತಿ ಸ್ವೀಕರಿಸಿದರು. 3 ಲಕ್ಷ ನಗದು ಹಾಗೂ ಪದಕವನ್ನು ಈ ಪ್ರಶಸ್ತಿ ಒಳಗೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT