ಅಮೆರಿಕಾದ ಲಾಸ್ ಏಂಜಲ್ಸ್‌ನಲ್ಲಿ ಪ್ರತಿಭಟನೆ 
ದೇಶ

ಕಪ್ಪುವರ್ಣೀಯ ಯುವಕನ ಹತ್ಯೆ: ಅಮೆರಿಕದಲ್ಲಿ ಪ್ರತಿಭಟನೆ

ಭದ್ರತಾ ಅಧಿಕಾರಿ ಡಾರೆನ್ ವಿಲ್ಸನ್ ಕಪ್ಪುವರ್ಣೀಯ...

ಫರ್ಗುಸನ್: ಭದ್ರತಾ ಅಧಿಕಾರಿ ಡಾರೆನ್ ವಿಲ್ಸನ್ ಕಪ್ಪುವರ್ಣೀಯ ಯುವಕನೊಬ್ಬನನ್ನು ಗುಂಡಿಕ್ಕಿ ಕೊಂದ ಘಟನೆಗೆ ಸಂಬಂಧಿಸಿದಂತೆ ಭದ್ರತಾ ಅಧಿಕಾರಿ ಪರವಾಗಿ ತೀರ್ಪು ಬಂದಿದ್ದು ಇದನ್ನು ವಿರೋಧಿಸಿ ಸಾರ್ವಜನಿಕರು ಅಮೆರಿಕಾದ ಲಾಸ್ ಏಂಜಲ್ಸ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ಕೈಗೊಂಡಿದ್ದ ನ್ಯಾಯಾಧೀಶ ಬಾಬ್ ಮೈಕ್ ಅವರು ನಿನ್ನೆ ತೀರ್ಪು ಪ್ರಕಟಿಸಿದ್ದರು. ಡಾರೆನ್ ವಿಲ್ಸನ್‌ನ ಯಾವುದೇ ತಪ್ಪು ಮಾಡಿಲ್ಲ ಆದ ಕಾರಣ ಅವರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ ಎಂದು ತೀರ್ಪು ಪ್ರಕಟವಾಗಿತ್ತು. ಇದನ್ನು ವಿರೋಧಿಸಿ ಸಾರ್ವಜನಿಕರು ರಸ್ತೆಗಿಳಿದು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.

ಡಾರನ್ ವಿಲ್ಸನ್ ಪರ ವಾದ ಮಂಡಿಸಿದ್ದ ವಕೀಲರು, ನನ್ನ ಕಕ್ಷಿದಾರ ಅವರಿಗೆ ನೀಡಿದ್ದ ತರಬೇತಿಯಂತೆ ಹಾಗೂ ಕಾನೂನಿನಂತೆ ನಡೆದುಕೊಂಡಿದ್ದಾರೆ ಎಂದು ವಾದಿಸಿದ್ದರು.

ಏನಿದು ಪ್ರಕರಣ?...

ಇದೇ ವರ್ಷ ಆಗಸ್ಟ್ 9 ರಂದು ಭದ್ರತಾ ಅಧಿಕಾರಿಯೊಬ್ಬ 18 ವರ್ಷದ ಕಪ್ಪು ವರ್ಣೀಯ ಯುವಕನೊಬ್ಬನಿಗೆ ನಿರಂತರವಾಗಿ ಗುಂಡಿನ ಮಳೆಗೆರೆದು ಹತ್ಯೆ ಮಾಡಿದ್ದನು. ಈ ಘಟನೆ ದೇಶದಾದ್ಯಂತ ಭಾರೀ ಸುದ್ದಿ ಮಾಡಿದ್ದು, ಅಧಿಕಾರಿಯ ಈ ವರ್ತನೆ ವಿರೋಧಿಸಿ ಅಮೆರಿಕದ ಕಪ್ಪು ವರ್ಣಿಯರು ಬೃಹತ್ ಪ್ರತಿಭಟನೆ ನಡೆಸಿದ್ದರು.

ಅಂದು ನಡೆದ ಬೃಹತ್ ಪ್ರತಿಭಟನೆ ಭದ್ರತಾ ಸಿಬ್ಬಂದಿ ಹಾಗೂ ಪ್ರತಿಭಟನಾಕಾರರ ಮಧ್ಯೆ ಕಲ್ಲು ತೂರಾಟಕ್ಕೆ ಕಾರಣವಾಗಿತ್ತು. ಈ ವೇಳೆ ಪ್ರತಿಭಟನಾಕಾರರ ಮೇಲೆ ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದರು. ತದನಂತರ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಪ್ರತಿಭಟನೆಯನ್ನು ಹತ್ತಿಕ್ಕಲು ರಾಷ್ಟ್ರೀಯ ಭದ್ರತಾ ಸಿಬ್ಬಂದಿ ಆಗಮಿಸಿದ್ದರಾದರೂ ಉದ್ರಿಕ್ತರತ್ತ ತೆರಳಲು ಭದ್ರತಾ ಸಿಬ್ಬಂದಿಗಳು ಹಿಂಜರಿದಿದ್ದು, ಕರ್ಫ್ಯೂ ವಿಧಿಸಲಾಗಿತ್ತು.

ಪ್ರಕರಣಕ್ಕೆ ಸಂಬಂಧಿಸಿದಂತೆ ಭದ್ರತಾ ಅಧಿಕಾರಿಯ ವಿರುದ್ಧ ನ್ಯಾಯದರ್ಶಿ ಮಂಡಳಿಯಿಂದ ವಿಚಾರಣೆ ಆರಂಭಗೊಂಡಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT