ಒಮರ್ ಅಬ್ದುಲ್ಲಾ (ಸಂಗ್ರಹ ಚಿತ್ರ) 
ದೇಶ

ನಾಮಪತ್ರ ಸಲ್ಲಿಸಿದ ಒಮರ್: ಬಿಜೆಪಿ ಪಕ್ಷದ ನಿಲುವಿಗೆ ಟೀಕೆ

ಬೀರ್ವಾ ವಿದಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನ ಕಾರ್ಯಕಾರಿ...

ಶ್ರೀನಗರ: ಬೀರ್ವಾ ವಿದಾನಸಭಾ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದ ಜಮ್ಮು ಕಾಶ್ಮೀರದ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ ನ ಕಾರ್ಯಕಾರಿ ಅಧ್ಯಕ್ಷ ಒಮರ್ ಅಬ್ದುಲ್ಲ, ರಾಜ್ಯಕ್ಕೆ ವಿಶೇಷ ಸ್ಥಾನಮಾನ ನೀಡಿರುವ ಸಂವಿಧಾನದ ೩೭೦ ನೆ ವಿಧಿಯ ಬಗ್ಗೆ ಬಿಜೆಪಿ ಪಕ್ಷ ವಿವಿಧ ಭಾಗಗಳಲ್ಲಿ ಬೇರೆ ಬೇರೆ ರೀತಿಯ ಹೇಳಿಕೆಗಳನ್ನು ನೀಡುತ್ತಿರುವುದಕ್ಕೆ ಖಂಡಿಸಿದ್ದಾರೆ.

ಬೀರ್ವಾ ಮತ್ತು ಸೋನಾವರ್ ಈ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿರುವ ಒಮರ್, ಅಬ್ದುಲ್ಲಾ ಕುಟುಂಬದ ಸಾಮಾನ್ಯವಾಗಿ ಸ್ಪರ್ಧಿಸುತ್ತಿದ್ದ ಹಾಗು ತಾವು ೨೦೦೮ ರಲ್ಲಿ ಗೆದ್ದಿದ್ದ ಗಂದೇರ್ ಬಾಲ್ ಕ್ಷೇತ್ರದಿಂದ ಹಿಂದೆ ಸರಿದಿದ್ದಾರೆ.

"೩೭೦ ನೆ ವಿಧಿಯ ಬಗ್ಗೆ ಬಿಜೆಪಿ ಪಕ್ಷದ ಮುಖಂಡರಿಂದ ವಿವಿಧ ವಿರೋಧಾಭಾಸದ ಹೇಳಿಕೆಗಳು ಕೇಳಿಬರುತ್ತಿವೆ. ಇಂತಹ ಸೂಕ್ಷ್ಮ ವಿಷಯದ ಮೇಲೆ ಅವರಿಗೆ ಸ್ಪಷ್ಟತೆ ಇಲ್ಲ" ಎಂದು ನಾಮಪತ್ರ ಸಲ್ಲಿಸಿದ ನಂತರ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

"ಜಮ್ಮು ಕಾಶ್ಮೀರದ ಜನ ಪ್ರವಾಹ ಪರಿಹಾರ ನಿಧಿ ಅಥವಾ ಹಣಕ್ಕಾಗಿ ತಮ್ಮ ಅಂತಃಸಾಕ್ಷಿಯನ್ನು ಮಾರಿಕೊಳ್ಳುವುದಿಲ್ಲ ಎಂದು ಬಿಜೆಪಿ ಪಕ್ಷ ತಿಳಿದುಕೊಳ್ಳಬೇಕಾಗಿದೆ. ಬಿಜೆಪಿ ನಮ್ಮ ರಾಜಕೀಯ ಆಕಾಂಕ್ಷೆ, ನಮ್ಮ ವಿಶಿಷ್ಟ ಗುರುತು ಮತ್ತು ಭಾವನೆಗಳನ್ನು ಗೌರವಿಸಬೇಕು" ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT