ಐಎನ್‌ಎಸ್ ಸಿಂಧುರತ್ನ ಜಲಾಂತಗಾರ್ಮಿ ಯುದ್ದ ನೌಕೆ 
ದೇಶ

ಸಿಂಧುರತ್ನ ಜಲಾಂತರ್ಗಾಮಿ ಅಪಘಾತ ಪ್ರಕರಣ: 7 ಮಂದಿ ಅಧಿಕಾರಿಗಳೇ ಕಾರಣ

ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿಯೇ ಈ ದುರ್ಘಟನೆ ಸಂಭವಿಸಿದೆ...

ನವದೆಹಲಿ: ಐಎನ್‌ಎಸ್ ಸಿಂಧುರತ್ನ ಜಲಾಂತಗಾರ್ಮಿ ಯುದ್ದ ನೌಕೆ ದುರ್ಘಟನೆಗೆ 7 ಮಂದಿ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ವಿಚಾರಣೆ ವೇಳೆ ತಿಳಿದುಬಂದಿದ್ದು, ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಲಾಗಿದೆ ಎಂದು ಕೇಂದ್ರ ರಕ್ಷಣಾ ಸಚಿವ ಮನೋಹರ್ ಪಾರಿಕ್ಕರ್ ತಿಳಿಸಿದ್ದಾರೆ.

ದುರ್ಘಟನೆಗೆ ಕಾರಣರಾದ ಅಧಿಕಾರಿಗಳ ವಿರುದ್ಧ ವಿಚಾರಣೆ ನಡೆಸಲು ಆದೇಶ ಹೊರಡಿಸಲಾಗಿದೆ ಎಂದು ಅವರು ರಾಜ್ಯಸಭೆಯಲ್ಲಿ ಸ್ಪಷ್ಪನೆ ನೀಡಿದ್ದಾರೆ.

ಐಎನ್‌ಎಸ್ ಸಿಂಧುರತ್ನ ಜಲಾಂರ್ಗಾಮಿ ನೌಕೆ ದುರ್ಘಟನೆ ಸಂಬಂಧ ವಿಚಾರಣೆ ನಡೆಸಿದ ತಂಡ, ಯುದ್ದ ನೌಕೆ ಅವಘಡಕ್ಕೆ 7 ಮಂದಿ ಅಧಿಕಾರಿಗಳೇ ಮೂಲ ಕಾರಣ ಎಂದು ವಿಚಾರಣಾ ತಂಡ ಮಾಹಿತಿ ನೀಡಿದ್ದು, ಈ ಕುರಿತು ಅವರ ವಿರುದ್ಧ ವಿಚಾರಣೆ ನಡೆಸಲು ಆದೇಶ ಹೊರಡಿಸಲಾಗಿದೆ.

ಈ 7 ಮಂದಿ ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಅಜಾಗರೂಕತೆಯಿಂದಾಗಿಯೇ ಈ ದುರ್ಘಟನೆ ಸಂಭವಿಸಿದೆ ಎಂದು ವಿಚಾರಣಾ ತಂಡ ತಿಳಿಸಿದೆ.

ಈ ಅಧಿಕಾರಿಗಳ ವಿರುದ್ದ ನೌಕಾ ಪಡೆ ಕ್ರಮ ಕೈಗೊಂಡಿದೆ. ವಿಚಾರಣೆ ಇನ್ನೂ ಪೂರ್ಣಗೊಳ್ಳದಿದ್ದು, ತನಿಖೆ ಮುಂದುವರೆದಿದೆ ಎಂದು ಅವರು ವಿವರಣೆ ನೀಡಿದರು.

ಕಳೆದ 2013ರ ಆಗಸ್ಟ್‌ನಲ್ಲಿ ಐಎನ್‌ಎಸ್ ಸಿಂಧುರಕ್ಷಾ ಯುದ್ದ ನೌಕೆಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಪರಿಣಾಮ ನೌಕೆಯಲ್ಲಿದ್ದ 18 ಮಂದಿ ಸಿಬ್ಬಿಂದಿ ಸಾವನ್ನಪ್ಪಿದ್ದರು. ಅದೇ ರೀತಿ ಕಳೆದ ಫೆಬ್ರವರಿ 26 ರಂದು ಐಎನ್‌ಎಸ್ ಸಿಂಧುರತ್ನ ಹಡಗಿನಲ್ಲಿ ಸಂಭವಿಸಿದ ಅಗ್ನಿ ಅವಘಡಕ್ಕೆ ಇಬ್ಬರು ಸಿಬ್ಬಂಧಿ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT