ಒಮರ್ ಅಬ್ದುಲ್ಲಾ (ಸಂಗ್ರಹ ಚಿತ್ರ) 
ದೇಶ

ನಾಮಪತ್ರ ಸಲ್ಲಿಸಿದ ಒಮರ್: ಬಿಜೆಪಿ ಪಕ್ಷದ ನಿಲುವಿಗೆ ಟೀಕೆ

ಬೀರ್ವಾ ವಿದಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನ ಕಾರ್ಯಕಾರಿ...

ಶ್ರೀನಗರ: ಬೀರ್ವಾ ವಿದಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನ ಕಾರ್ಯಕಾರಿ ಅಧ್ಯಕ್ಷ ಒಮರ್ ಅಬ್ದುಲ್ಲ, ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಸಂವಿಧಾನದ ೩೭೦ ನೆ ವಿಧಿಯ ಬಗ್ಗೆ ಬಿಜೆಪಿ ಪಕ್ಷ ವಿವಿಧ ಭಾಗಗಳಲ್ಲಿ ಬೇರೆ ಬೇರೆ ರೀತಿಯ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಖಂಡಿಸಿದ್ದಾರೆ.

ಬೀರ್ವಾ ಮತ್ತು ಸೋನಾವರ್ ಈ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಒಮರ್, ಅಬ್ದುಲ್ಲಾ ಕುಟುಂಬದ ಸಾಮಾನ್ಯವಾಗಿ ಸ್ಪರ್ಧಿಸುತ್ತಿದ್ದ ಹಾಗು ತಾವು ೨೦೦೮ ರಲ್ಲಿ ಗೆದ್ದಿದ್ದ ಗಂದೇರ್ ಬಾಲ್ ಕ್ಷೇತ್ರದಿಂದ ಹಿಂದೆ ಸರಿದಿದ್ದಾರೆ.

"೩೭೦ ನೆ ವಿಧಿಯ ಬಗ್ಗೆ ಬಿಜೆಪಿ ಪಕ್ಷದ ಮುಖಂಡರಿಂದ ವಿವಿಧ ವಿರೋಧಾಭಾಸದ ಹೇಳಿಕೆಗಳು ಕೇಳಿಬರುತ್ತಿವೆ. ಇಂತಹ ಸೂಕ್ಷ್ಮ ವಿಷಯದ ಮೇಲೆ ಅವರಿಗೆ ಸ್ಪಷ್ಟತೆ ಇಲ್ಲ" ಎಂದು ನಾಮಪತ್ರ ಸಲ್ಲಿಸಿದ ನಂತರ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

"ಜಮ್ಮು ಕಾಶ್ಮೀರದ ಜನ ಪ್ರವಾಹ ಪರಿಹಾರ ನಿಧಿ ಅಥವಾ ಹಣಕ್ಕಾಗಿ ತಮ್ಮ ಅಂತಃಸಾಕ್ಷಿಯನ್ನು ಮಾರಿಕೊಳ್ಳುವುದಿಲ್ಲ ಎಂದು ಬಿಜೆಪಿ ಪಕ್ಷ ತಿಳಿದುಕೊಳ್ಳಬೇಕಾಗಿದೆ. ಬಿಜೆಪಿ ನಮ್ಮ ರಾಜಕೀಯ ಆಕಾಂಕ್ಷೆ, ನಮ್ಮ ವಿಶಿಷ್ಟ ಗುರುತು ಮತ್ತು ಭಾವನೆಗಳನ್ನು ಗೌರವಿಸಬೇಕು" ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

ಸ್ಮೃತಿ ಮಂಧಾನ ಮದುವೆ ಮುಂದೂಡಿಕೆಗೆ ಅಸಲಿ ಕಾರಣ? ಮತ್ತೊಂದು ಹೆಣ್ಣಿನೊಂದಿಗೆ ಮೋಹ, ನಂಬಿಕೆ ದ್ರೋಹ; ಬಯಲಾಯ್ತು ಪಲಾಶ್'ನ ಅಸಲಿ ರಂಗಿನಾಟ!

ಅಯೋಧ್ಯ ಧ್ವಜಾರೋಹಣ ನೆರವೇರಿಸಿದ್ದು ಹೇಗೆ?: ಸ್ವಿಚ್ ಅಥವಾ ಹಗ್ಗ ಬಳಸದ ಪ್ರಧಾನಿ; ಈ ಅದ್ಭುತ Video ನೋಡಿ..

SCROLL FOR NEXT