ರಾಜ್ ನಾಥ್ ಸಿಂಗ್ 
ದೇಶ

26/11 ತನಿಖೆ; ಪಾಕ್ ಮುತುವರ್ಜಿ ವಹಿಸಬೇಕಿದೆ: ರಾಜ್ ನಾಥ್

26 ನವೆಂಬರ್ 2008 ಮುಂಬೈ ಉಗ್ರ ದಾಳಿಯ 6ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವ...

ಮುಂಬೈ: 26 ನವೆಂಬರ್ 2008 ಮುಂಬೈ ಉಗ್ರ ದಾಳಿಯ 6ನೇ ವಾರ್ಷಿಕೋತ್ಸವದ ಸಂದರ್ಭದಲ್ಲಿ ಮಾತನಾಡಿದ ಗೃಹ ಸಚಿವ ರಾಜ್ ನಾಥ್ ಸಿಂಗ್, ಪ್ರಸ್ತುತ ಪ್ರಕರಣದ ಬಗ್ಗೆ ಪಾಕ್ನಲ್ಲಿ ತನಿಖೆ ನಿಧಾನಗತಿಯಲ್ಲಿದೆ ಎಂದು ಹೇಳಿದ್ದಾರೆ.

ಉಗ್ರರ ದಾಳಿಯಲ್ಲಿ ಮಡಿದ ಯೋಧರಿಗೆ ಶ್ರದ್ಧಾಂಜಲಿ ಅರ್ಪಿಸಿದ ರಾಜ್ ನಾಥ್ , ಪಾಕ್ ಈ ವಿಷಯದ ಬಗ್ಗೆ ಮುತುವರ್ಜಿ ವಹಿಸಬೇಕೆಂದು ಹೇಳಿದ್ದಾರೆ.

ಮುಂಬೈ ದಾಳಿಯ ತನಿಖೆ ಪಾಕ್ನಲ್ಲಿ ನಿಧಾನಗತಿಯಲ್ಲಿ ಸಾಗುತ್ತಿದ್ದು, ದಾಳಿಯ ಹಿಂದಿರುವ ವ್ಯಕ್ತಿಗಳನ್ನು ಆದಷ್ಟು ಬೇಗ ಶಿಕ್ಷೆಗೊಳಪಡಿಸಬೇಕಾಗಿದೆ ಎಂದು ಸಚಿವರು ಹೇಳಿದ್ದಾರೆ.

6 ವರ್ಷಗಳ ಹಿಂದೆ ಇದೇ ದಿನದಂದು ಮುಂಬೈನಲ್ಲಿ ಲಷ್ಕರೆ ತೊಯ್ಬಾ ಉಗ್ರರು ದಾಳಿ ನಡೆಸಿದ್ದು, 166 ಮಂದಿಯನ್ನು ಹತ್ಯೆಗೈದಿದ್ದರು.

ಈ ದಾಳಿಯಲ್ಲಿ ಉಗ್ರ ಅಜ್ಮಲ್ ಕಸಬ್ ಮಾತ್ರ ಸೆರೆ ಸಿಕ್ಕಿಬಿದ್ದಿದ್ದ. ಈತನನ್ನು 2012ರಲ್ಲಿ ಗಲ್ಲಿಗೇರಿಸಲಾಯಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT