ರಾಂಪಾಲ್ ಆಶ್ರಮದ ಎದುರು ಜಮಾಯಿಸಿರುವ ಬೆಂಬಲಿಗರು 
ದೇಶ

ಸಂತ ರಾಂಪಾಲ್ ಬೆಂಬಲಿಗರಿಂದ ಪೊಲೀಸರ ಮೇಲೆ ಗುಂಡಿನ ದಾಳಿ

ವಿವಾದಾತ್ಮಕ ಸ್ವಯಂಘೋಷಿತ ದೇವಮಾನವ ರಾಂಪಾಲ್ ಆಶ್ರಮದ ಎದುರು ಜಮಾಯಿಸಿರುವ ಬೆಂಬಲಿಗರು ಪೊಲೀಸರ..

ಹಿಸ್ಸಾರ್(ಹರಿಯಾಣ): ವಿವಾದಾತ್ಮಕ ಸ್ವಯಂಘೋಷಿತ ದೇವಮಾನವ ರಾಂಪಾಲ್ ಆಶ್ರಮದ ಎದುರು ಜಮಾಯಿಸಿರುವ ಬೆಂಬಲಿಗರು ಪೊಲೀಸರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ರಾಂಪಾಲ್ ವಿರುದ್ಧ ಪಂಜಾಬ್ ಮತ್ತು ಹರಿಯಾಣ ಕೋರ್ಟ್ ಹೊಸದಾಗಿ ಜಾಮೀನು ರಹಿತ ಬಂಧನ ವಾರಂಟ್ ಜಾರಿ ಮಾಡಿತ್ತು. ರಾಂಪಾಲ್ ಬಂಧನವನ್ನು ವಿರೋಧಿಸಿ ಅಪಾರ ಸಂಖ್ಯೆಯಲ್ಲಿ ಬೆಂಬಲಿಗರು ಹಿಸ್ಸಾರ್ ಆಶ್ರಮದ ಸುತ್ತ ಜಮಾಯಿಸಿದ್ದಾರೆ. ಈ ವೇಳೆ ರಾಂಪಾಲ್ ಬಂಧನಕ್ಕೆ ಅಡ್ಡಿಪಡಿಸುತ್ತಿರುವ ಭಕ್ತರು ಪೊಲೀಸರ ಎದುರು ಕಲ್ಲು ತುರಾಟ ನಡೆಸಿದ್ದಾರೆ.

ಸದ್ಯ ಭಕ್ತರನ್ನು ಚದುರಿಸಲು ಪೊಲೀಸರು ಆಶ್ರುವಾಯು ಸಿಡಿಸಿದ್ದು, ಆಶ್ರಮದ ಸುತ್ತಮುತ್ತ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಕಲ್ಲು ತೂರಾಟದಲ್ಲಿ ಹಲವು ಪೊಲೀಸರಿಗೆ ಹಾಗೂ ಭಕ್ತರಿಗೆ ಗಾಯಗಳಾಗಿವೆ. ಇದೇ ವೇಳೆ ಪ್ರತಿಭಟನಾ ನಿರತ ಭಕ್ತರನ್ನು ಪೊಲೀಸರು ಬಂಧಿಸುತ್ತಿದ್ದಾರೆ.

ರಾಂಪಾಲ್‌ರನ್ನು ಬಂಧಿಸಿಲು ಮುಂದಾದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಮಹಿಳೆಯರು ಬೆದರಿ ಹಾಕಿದ್ದಾರೆ.

ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಂಪಾಲ್ ವಿರುದ್ಧ ಜಾಮೀನು ರಹಿತ ಬಂಧನ ವಾರೆಂಟ್ ಮಾಡಿರುವ ಹೈಕೋರ್ಟ್, ಶುಕ್ರವಾರದೊಳಗಾಗಿ ರಾಂಪಾಲ್‌ನನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಬೇಕು ಎಂದು ಹರಿಯಾಣ ಸರ್ಕಾರ ಮತ್ತು ಪೊಲೀಸರಿಗೆ ಸೂಚನೆ ನೀಡಿತ್ತು.

ರಾಂಪಾಲ್ ವಿರುದ್ಧ ಕಳೆದ ವಾರವಷ್ಟೇ ಪಂಜಾಬ್ ಮತ್ತು ಹರಿಯಾಣ ಕೋರ್ಟ್ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು. ಅದರಂತೆ ಇಂದು ಕೋರ್ಟ್ ಮುಂದೆ ರಾಂಪಾಲ್‌ನನ್ನು ಹಾಜರುಪಡಿಸಲು ಕೊನೆಯ ದಿನವಾಗಿತ್ತು. ಆದರೆ ಆಶ್ರಮದ ಮುಂದೆ ಕಳೆದ ಒಂದು ವಾರದಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿದ್ದು ಬಂಧನಕ್ಕೆ ವಿರೋಧ ತೋರಿದ್ದಾರೆ.

ಅಪಾರ ಸಂಖ್ಯೆಯಲ್ಲಿ ಭಕ್ತರು ಸೇರಿರುವುದರಿಂದ ರಾಂಪಾಲ್‌ನನ್ನು ಬಂಧಿಸಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿರುವ ಹರಿಯಾಣ ಸರ್ಕಾರ ಇನ್ನು ಒಂದು ಕಾಲಾವಕಾಶ ನೀಡುವಂತೆ ಕಾಲಾವಕಾಶ ನೀಡಿತ್ತು. ಸದ್ಯದ ಪರಿಸ್ಥಿತಿಯನ್ನು ಅರಿತಿರುವ ಹೈಕೋರ್ಟ್ ಇನ್ನು ಮೂರು ದಿನಗಳ ಕಾಲಾವಕಾಶ ನೀಡಿದ್ದು. ನಾಳಿನ ಶುಕ್ರವಾರದಂದು ರಾಂಪಾಲ್‌ನನ್ನು ಕೋರ್ಟ್ ಮುಂದೆ ಹಾಜರುಪಡಿಸುವಂತೆ ಪೊಲೀಸರಿಗೆ ಆದೇಶಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT