ರಾಜನಾಥ್ ಸಿಂಗ್ 
ದೇಶ

ನಮ್ಮ ಗಡಿಯೊಳಗೆ ಚೀನಾ ರಸ್ತೆ ನಿರ್ಮಿಸಿದರೆ 'ಧ್ವಂಸ' ಮಾಡುತ್ತೇವೆ: ರಾಜನಾಥ್

ಕನ್ಹಾ ಚಟ್ಟಿ(ಜಾರ್ಖಂಡ್): ಭಾರತದ ಗಡಿಯೊಳಗೆ ರಸ್ತೆಗಳನ್ನು ನಿರ್ಮಿಸದಂತೆ ಚೀನಾಗೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಸೋಮವಾರ ಎಚ್ಚರಿಸಿದ್ದಾರೆ.

ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಜನಾಥ್ ಸಿಂಗ್, ಭಾರತದ ಸೀಮೆಯೊಳಗೆ ರಸ್ತೆಗಳನ್ನು ನಿರ್ಮಿಸಿದಂತೆ ಚೀನಾಗೆ ಎಚ್ಚರಿಸಿದ್ದು, ಒಂದು ವೇಳೆ ಚೀನಾ ಭಾರತದಲ್ಲಿ ರಸ್ತೆಗಳನ್ನು ನಿರ್ಮಿಸಿದ್ದೆ ಆದರೆ ಅಂತಹ ನಿರ್ಮಾಣ ಕಾಮಗಾರಿಗಳನ್ನು ಧ್ವಂಸ ಮಾಡಲಾಗುವುದು ಎಂಬ ಕಟು ಸಂದೇಶವನ್ನು ರವಾನಿಸಿದ್ದಾರೆ.

ಭಾರತದ ಗಡಿಯೊಳಗೆ ನುಸುಳಿ ಚೀನಾ ಇಲ್ಲಿ ರಸ್ತೆಗಳನ್ನು ನಿರ್ಮಾಣ ಮಾಡುತ್ತಿರುವುದನ್ನು ಕೂಡಲೇ ನಿಲ್ಲಿಸಬೇಕು. ನಾವು ಚೀನಾದೊಂದಿಗೆ ಉತ್ತಮ ಬಾಂಧವ್ಯ ಹೊಂದಲು ಬಯಸುತ್ತೇವೆ. ಅದೇ ರೀತಿ ಚೀನಾ ಸಹ ನಮ್ಮ ಭಾವನೆಗೆ ಬೆಲೆ ಕೊಡಬೇಕಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

ಇದನ್ನು ಮೀರಿ ಚೀನಾ ರಸ್ತೆ ನಿರ್ಮಿಸುವ ಕಾಮಗಾರಿಯನ್ನು ಮುಂದುವರೆಸಿದರೆ ಅದನ್ನು ನೋಡುತ್ತಾ ನಾವು ಕೈ ಕಟ್ಟಿ ಕೂರುವುದಿಲ್ಲ. ಅಂತಹ ನಿರ್ಮಾಣ ಕಾಮಗಾರಿಗಳನ್ನು ಧ್ವಂಸ ಮಾಡಲಾಗುವುದು. ಅದನ್ನು ಬಿಟ್ಟು ನಮ್ಮಗೆ ಬೇರೆ ದಾರಿಯಿಲ್ಲ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT