ಸಾಂದರ್ಭಿಕ ಚಿತ್ರ 
ದೇಶ

ಸರ್ಕಾರಿ ಆಸ್ಪತ್ರೆಗಳಲ್ಲಿ ನಿವೃತ್ತ ವೈದ್ಯರ ಸೇವೆಗೂ ಅವಕಾಶ

ಸರ್ಕಾರಿ ವೈದ್ಯರ ಕೊರತೆ ನೀಗಿಸಲು ನಿವೃತ್ತ ವೈದ್ಯರ...

ಮಂಗಳೂರು: ಸರ್ಕಾರಿ ವೈದ್ಯರ ಕೊರತೆ ನೀಗಿಸಲು ನಿವೃತ್ತ ವೈದ್ಯರ ನೇಮಕಕ್ಕೆ ಆದೇಶ ಹೊರಡಿಸಲಾಗಿದೆ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.

65 ವರ್ಷದೊಳಗಿನ ತಜ್ಞ ವೈದ್ಯರನ್ನು ಗುತ್ತಿಗೆ ಆಧಾರದಲ್ಲಿ ನೇಮಕ ಮಾಡಿಕೊಳ್ಳಲಾಗುವುದು. ಈ ರೀತಿ ನೇಮಕವಾದ ವೈದ್ಯರು 3 ವರ್ಷಗಳ ಅವಧಿಗೆ ಸೇವೆಯನ್ನು ನೀಡಬಹುದು. ಖಾಸಗಿ ವೈದ್ಯರಿಗೂ ಮಾಸಿಕ, ದಿನ ವಹಿ ಗುತ್ತಿಗೆ ಆಧಾರದಲ್ಲಿ ವೈದ್ಯಕೀಯ ಸೇವೆ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಅರವಳಿಕೆ ತಜ್ಞರು ಪ್ರತಿ ಶಸ್ತ್ರ ಚಿಕಿತ್ಸೆ ಲೆಕ್ಕದಲ್ಲಿ ಸೇವೆ ನೀಡಲು ಮುಂದೆ ಬಂದಿದ್ದಾರೆ. ರಾಜ್ಯದಲ್ಲಿ ರೇಡಿಯಾಲಜಿಸ್ಟ್‌ಗಳ ಕೊರತೆ ಇದೆ. ಆದ್ದರಿಂದ ಸ್ಕ್ಯಾನ್ ಇತ್ಯಾದಿ ತಾಂತ್ರಿಕ ಸಹಾಯಕರಿಗೆ ತರಬೇತಿ ನೀಡಲಾಗುವುದು. ರಾಜ್ಯದಲ್ಲಿ ರೇಡಿಯಾಲಜಿಸ್ಟ್‌ಗಳನ್ನು ವಲಯವಾರು ಗುರುತಿಸಿ ಅವರ ಸೇವೆಯನ್ನು ಅಂತರ್ಜಾಸಲ ಮೂಲಕ (ಟೆಲಿ ಸರ್ವಿಸ್) ಪಡೆಯಲಾಗುವುದು ಎಂದರು.

ಶಾಸಕರಿಗೂ ಅವಕಾಶ


ರಾಜ್ಯದಲ್ಲಿ ವೈದ್ಯರಾಗಿರುವ ಶಾಸಕರೂ ಕೂಡ ಸರ್ಕಾರಿ ವೈದ್ಯರಾಗಿ ಸೇವೆ ಸಲ್ಲಿಸಲು ಅವಕಾಶ ಕೋರಿದ್ದಾರೆ. ಒಟ್ಟು 9 ವೈದ್ಯ ಶಾಸಕರಿದ್ದಾರೆ. ಆಸಕ್ತರಿಗೆ ಅವರ ವ್ಯಾಪ್ತಿಯ ಆರೋಗ್ಯ ಕೇಂದ್ರ, ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುವ ಅವಕಾಶ ನೀಡಲಾಗುವುದು ಎಂದರು.

108ತ್ತೆ 198 ಸೇರ್ಪಡೆ


ರಾಜ್ಯಕ್ಕೆ 108 ಆರೋಗ್ಯ ಕವಚಕ್ಕೆ ಹೊಸದಾಗಿ ಸೇರ್ಪಡೆಗೊಂಡ 198 ಆ್ಯಂಬುಲೆನ್ಸ್‌ಗಳನ್ನು ನ.25ರಂದು ಬೆಂಗಳೂರಿನ ವಿಧಾನಸೌಧದಲ್ಲಿ ಲೋಕಾರ್ಪಣೆ ಮಾಡಲಾಗುವುದು. ಇದರಲ್ಲಿ 98 ಆ್ಯಂಬುಲೆನ್ಸ್‌ಗಳು ರಾಜ್ಯ ಬಜೆಟ್ ಮಂಡನೆಯಿಂದ ಅನುದಾನ ನೀಡಲಾಗಿದೆ ಎಂದು ಸಚಿವ ಖಾದರ್ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

Tamil Nadu: ನಟ-ರಾಜಕಾರಣಿ ದಳಪತಿ ವಿಜಯ್ ಬೌನ್ಸರ್ ಗಳಿಂದ ವ್ಯಕ್ತಿಯ ಮೇಲೆ ಹಲ್ಲೆ ಆರೋಪ! ಕೇಸ್ ದಾಖಲು, ವಿಡಿಯೋದಲ್ಲಿ ಏನಿದೆ?

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

SCROLL FOR NEXT