ಒಮರ್ ಅಬ್ದುಲ್ಲಾ (ಸಂಗ್ರಹ ಚಿತ್ರ) 
ದೇಶ

ನಾಮಪತ್ರ ಸಲ್ಲಿಸಿದ ಒಮರ್: ಬಿಜೆಪಿ ಪಕ್ಷದ ನಿಲುವಿಗೆ ಟೀಕೆ

ಬೀರ್ವಾ ವಿದಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನ ಕಾರ್ಯಕಾರಿ...

ಶ್ರೀನಗರ: ಬೀರ್ವಾ ವಿದಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನ ಕಾರ್ಯಕಾರಿ ಅಧ್ಯಕ್ಷ ಒಮರ್ ಅಬ್ದುಲ್ಲ, ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಸಂವಿಧಾನದ ೩೭೦ ನೆ ವಿಧಿಯ ಬಗ್ಗೆ ಬಿಜೆಪಿ ಪಕ್ಷ ವಿವಿಧ ಭಾಗಗಳಲ್ಲಿ ಬೇರೆ ಬೇರೆ ರೀತಿಯ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಖಂಡಿಸಿದ್ದಾರೆ.

ಬೀರ್ವಾ ಮತ್ತು ಸೋನಾವರ್ ಈ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಒಮರ್, ಅಬ್ದುಲ್ಲಾ ಕುಟುಂಬದ ಸಾಮಾನ್ಯವಾಗಿ ಸ್ಪರ್ಧಿಸುತ್ತಿದ್ದ ಹಾಗು ತಾವು ೨೦೦೮ ರಲ್ಲಿ ಗೆದ್ದಿದ್ದ ಗಂದೇರ್ ಬಾಲ್ ಕ್ಷೇತ್ರದಿಂದ ಹಿಂದೆ ಸರಿದಿದ್ದಾರೆ.

"೩೭೦ ನೆ ವಿಧಿಯ ಬಗ್ಗೆ ಬಿಜೆಪಿ ಪಕ್ಷದ ಮುಖಂಡರಿಂದ ವಿವಿಧ ವಿರೋಧಾಭಾಸದ ಹೇಳಿಕೆಗಳು ಕೇಳಿಬರುತ್ತಿವೆ. ಇಂತಹ ಸೂಕ್ಷ್ಮ ವಿಷಯದ ಮೇಲೆ ಅವರಿಗೆ ಸ್ಪಷ್ಟತೆ ಇಲ್ಲ" ಎಂದು ನಾಮಪತ್ರ ಸಲ್ಲಿಸಿದ ನಂತರ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

"ಜಮ್ಮು ಕಾಶ್ಮೀರದ ಜನ ಪ್ರವಾಹ ಪರಿಹಾರ ನಿಧಿ ಅಥವಾ ಹಣಕ್ಕಾಗಿ ತಮ್ಮ ಅಂತಃಸಾಕ್ಷಿಯನ್ನು ಮಾರಿಕೊಳ್ಳುವುದಿಲ್ಲ ಎಂದು ಬಿಜೆಪಿ ಪಕ್ಷ ತಿಳಿದುಕೊಳ್ಳಬೇಕಾಗಿದೆ. ಬಿಜೆಪಿ ನಮ್ಮ ರಾಜಕೀಯ ಆಕಾಂಕ್ಷೆ, ನಮ್ಮ ವಿಶಿಷ್ಟ ಗುರುತು ಮತ್ತು ಭಾವನೆಗಳನ್ನು ಗೌರವಿಸಬೇಕು" ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತ ವರ್ತನೆ: ಪೋಕ್ಸೋ ಕೇಸ್ ದಾಖಲಾಗುತ್ತಿದಂತೆ ಮಲ್ಲಿಕಾರ್ಜುನ ಮುತ್ಯಾ video ರಿಲೀಸ್!

SCROLL FOR NEXT