ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ (ಸಂಗ್ರಹ ಚಿತ್ರ) 
ದೇಶ

ಇಂಡೋ-ಚೀನಾ ಬಿಕ್ಕಟ್ಟು: ಪಿಎಂಒ ವಿಶೇಷ ಪ್ರತಿನಿಧಿಯಾಗಿ ಅಜಿತ್ ದೋವಲ್ ನೇಮಕ

ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ ಅಜಿತ್ ದೋವಲ್‌ರನ್ನು ಪ್ರಧಾನ ಮಂತ್ರಿಗಳ ಕಾರ್ಯಾಲಯದ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಲಾಗಿದೆ.

ನವದೆಹಲಿ: ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ ಅಜಿತ್ ದೋವಲ್‌ರನ್ನು ಪ್ರಧಾನ ಮಂತ್ರಿಗಳ ಕಾರ್ಯಾಲಯದ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಲಾಗಿದೆ.

ಭಾರತ ಮತ್ತು ಚೀನಾ ದೇಶಗಳ ನಡುವಿನ ಗಡಿ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳ ಕಾರ್ಯಾಲಯ ಮಹತ್ವದ ನಿರ್ಣಯ ಕೈಗೊಂಡಿದ್ದು, ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳ ಕಾರ್ಯಾಲಯದ ವಿಶೇಷ ರಾಯಭಾರಿಯಾಗಿ ಅಜಿತ್ ದೋವಲ್‌ರನ್ನು ಸೋಮವಾರ ನೇಮಕ ಮಾಡಲಾಗಿದೆ.

ಪ್ರಸ್ತುತ ರಾಷ್ಟ್ರೀಯ ಭದ್ರತಾ ಸಲಹೆಗಾರರಾಗಿರುವ ಅಜಿತ್ ದೋವಲ್ ಅವರು, ಈ ಹಿಂದೆ ಭಾರತ ಮತ್ತು ಚೀನಾ ದೇಶಗಳ ಗಡಿಯಲ್ಲಿ ಬಿಕ್ಕಟ್ಟು ಏರ್ಪಟ್ಟಾಗ ಕೇಂದ್ರ ಸರ್ಕಾರಕ್ಕೆ ಸೂಕ್ತ ಸಲಹೆಗಳನ್ನು ನೀಡಿದ್ದರು.

ವಿಶ್ವದ ಬಲಾಢ್ಯ ಸೇನೆ ಹೊಂದಿರುವ ರಾಷ್ಟ್ರಗಳ ಪಟ್ಟಿಯಲ್ಲಿ ಭಾರತಕ್ಕಿಂತ ಮೇಲಿನ ಸ್ಥಾನದಲ್ಲಿರುವ ಚೀನಾ, ತನ್ನ ಕೆಂಪು ಸೇನೆಯ ಮೂಲಕ ಭಾರತ ಗಡಿಯನ್ನು ಪದೇ ಪದೇ ಅತಿಕ್ರಮಣ ಮಾಡಿಕೊಳ್ಳುತ್ತಿದೆ. ಕಳೆದ ಸೆಪ್ಟೆಂಬರ್ ತಿಂಗಳಿನಲ್ಲಿಯೂ ಚೀನಾದ ಸೈನಿಕರು ಭಾರತದ ಗಡಿಯಲ್ಲಿರುವ ಚುಮರ್ ಸೆಕ್ಟರ್‌ನಲ್ಲಿ ಅಕ್ರಮವಾಗಿ ಟೆಂಟ್‌ಗಳನ್ನು ಹಾಕಿಕೊಂಡು ಗಡಿಯಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣಗೊಳ್ಳುವಂತೆ ಮಾಡಿದ್ದರು. ಇದಕ್ಕೂ ಮೊದಲು ಇದೇ ಎಲ್‌ಎಸಿ ಬಳಿಯಲ್ಲಿ ಚೀನಾದ ಕೆಲ ಸೈನಿಕರು ಗಡಿಯಲ್ಲಿ ಕುದುರೆ ಸವಾರಿ ಮಾಡುವ ಮೂಲಕ ಭಾರತೀಯ ಸೇನೆಯನ್ನು ಪ್ರಚೋದಿಸಿದ್ದರು.

ಈ ಎಲ್ಲ ಪ್ರಕರಣಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರು ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರ ಗಮನಕ್ಕೆ ತಂದಿದ್ದರು. ಭಾರತ ಪ್ರವಾಸ ಕೈಗೊಂಡಿದ್ದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಭಾರತ ಗಡಿಯಿಂದ ನಮ್ಮ ಸರಹದ್ದಿಗೆ ವಾಪಸ್ ಆಗುವಂತೆ ಕೆಂಪುಸೇನೆಗೆ ಆದೇಶ ನೀಡಿದ್ದರು. ಆ ಬಳಿಕವಷ್ಟೇ ಚೀನಾ ಸೈನಿಕರು ಭಾರತೀಯ ಗಡಿಯಲ್ಲಿ ಹೂಡಿದ್ದ ಬಿಡಾರಗಳನ್ನು ತೆರವುಗೊಳಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT