ದೇಶ

ವಿದ್ಯಾವಂತ ಯುವಕರ ಮೇಲೆ ಅಲ್‌ಖೈದಾ ಕಣ್ಣು

ಭಾರತವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಘೋಷಿಸಿರುವ...

ನವದೆಹಲಿ: ಭಾರತವನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವುದಾಗಿ ಘೋಷಿಸಿರುವ ಅಲ್‌ಖೈದಾ ಕಂಪ್ಯೂಟರ್ ಹಾಗೂ ಏರೋನಾಟಿಕ್ಸ್‌ನಲ್ಲಿ ತರಬೇತಿ ಪಡೆದಿರುವ ಭಾರತೀಯ ಯುವಕರನ್ನು ತನ್ನ ಸಂಘಟನೆಗೆ ನೇಮಕ ಮಾಡಿಕೊಳ್ಳಲು ಮುಂದಾಗಿದೆ. ಅದಕ್ಕಾಗಿ ನಿಷೇಧಿತ ಸಿಮಿಯ ನೆರವು ಪಡೆಯಲು ಸಂಚು ರೂಪಿಸಿದೆ.

ಹೀಗೆಂದು ಬೆಂಗಳೂರು, ದೆಹಲಿ, ಕೋಲ್ಕತಾ, ಮುಂಬೈ ಸೇರಿದಂತೆ ಪ್ರಮುಖ ನಗರಗಳ ಪೊಲೀಸರಿಗೆ ಕೇಂದ್ರ ಗುಪ್ತಚರ ಸಂಸ್ಥೆಗಳು ಮಾಹಿತಿ ನೀಡಿವೆ. ಅಲ್‌ಖೈದಾವು ಕೇವಲ ಆಕ್ರಮಣಕಾರಿ ಯುವಕರ ಮೇಲೆ ಮಾತ್ರವಲ್ಲದೆ, ಕಂಪ್ಯೂಟರ್ ಮತ್ತು ವಿಮಾನಗಳ ಬಗ್ಗೆ ತಿಳುವಳಿಕೆ ಇರುವವರ ಮೇಲೂ ಕಣ್ಣಿಟ್ಟಿದೆ. ಇದಕ್ಕಾಗಿ ಇಂಡಿಯನ್ ಮುಜಾಹಿದೀನ್‌ನ ಸಹಸ್ಥಾಪಕರಾದ ರಿಯಾಜ್ ಮತ್ತು ಇಕ್ಬಾಲ್ ಭಟ್ಕಳ್‌ರನ್ನು ಸಂಪರ್ಕಿಸಿರುವ ಅಲ್‌ಖೈದಾ, ಸಿಮಿ ಸ್ಲೀಪರ್ ಸೆಲ್‌ಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದೆ. ಏಕೆಂದರೆ, ಐಎಂ ಈ ಹಿಂದೆ ಸಿವಿಯೊಂದಿಗೆ ಕೈಜೋಡಿಸಿ ಉಗ್ರ ಕೃತ್ಯಗಳನ್ನು ನಡೆಸಿತ್ತು.

ಈ ವಿಚಾರವು ಇಂಡಿಯನ್ ಮುಜಾಹಿದೀನ್ ಮತ್ತು ಅಲ್‌ಖೈದಾ ನಡುವೆ ನಂಟು ಬೆಳೆಯುತ್ತಿದೆಯೇ ಎಂಬ ಅನುಮಾನವನ್ನು ನಿಜವಾಗಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT