ಪಾಕಿಸ್ತಾನ ಪ್ರಧಾನಿ ನವಾಜ್ ಷರೀಫ್ 
ದೇಶ

ಭಾರತದ ಬುಲ್ಲೆಟ್ ಪ್ರೂಫ್ ಕಾರನ್ನು ನಿರಾಕರಿಸಿದ ಪಾಕಿಸ್ತಾನ

ಅಮೆರಿಕಾ ಅಧ್ಯಕ್ಷರೇ ತಮ್ಮ ಸ್ವಂತ ವಾಹನದಲ್ಲಿ ಪ್ರಯಾಣಿಸುತ್ತಿರುವುದರಿಂದ...

ಕಠ್ಮಾಂಡು: ಮುಂದಿನ ವಾರ ನೇಪಾಳದ ಕಠ್ಮಾಂಡುವಿನಲ್ಲಿ ನಡೆಯುವ ದಕ್ಷಿಣ ಏಷ್ಯಾ ಶೃಂಗಸಭೆಗೆ ಪಾಕಿಸ್ತಾನದ ಪ್ರಧಾನಿ ನವಾಜ್ ಷರೀಫ್ ಆಗಮಿಸುತ್ತಿದ್ದು, ಭದ್ರತೆಯ ದೃಷ್ಟಿಯಿಂದ ಭಾರತದ ಪರ ಅವರಿಗೆ ಬುಲ್ಲೆಟ್ ಪ್ರೂಫ್ ಕಾರ್‌ನ್ನು ಒದಗಿಸಲಾಗಿದ್ದು, ಅದನ್ನು ನವಾಜ್ ಷರೀಫ್ ನಿರಾಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಕಠ್ಮಾಂಡು ಶೃಂಗ ಸಭೆಗೆ ಭಾರತದ ಮೂಲಕ ತಲುಪಬೇಕಾಗಿದ್ದು, ಯಾವುದೇ ಅವಘಡಗಳು ಸಂಭವಿಸಿದಂತೆ ಮುಂಜಾಗ್ರತಾ ಕ್ರಮವಾಗಿ ಭಾರತ ಸರ್ಕಾರ ನವಾಜ್ ಷರೀಫ್‌ಗಾಗಿ ವಿಶೇಷ ಸೌಲಭ್ಯಗಳುಳ್ಳ ಬುಲ್ಲೆಟ್ ಪ್ರೂಫ್ ಕಾರನ್ನು ಒದಗಿಸಲು ನಿರ್ಧರಿಸಿತ್ತು. ಆದರೆ ಭಾರತದ ಬುಲ್ಲೆಟ್ ಪ್ರೂಫ್ ಕಾರನ್ನು ನವಾಜ್ ಷರೀಫ್ ತಿರಸ್ಕರಿಸಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಪಾಕಿಸ್ತಾನ ವಿದೇಶಾಂಗ ಸಚಿವಾಲಯದ ವಕ್ತಾರ ಖಾಗಾ ನಥ್ ಅಧಿಕರಿ, ದಕ್ಷಿಣ ಏಷ್ಯಾ ಶೃಂಗಸಭೆಗೆ ಭಾಗವಹಿಸುವುದಕ್ಕಾಗಿ, ಪಾಕಿಸ್ತಾನದಿಂದ ತಮ್ಮದೇ ವಿಶೇಷ ಕಾರಿನಲ್ಲಿ ನವಾಜ್ ಷರೀಫ್ ಪ್ರಯಾಣಿಸಲಿದ್ದಾರೆ. ಅಲ್ಲದೆ ಇತರೆ ಅಧಿಕಾರಿಗಳೂ ಸಹಾ ತಮ್ಮ ತಮ್ಮ ವಾಹನಗಳಲ್ಲಿ ತೆರಳಲಿದ್ದಾರೆ ಎಂದು ಸ್ಪಷ್ಪಪಡಿಸಿದ್ದಾರೆ.

ಅಮೆರಿಕಾ ಅಧ್ಯಕ್ಷರೇ ತಮ್ಮ ಸ್ವಂತ ವಾಹನದಲ್ಲಿ ಪ್ರಯಾಣಿಸುತ್ತಿರುವುದರಿಂದ, ಪಾಕಿಸ್ತಾನ ಪ್ರಧಾನಿಯೂ ತಮ್ಮದೇ ಕಾರಿನಲ್ಲಿ ಪ್ರಯಾಣಿಸಲಿದ್ದಾರೆ ಎಂದು ಖಾಗಾ ವಿವರಿಸಿದರು.

ಪಾಕಿಸ್ತಾನ ಮತ್ತು ಭಾರತದ ಗುಂಡಿನ ದಾಳಿ ನಡೆಯುವ ಪ್ರದೇಶವನ್ನು ಹೊರತುಪಡಿಸಿ, ಸುರಕ್ಷಿತ ಮಾರ್ಗದ ಮೂಲಕ ಕಠ್ಮಾಂಡುವಿಗೆ ತಲುಪುವುದಾಗಿ ಅವರು ತಿಳಿಸಿದ್ದಾರೆ.

ನವೆಂಬರ್ 26 ಮತ್ತು 27 ರಂದು ಕಠ್ಮಾಂಡವಿನಲ್ಲಿ ನಡೆಯಲಿರುವ ಸಾರ್ಕ್ ಶೃಂಗಸಭೆಗೆ ಭಾರತ, ಪಾಕಿಸ್ತಾನ, ಶ್ರೀಲಂಕಾ, ಬಾಂಗ್ಲಾದೇಶ, ಭೂತಾನ್, ಅಫ್ಘಾನಿಸ್ತಾನ ಹಾಗೂ ಮಾಲ್ಡೀವ್ಸ್ ದೇಶಗಳು ಭಾಗವಹಿಸಲಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT