ಉದ್ಧವ್ ಠಾಕ್ರೆ ಮತ್ತು ನರೇಂದ್ರ ಮೋದಿ (ಸಾಂದರ್ಭಿಕ ಚಿತ್ರ) 
ದೇಶ

ಶಿವಸೇನೆ-ಬಿಜೆಪಿ ಮರುಮೈತ್ರಿ ಸಾಧ್ಯತೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ...

ನವದೆಹಲಿ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮುರಿದುಕೊಂಡಿದ್ದ ಶಿವಸೇನೆ ಮತ್ತೊಮ್ಮೆ ಬಿಜೆಪಿಯೊಂದಿಗೆ ಮರು ಮೈತ್ರಿ ಮಾಡಿಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಬಿಜೆಪಿ ಹಾಗೂ ಶಿವಸೇನೆಯ ಮರು ಮೈತ್ರಿ ಕುರಿತು ಮಧ್ಯಸ್ಥಿಕೆ ವಹಿಸಿ ಸಂಧಾನ ನಡೆಸಿದ್ದ ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರೊಂದಿಗೆ ಈಗಾಗಲೇ ಮಾತುಕತೆ ನಡೆಸಿದ್ದು ಮರುಮೈತ್ರಿಗಾಗಿ ಮನವೊಲಿಸಿದ್ದಾರೆ. ಬಿಜೆಪಿ ಹಾಗೂ ಶಿವಸೇನೆ ಮರುಮೈತ್ರಿಯಾಗುವ ವಿಶ್ವಾಸವಿದೆ ಎಂದು ಶಿವಸೇನಾ  ಮುಖಂಡ ಮನೋಹರ್ ಜೋಷಿ ಹೇಳಿದ್ದಾರೆ.  

ಬಾಳಾ ಠಾಕ್ರೆ ಅವರ ಎರಡನೇ ಪುಣ್ಯ ತಿಥಿಯ ಅಂಗವಾಗಿ ಶಿವಾಜಿ ಉದ್ಯಾನವನದಲ್ಲಿದ್ದ ಠಾಕ್ರೆ ಅವರ ಸಮಾಧಿಗೆ ಗೌರವ ಸಲ್ಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮನೋಹರ್ ಜೋಷಿ, ಬಾಳಾ ಠಾಕ್ರೆಯವರಂತಹ ಮನುಷ್ಯರು ಮತ್ತೆ ಹುಟ್ಟಿ ಬರಲು ಸಾಧ್ಯವೇ ಇಲ್ಲ, ಅವರಿಗೆ ನೆರಳಾಗಿ ಇದ್ದದ್ದು ನನ್ನ ಅದೃಷ್ಟ. ದುರದೃಷ್ಟಕರ ಸಂಗತಿ ಎಂದರೆ ಹಿಂದಿದ್ದ ಸರ್ಕಾರ ಬಾಳ ಠಾಕ್ರೆಯವರ ಸಮಾಧಿಯನ್ನು ಸ್ಮಾರಕವನ್ನಾಗಿ ನಿರ್ಮಿಸಲು ವಿಫಲವಾಗಿದೆ ಎಂದು ತಮ್ಮ ಬೇಸರವನ್ನು ವ್ಯಕ್ತಪಡಿಸಿದರು.

ಹಿಂದುತ್ವದ ಆಧಾರದಲ್ಲಿ ಶಿವಸೇನೆ ಮತ್ತು ಬಿಜೆಪಿ ಮೈತ್ರಿಕೂಟಕ್ಕೆ ಹಿಂತಿರುಗಲಿದ್ದು ಬಿಜೆಪಿ ನೇತೃತ್ವದ ಸರ್ಕಾರದೊಂದಿಗೆ ಕೈ ಜೋಡಿಸುವ ಸಾಧ್ಯತೆ ಇದೆ. ಆದರೆ ಮರು ಮೈತ್ರಿ ಯಾವಾಗ ಆಗುತ್ತದೆ ಎಂಬುದನ್ನು ಹೇಳಲಾಗುವುದಿಲ್ಲ. ಮರುಮೈತ್ರಿ ಕುರಿತ ನಿರ್ಧಾರ ಉದ್ಧವ್‌ಠಾಕ್ರೆ ಮೇಲೆ ಇದ್ದು ಅವರ ನಿರ್ಧಾರದ ನಂತರವಷ್ಟೇ ಹೇಳಲು ಸಾಧ್ಯ ಎಂದ ಅವರು ಮಹಾರಾಷ್ಟ್ರ ಜನತೆ ಖಂಡಿತವಾಗಿಯೂ ಮುಂದೊಂದು ದಿನ ಶಿವಸೇನೆಯ ಮುಖಂಡನೊಬ್ಬ ಮುಖ್ಯಮಂತ್ರಿಯಾಗುವುದನ್ನು ಕಾಣಲಿದ್ದಾರೆ. ಎಂದು ಜೋಷಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

SCROLL FOR NEXT