ದೇಶ

1ರು. ರೆವಿನ್ಯೂ ಸ್ಟಾಂಪ್ ಮರುಬಳಕೆಗೆ ಚಿಂತನೆ

ರಾಜ್ಯದಲ್ಲಿ 1ರು ಮುಖ ಬೆಲೆಯ ರೆವಿನ್ಯೂ...

ಬೆಂಗಳೂರು: ರಾಜ್ಯದಲ್ಲಿ 1ರು ಮುಖ ಬೆಲೆಯ ರೆವಿನ್ಯೂ ಸ್ಟ್ಯಾಂಪನ್ನು ಮರುಬಳಸುವ ಕುರಿತು ಸರ್ಕಾರ ಚಿಂತಿಸಿದೆ ಎಂದು ಅಡ್ವೊಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ಹೈಕೋರ್ಟ್ ಗೆ ತಿಳಿಸಿದ್ದಾರೆ.

ಕರ್ನಾಟಕದಲ್ಲಿ 1ರು ಮುಖ ಬೆಲೆಯ ಸ್ಟ್ಯಾಂಪನ್ನು ನಿಷೇಧಿಸಲಾಗಿದೆ. ಆದರೂ ಗದಗ ಹಾಗೂ ಇತರೆ ಜಿಲ್ಲೆಗಳ ಕೆಲವು ರಾಷ್ಟ್ರೀಕೃತ ಬ್ಯಾಂಕ್ಗಳು ದಾಖಲೆ ಹಾಗೂ ವಹಿವಾಟುಗಳಿಗೆ 1ರು ಮುಖ ಬೆಲೆಯ ರೆವೆನ್ಯೂ ಸ್ಟ್ಯಾಂಪ್ ನೀಡುವಂತೆ ಗ್ರಾಹಕರಿಗೆ ಬೇಡಿಕೆ ಇಡುತ್ತಿವೆ. ಆದ್ದರಿಂದ ಬೇರೆ ರಾಜ್ಯದಿಂದ ಈ ಸ್ಟ್ಯಾಂಪ್ಗಳನ್ನು ಕಾಳ ಸಂತೆಯಲ್ಲಿ ಮಾರಲಾಗುತ್ತಿದೆ ಎಂದು ಆರೋಪಿಸಿ ಎಸ್.ವಿ.ದೇಸಾಯಿ ಎಂಬುವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎಚ್.ವಘೇಲಾ ಹಾಗೂ ನ್ಯಾ.ಆರ್.ಬಿ.ಬೂದಿಹಾಳ್ ಅವರಿದ್ದ ವಿಭಾಗೀಯ ಪೀಠ, ರಾಜ್ಯದಲ್ಲಿ ರೆವಿನ್ಯೂ ಸ್ಟ್ಯಾಂಪ್ ಬಳಕೆ ನಿಷೇಧಕ್ಕೆ ಕಾರಣಗಳೇನು ಎಂದು ಆರ್ಟಿಐ ಕಾಯ್ದೆ ಅನ್ವಯ ಮಾಹಿತಿ ಪಡೆದುಕೊಳ್ಳಲು ಇದೇ ವೇಳೆ ಅರ್ಜಿದಾರರಿಗೆ ಸೂಚಿಸಿದೆ.

ಅಬ್ದುಲ್ ಕರೀಂ ಲಾಲ್ ತೆಲಗಿಯ ಛಾಪಾ ಕಾಗದ ಹಗರಣ ಬೆಳಕಿಗೆ ಬಂದ ಬಳಿಕ 2003ರಲ್ಲಿ ಕರ್ನಾಟಕದಲ್ಲಿ 1ರು ರೆವಿನ್ಯೂ ಸ್ಟ್ಯಾಂಪ್ನ್ನು ನಿಷೇಧಿಸಲಾಗಿತ್ತು. ಆದರೆ, ಅದನ್ನು ಪುನಾರಂಭ ಮಾಡುವುದು ಕೇಂದ್ರ ಸರ್ಕಾರಕ್ಕೆ ಸಂಬಂಧಪಟ್ಟ ವಿಚಾರ. ಈ ಕುರಿತು ರಾಜ್ಯ ಸಚಿವ ಸಂಪುಟದಲ್ಲಿ ಚರ್ಚಿಸಬೇಕಾದ ಎಂದು ರಾಜ್ಯ ಅಡ್ವೋಕೇಟ್ ಜನರಲ್ ಪ್ರೊ.ರವಿವರ್ಮ ಕುಮಾರ್ ನ್ಯಾಯಪೀಠಕ್ಕೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT